ದಕ್ಷಿಣ ಭಾರತದ ಕರಾಟೆ ಚಾಂಪಿಯನ್‌ ಶಿಪ್‌; ಮಂಡ್ಯ ಕರಾಟೆ ಪಟುಗಳಿಗೆ ಬಹುಮಾನ

Date:

ಚನೈ ನಗರದ ಜಯಲಲಿತಾ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ 4ನೇ ದಕ್ಷಿಣ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್ -2024ರಲ್ಲಿ ಸ್ಪರ್ಧಿಸಿದ್ದ ಮಂಡ್ಯದ ಗೋಜುರಿಯೋ ಕರಾಟೆ ಡೊ ಅಕಾಡೆಮಿ ಇಂಡಿಯಾ ಹಾಗೂ ವಿಷ್ಣು ಲಯನ್ಸ್ ಮಾರ್ಷಲ್ ಆರ್ಟ್ಸ್ ಕರಾಟೆ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದು ಕೀರ್ತಿ ತಂದಿದ್ದಾರೆ.

ವಿವಿಧ ವಯೋಮಿತಿ ಹಾಗೂ ತೂಕದ ವಿಭಾಗಗಳಲ್ಲಿ ಹಲವು ಬಹುಮಾನಗಳನ್ನು ಪಡೆದಿರುವ ಕರಾಟೆ ಪಟುಗಳನ್ನು ಸಂಸ್ಥೆಯ ಮುಖ್ಯಸ್ಥ ಲೋಕೇಶ್ ಮೊದಲಿಯಾರ್ ಅಭಿನಂದಿಸದ್ದಾರೆ.

ಕಟ ಹಾಗೂ ಕುಮುತೇ ವಿಭಾಗದ 10 ವರ್ಷದ ವಿಭಾಗದಲ್ಲಿ ಎಸ್ ಲಕ್ಷಿತ್‌ಗೌಡ ತೃತೀಯ ಸ್ಥಾನ, 11 ವರ್ಷದ ವಿಭಾಗದಲ್ಲಿ ಪೃಥ್ವಿ ಎಂ ಎಸ್ ಕಟ-ದ್ವಿತೀಯ ಹಾಗೂ ಕುಮುತೇ-ತೃತೀಯ ಸ್ಥಾನ ಪಡೆದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರ್ಯನ್ ಕಟ-ಕುಮುತೇ ವಿಭಾಗದಲ್ಲಿ ತೃತೀಯ ಸ್ಥಾನ, ಮನ್ವಿತ್ ಎಸ್ ಕುಮಾರ್ 13 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಕಟ ಹಾಗೂ ಕುಮತೆಯಲ್ಲೂ ಪ್ರಥಮ ಸ್ಥಾನ, 14 ವರ್ಷದೊಳಗಿನ ಕಲರ್ ಬೆಲ್ಟ್ ವಿಭಾಗದಲ್ಲಿ ರಂಜನ್ ಗೌಡ ಕಟ ಹಾಗೂ ಕುಮುತೇ ಎರಡು ವಿಭಾಗಗಳಲ್ಲೂ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15ವರ್ಷ ಮೇಲ್ಪಟ್ಟ ಬಾಲಕರ ವಿಭಾಗದಲ್ಲಿ ನೂತನ್ ದ್ವಿತೀಯ ಸ್ಥಾನ, 13 ವರ್ಷ ಮೇಲ್ಪಟ್ಟ ಬ್ಲ್ಯಾಕ್ ಬೆಲ್ಟ್ ವಿಭಾಗದಲ್ಲಿ ವಿಷ್ಣು ಮೊದಲಿಯಾರ್ ಕಟ ದ್ವಿತೀಯ ಹಾಗೂ ಕುಮುತೇ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ ಸುಮಾರು 450 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಂದ್ಯಾವಳಿಯಲ್ಲಿ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ರೀತಿಯ ಪ್ರದರ್ಶನ ನೀಡಿ ಹಲವು ಬಹುಮಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಕರಾಟೆ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಖ್ಯ ತರಬೇತುದಾರ ಲೋಕೇಶ್ ಮೊದಲಿಯಾರ್ ತಿಳಿಸಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅ. 13ಕ್ಕೆ ರಡ್ಡಿ ಬ್ಯಾಂಕ್ ಶತಮಾನೋತ್ಸವ: ಸಿಎಂ ಸೇರಿ ರಾಜ್ಯದ ಶಾಸಕ, ಸಚಿವರ ದಂಡು ಬರಲಿದೆ

ಸ್ಪರ್ಧೆಯ ಕೋಚ್‌ ಆಗಿ ವಿಷ್ಣು ಹಾಗೂ ಮ್ಯಾನೇಜರಾಗಿ ನೂತನ್ ಎಂ ಆರ್ ಕಾರ್ಯ ನಿರ್ವಹಿಸಿ ತಂಡದ ಯಶಸ್ಸಿಗೆ ಶ್ರಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...