ಚಲಿಸುತ್ತಿರುವ ರೈಲುಗಳಿಗೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ ನೈರುತ್ಯ ರೈಲ್ವೆ

Date:

ಚಲಿಸುತ್ತಿರುವ ರೈಲುಗಳ ಮೇಲೆ ಕಲ್ಲು ತೂರಾಟ, ರೈಲುಗಳು ಹಾಗೂ ರೈಲ್ವೆ ಆವರಣಗಳಲ್ಲಿ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ ಅ.30 ರಿಂದ ಒಂದು ತಿಂಗಳ ಅವಧಿಯ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ ಇಲಾಖೆ, “ಈ ಕಾರ್ಯಾಚರಣೆಯ ಸಲುವಾಗಿ ರೈಲ್ವೆ ಸಂರಕ್ಷಣಾ ಪಡೆ (ರೈಲ್ವೆ ಸಂರಕ್ಷಣಾ ಪಡೆ) ರೈಲ್ವೆ ಮಂಡಳಿ, ನವದೆಹಲಿಯ ಮಹಾನಿರ್ದೇಶಕ ಮನೋಜ್ ಯಾದವ ಅವರ ಸೂಚನೆಯಂತೆ ಬೆಂಗಳೂರು ವಿಭಾಗದ ಆರ್‌ಪಿಎಫ್ ಅಧಿಕಾರಿಗಳು ಮತ್ತು ವಿಭಾಗದ ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ” ಎಂದು ಹೇಳಿದೆ.

“ಜತೆಗೆ, ರೈಲು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಅವರ ಮಾರ್ಗದರ್ಶನದಲ್ಲಿ ಈ ತಂಡವು ಬೀದಿ ನಾಟಕಗಳು ಅಲ್ಲದೆ ಜಾಗೃತಿ ಮೂಡಿಸುವಂತಹ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ” ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನಾ ರೈಲು ನಿಲ್ದಾಣಗಳಲ್ಲಿ ಮತ್ತು ರೈಲು ಹಳಿಗಳ ಬಳಿ ಕಲ್ಲು ತೂರಾಟದ ಘಟನೆಗಳು ವರದಿಯಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅ.30 ರಂದು ‘ಕೃಷ್ಣದೇವರಾಯ’ ಹಾಲ್ಟ್ ರೈಲು ನಿಲ್ದಾಣದ ಬಳಿ “ಬೀದಿ ನಾಟಕ” ನಡೆಸುವ ಮೂಲಕ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ರೈಲ್ವೇ ಕಾಯಿದೆ 1989 ರ ಸೆಕ್ಷನ್ – 153 ಮತ್ತು 154 ರ ಅಡಿಯಲ್ಲಿ ದಂಡ ಅಥವಾ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದು. ರೈಲು ಪ್ರಯಾಣದ ಸಮಯದಲ್ಲಿ ದಹನಕಾರಿ ವಸ್ತುಗಳನ್ನು ಒಯ್ಯುವುದು ಶಿಕ್ಷಾರ್ಹ ಅಪರಾಧವಾಗಿದೆ. 1989ರ ರೈಲ್ವೆ ಕಾಯಿದೆಯ ಸೆಕ್ಷನ್ 164ರ ಅಡಿಯಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹1000 ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...