ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಕೋರಿದ್ದ ಪಿಐಎಲ್‌ ವಜಾ

Date:

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯಾ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಮರು ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಅನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣವನ್ನು ಹೊಸದಾಗಿ ಮರು ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದವು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

“2012ರಲ್ಲಿ ವಿದ್ಯಾರ್ಥಿನಿ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂಬ ಕಾರಣದಿಂದ ಆತನನ್ನು ಖುಲಾಸೆಗೊಳಿಸಲಾಗಿದೆ. ಅಲ್ಲದೆ, ಪ್ರಕರಣ ನಡದಿರುವುದು ನಿಜವೆಂದು ಸಿಬಿಐ ವಿಶೇಷ ನ್ಯಾಯಾಲಯ ಹೇಳಿದೆ. ಕೃತ್ಯ ನಡೆದಿದ್ದ ಮೇಲೆ, ಅಪರಾಧಿಯೂ ಇರಲೇಬೇಕು. ನೈಜ ಅಪರಾಧಿಗಳು ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ. ಅವರನ್ನು ಗುರುತಿಸಿ, ವಿಚಾರಣೆ ನಡೆಸಿ, ಶಿಕ್ಷೆಗೊಳಪಡಿಸಬೇಕು. ಪ್ರಕರಣದಲ್ಲಿ ತನಿಖಾಧಿಕಾರಿಗಳು ಮತ್ತು ವೈದ್ಯರಿಂದಲೂ ದೋಷಗಳಾಗಿವೆ. ಹಾಗಾಗಿ, ಪ್ರಕರಣವನ್ನು ಮರು ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸಬೇಕು” ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಆಲಿಸಿದ ನ್ಯಾಯಪೀಠ, “ಸಭೆ-ಸಮಾರಂಭ, ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಆಗಿದ್ದರೂ ಪಿಐಎಲ್‌ಅನ್ನು ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ. ಅದಕ್ಕಾಗಿ, ಅರ್ಜಿದಾರರು ತಮ್ಮ ಅರ್ಜಿ ಹಿಂಪಡೆದು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು” ಎಂದು ಹೇಳಿದೆ.

ಅಲ್ಲದೆ, “ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಕೂಡ ಪರಿಗಣಿಸಬಹುದಾಗಿದೆ. ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ಅರ್ಜಿದಾರರು ನೆರವು ನೀಡಬಹುದು” ಎಂದು ಹೇಳಿದೆ. ಅರ್ಜಿಯನ್ನು ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...