ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

Date:

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ ಹೆಚ್ಚು ಸೋಯಾಬೀನ್ ಬೆಳೆ ಬೆಳೆಯಲಾಗತ್ತದೆ. ಆದರೆ ಈ ವರ್ಷ ಬೆಳೆದ ಬೆಳೆ ಕೀಟ ಬಾಧೆ, ಕಳಪೆ ಬೀಜ ಬಿತ್ತನೆ ಮುಖ್ಯವಾಗಿ ಅತಿಯಾದ ಮಳೆ ಕಾರಣಗಳಿಂದ ಸಂಪೂರ್ಣ ನೆಲಕಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಕಾಲಕ್ಕೆ ಸರ್ಕಾರ ಪರಿಹಾರ ನೀಡುವುದೆಂಬ ನಿರೀಕ್ಷೆಯಲ್ಲಿದ್ದಾರೆ.

ಪ್ರತಿ ವರ್ಷ ಇದೇ ಕಥೆ. ಕಳಪೆ ಬೀಜ ವಿತರಣೆ, ಪರಿಣಾಮಕಾರಿಯಲ್ಲದ ಕೀಟನಾಶಕ, ಆಡಳಿತಾತ್ಮಕ ನಿರ್ಲಕ್ಷ್ಯ. ಪ್ರಕೃತಿಯ ವಿಕೋಪದ ಜತೆಗೆ ಮಾನವ ಸೃಷ್ಟಿಸಿದ ದೋಷವೇ ಇಂದು ರೈತರ ಬದುಕನ್ನು ನಾಶ ಮಾಡುತ್ತಿದೆ. ಹೊಲದಲ್ಲಿ ರೈತನಿಗೆ ಬೆಳೆ ಸಿಗದಿದ್ದರೆ ಅದು ಕೇವಲ ಆತನ ಸಮಸ್ಯೆಯಲ್ಲ—ಇಡೀ ಸಮಾಜದ ಆಹಾರ ಭದ್ರತೆಯ ಪ್ರಶ್ನೆಯಾಗುತ್ತದೆ.

WhatsApp Image 2025 08 19 at 4.00.10 PM 1

ಬೆಳಗಾವಿ ಸುತ್ತಮುತ್ತಲ ತಾಲೂಕಿನಲ್ಲಿ ರೈತರು ಬೆಳೆದ ಸೋಯಾಬೀನ್ ಬೆಳೆಗೆ ಎಲೆಕೋ ವಾರ್ಪಾ ಆರ್ಮಿಜಿರಿ ಎಂಬ ಕೀಟದ ದಾಳಿಯು ಬೆಳೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಈ ಕಾರಣದಿಂದ ರೈತರು ತಾವು ಕಷ್ಟಪಟ್ಟು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬೆಳೆದ ಬೆಳೆಯನ್ನು ಟ್ರ್ಯಾಕ್ಟರ್ ನಿಂದ ತಾವೇ ಮುಂದೆ ನಿಂತು ನಾಶಪಡಿಸುತ್ತಿದ್ದಾರೆ. ಪ್ರತಿ ಎಕರೆಗೆ 50 ಸಾವಿರಕ್ಕಿಂತ ಹೆಚ್ಚು ಖರ್ಚು ಮಾಡಿದ್ದಾರೆ. ಆದರೆ ಬೆಳೆ ಸರಿಯಾಗಿ ಬಾರದೆ ನಾಶಪಡಿಸುವ ದುಸ್ಥಿತಿ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸೋಯಾಬೀನ್ ಬೆಳೆಗಾರರಾದ ರೈತ ಅಶೋಕ ಮಾತನಾಡಿ, “ನಾವು ಸಾಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸೋಯಾಬೀನ್ ಬೆಳೆದಿದ್ದೆವು. ವಿಪರೀತ ಮಳೆ, ಕೀಟ ಬಾಧೆಯಿಂದ ಬೇಳೆ ನಾಶವಾಗಿದೆ. ಬೆಳೆದ ಬೆಳೆಯನ್ನು ಕೀಟಗಳ ಕಾರಣದಿಂದ ನಾಶಪಡಿಸಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ ಸರ್ಕಾರವು ಬೆಳೆ ಪರಿಹಾರ ನೀಡಿ ರೈತರ ನೆರವಿಗೆ ಬರಬೇಕು” ಎಂದು ಮನವಿ ಮಾಡಿದ್ದಾರೆ.

ರೈತ ಸಂಘಟನೆಯ ಮುಖಂಡ ಬೀರಪ್ಪ ಮಾತನಾಡಿ, “ಬೈಲಹೊಂಗಲ ಮತ್ತು ಕಿತ್ತೂರು ತಾಲೂಕಿನಲ್ಲಿ 45 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಸೋಯಾಬೀನ್ ಬಿತ್ತನೆ ಮಾಡಲಾಗಿದೆ. ಆದರೆ‌, ರೈತರಿಗೆ ನೀಡಿದ್ದ ಕಳಪೆ ಬಿತ್ತನೆ ಬೀಜ ಇಂದು ಬೆಳೆ ನಾಶಕ್ಕೆ ಕಾರಣವಾಗಿದೆ. ಅಲ್ಲದೆ ಕೀಟ ಬಾಧೆಯಿಂದ ನಾಶವಾಗಿದೆ. ಈ ವಿಚಾರವಾಗಿ ಬೈಲಹೊಂಗಲ ಪಟ್ಟಣದಲ್ಲಿ ಪ್ರತಿಭಟನೆ ಮಾಡಿ ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿಯವರು ಈ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದು ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರವು ಆದಷ್ಟು ಬೇಗ ರೈತರಿಗೆ ಪರಿಹಾರ ನೀಡಬೇಕು ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಅತಿವೃಷ್ಟಿಯ ಕಾರಣ ಸೋಯಾಬೀನ್ ಕೀಟ ದಾಳಿಗೆ ತುತ್ತಾಗಿದೆ ಹೊರತು ಕಳಪೆ ಬೀಜ ಕಾರಣವಲ್ಲ. ಮಳೆ ಇನ್ನಷ್ಟು ದಿನ ಮುಂದುವರೆದರೆ ತುಕ್ಕು ರೋಗ ಕಾಣಿಸಿಕೊಳ್ಳಬಹುದು. ರೈತರ ನೆರವಿಗೆ ಇಲಾಖೆಯಿಂದ 17 ತಂಡಗಳನ್ನು ರಚಿಸಿ 42 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ್ದೇವೆ. ಅಧಿಕಾರಿಗಳ ಜತೆಗೆ ಕೀಟ ತಜ್ಞರು ಕೃಷಿ ವಿಜ್ಞಾನಿಗಳೂ ಇದ್ದಾರೆ. ಹಾನಿ ಅನುಭವಿಸಿದ ರೈತರಿಗೆ ಬೆಳೆ ವಿಮೆ ಮಾಡಿಸಲಾಗುವುದು. ವಿಮೆಗೆ ಆಗಸ್ಟ್ 30 ಕೊನೆಯ ದಿನವಾಗಿದ್ದು ಸೆಪ್ಟೆಂಬರ್‌ವರೆಗೂ ದಿನಾಂಕ ವಿಸ್ತರಣೆ ಮಾಡಲಾಗುವುದು. ವಿಜ್ಞಾನಿಗಳ ವರದಿ ಬಂದ ಮೇಲೆ ಹಾನಿಗೆ ಕಾರಣ ಗೊತ್ತಾಗಲಿದೆ” ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

WhatsApp Image 2025 08 19 at 4.51.44 PM

ಸೋಯಾಬೀನ್ ಬೆಳೆದ ರೈತರ ಸಮಸ್ಯೆ ಕೇವಲ ಬೆಳಗಾವಿಯ ಜಿಲ್ಲೆಯ ಸಮಸ್ಯೆಯಲ್ಲ, ಇದು ಗ್ರಾಮೀಣ ಭಾರತದ ಸತ್ಯ. ಸರ್ಕಾರ ತಕ್ಷಣ ಪರಿಹಾರ ಘೋಷಿಸಿ, ಇಲ್ಲದಿದ್ದರೆ ರೈತರ ತೋಟಗಳು ಶೂನ್ಯವಾಗುವುದಷ್ಟೇ ಅಲ್ಲ, ರೈತರ ಭವಿಷ್ಯವೂ ಬತ್ತಿಹೋಗುತ್ತದೆ. ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಖರ್ಚು ಮಾಡಿದ ರೈತನ ಕೈಗೆ ಇಂದು ಒಂದು ದವಸವೂ ಬಂದಿಲ್ಲ. ಹೊಲದಲ್ಲಿ ಬೆಳೆ ನಾಶ, ಮನೆಯಲ್ಲಿ ಸಾಲದ ಒತ್ತಡ – ಈ ಸಂಕಷ್ಟಕ್ಕೆ ಕಾರಣ ಯಾರು? ಸಂಬಂಧಪಟ್ಟ ಇಲಾಖೆ ಕೂಡಲೇ ಗಮನ ಹರಿಸಬೇಕು. ಸಂಕಷ್ಟಕ್ಕೀಡಾದ ರೈತರ ನೆರವಿಗೆ ಧಾವಿಸಬೇಕು ಎಂಬುದು ರೈತರ ಆಗ್ರಹ.

ಇದನ್ನೂ ಓದಿ: ನುಡಿಯಂಗಳ | ಅಂತರಂಗ ಬಿಚ್ಚಿಡುವ ‘ಆಂಗಿಕ ಭಾಷೆ’

ಕಳಪೆ ಬೀಜ ವಿತರಿಸಿದವರು ಯಾರು? ಪರಿಣಾಮಕಾರಿಯೇ ಅಲ್ಲದ ಕೀಟನಾಶಕವನ್ನು ರೈತನ ಕೈಗೆ ಕೊಟ್ಟವರು ಯಾರು? ಈ ಎಲ್ಲದರ ಮೇಲ್ವಿಚಾರಣೆ ಮಾಡಬೇಕಿದ್ದ ಅಧಿಕಾರಿಗಳು ಎಲ್ಲಿ ಮಲಗಿದ್ದರು? ಈ ಕುರಿತು ಸರ್ಕಾರ ನಿರ್ಲಕ್ಷ್ಯ ಮಾಡಿದ ಕಾರಣ ರೈತ ಇಂದು ಸೋಯಾಬೀನ್ ಬೆಳೆಯನ್ನು ಟ್ರ್ಯಾಕ್ಟರ್‌ನಿಂದ ನಾಶ ಮಾಡುತ್ತಿದ್ದಾನೆ. ಸರ್ಕಾರವು ಬೇಗನೆ ಈ ಕುರಿತು ಕ್ರಮ ಕೈಗೊಂಡು ಬೆಳೆ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...