ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

Date:

  • ಅಣ್ಣಪ್ಪ ಬೆಟ್ಟದ ಬಳಿ ಸೇರಿದ್ದ ಸಾವಿರಾರು ಮಂದಿ; ಬಿಗಿ ಪೊಲೀಸ್ ಬಂದೋಬಸ್ತ್
  • ಆರೋಪ ಹೊತ್ತ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಭಾಗಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ಬಂದ ಬಳಿಕ ನೈಜ ಅಪರಾಧಿಗಳ ಪತ್ತೆಗೆ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ, ಈ ನಡುವೆ ಒಂದೊಂದು ಬೆಳವಣಿಗೆ ನಡೆಯುತ್ತಿದೆ.

ಹನ್ನೊಂದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಇದೀಗ ಮಂಜುನಾಥನ ಸನ್ನಿಧಿಯಲ್ಲಿರುವ ಅಣ್ಣಪ್ಪನ ಬೆಟ್ಟದವರೆಗೆ ತಲುಪಿದೆ.

ಇಂದು(ಭಾನುವಾರ) ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದರಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಆ ಬಳಿಕ ಪಾದಯಾತ್ರೆಯು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗಕ್ಕೆ ತಲುಪಿತು. ಇದೇ ವೇಳೆ ಆರೋಪ ಹೊತ್ತವರು ಕೂಡ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 08 27 at 1.35.40 PM

ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಕಣ್ಣೀರಿಟ್ಟ ಸೌಜನ್ಯ ತಾಯಿ ಕುಸುಮಾವತಿ, ಕಾಣಿಕೆ ಹಾಕಿ ಪ್ರಾರ್ಥನೆ ಸಲ್ಲಿಸಿದರು. ವಿಹಿಂಪ, ಬಜರಂಗದಳ ಮುಖಂಡರ ಜೊತೆಗೂಡಿ ನೈಜ ಆರೋಪಿಗಳ ಪತ್ತೆ ಮಾಡಿಕೊಡುವಂತೆ ಬೇಡಿಕೊಂಡರು. ಕುಸುಮಾವತಿ ಪ್ರಾರ್ಥನೆಯ ಬಳಿಕ ಸೌಜನ್ಯ ತಾಯಿ ಆರೋಪಿಸಿದವರು ಕೂಡ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ.

ಆರೋಪ ಹೊತ್ತಿರುವ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಕೆಲ್ಲ ಕೂಡ ಬೆಟ್ಟದ ಮುಂಭಾಗ ಬಂದು, ಆಣೆ ಪ್ರಮಾಣದ ಬದಲಾಗಿ ಪ್ರಾರ್ಥನೆ ಸಲ್ಲಿಸಿದರು.

WhatsApp Image 2023 08 27 at 1.20.01 PM

ಕೈ ಮುಗಿದುಕೊಂಡು ಹೇಳಿಕೆ ನೀಡಿದ ಧೀರಜ್ ಜೈನ್, ‘ಧರ್ಮಸ್ಥಳ ಕ್ಷೇತ್ರದ ಪರಿಸರದಲ್ಲಿ ಒಂದು ಮರಣ ಸಂಭವಿಸಿದೆ. ಈ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ನಿರ್ದೋಷಿಗಳೆಂದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ನಮಗೂ ಕುಟುಂಬ, ಬಂಧುವರ್ಗವಿದೆ. ಆದರೆ ವಿನಾಕಾರಣ ನಮ್ಮ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು. ನಾವು ಯಾವುದೇ ತಪ್ಪು ಮಾಡಿಲ್ಲ.ನಮ್ಮ ಮೇಲೆ ಆರೋಪ ಮಾಡುವವರಿಗೆ ದೇವರು ಸರಿಯಾದ ಶಿಕ್ಷೆ ನೀಡಲಿ’ ಎಂದು ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಸಾವಿರಾರು ಜನರು ಜಮಾಯಿಸಿದ್ದರಿಂದ ಬೆಟ್ಟದ ಮುಂಭಾಗ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್‌ ಅವರೇ ಮೇಲುಸ್ತುವಾರಿ ನೋಡಿಕೊಂಡಿದ್ದರು. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಕ್ರಮ ವಹಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...