ದೀಪಾವಳಿ ಹಬ್ಬಕ್ಕೆ ಎರಡು ನಗರಗಳಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು: ಯಾವ ನಗರ ಇಲ್ಲಿದೆ ನೋಡಿ?

Date:

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಸರ್‌.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. (ರೈಲು ಸಂಖ್ಯೆ 06231/06232) ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್) ಹೊರಡಲಿದೆ.

(ರೈಲು ಸಂಖ್ಯೆ 06231) ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55ಕ್ಕೆ ವಿಜಯಪುರ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲು ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೋರಣಗಲ್ಲು, ಹೊಸಪೇಟೆ, ಮುನಿರಾಬಾದ್, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರ್‌ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

(ರೈಲು ನಂ.06232) ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ವಿಜಯಪುರದಿಂದ ನವೆಂಬರ್ 14 ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ಎಸ್‌ಎಂವಿಟಿ ಬೆಂಗಳೂರಿಗೆ ಬರಲಿದೆ.

ಈ ವಿಶೇಷ ರೈಲು ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಗದಗ, ಕೊಪ್ಪಳ, ಮುನಿರಾಬಾದ್, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ ಕ್ಯಾಂಟ್, ರಾಯದುರ್ಗ, ಚಿತ್ರದುರ್ಗ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಎಸ್‌ಎಮ್‌ವಿಟಿ ಬೆಂಗಳೂರು–ಬೆಳಗಾವಿ– ಎಸ್‌ಎಮ್‌ವಿಟಿ ಬೆಂಗಳೂರು

(ರೈಲು ಸಂಖ್ಯೆ 06585) ಎಸ್‌ಎಮ್‌ವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್) ನವೆಂಬರ್ 10ರಂದು ಎಸ್‌ಎಮ್‌ವಿಟಿ ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ತೆರಳಲಿದೆ.

ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ ಮತ್ತು ಲೋಂಡಾನಲ್ಲಿ ನಿಲುಗಡೆ ಹೊಂದಲಿದೆ.

(ರೈಲು ಸಂಖ್ಯೆ 06586) ಬೆಳಗಾವಿ- ಎಸ್‌ಎಮ್‌ವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14ರಂದು ಸಂಜೆ 6:50 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಎಸ್‌ಎಮ್‌ವಿಟಿ ಬೆಂಗಳೂರಿಗೆ ಆಗಮಿಸುತ್ತದೆ.

ಲೋಂಡಾ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.

ಎರಡೂ ವಿಶೇಷ ರೈಲುಗಳು ಒಂದು ಎಸಿ-2 ಶ್ರೇಣಿ, ಮೂರು ಎಸಿ-3 ಶ್ರೇಣಿ, ಎಂಟು ಸ್ಲೀಪರ್ ವರ್ಗ, ಎರಡು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎರಡನೇ ದರ್ಜೆಯ ಲಗೇಜ್ ಕಮ್ ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ವಿಭಾಗಗಳು ಸೇರಿದಂತೆ ಒಟ್ಟು ಹದಿನಾರು ಕೋಚ್‌ಗಳನ್ನು ಒಳಗೊಂಡಿರುತ್ತವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಕೊಲೆ ಪ್ರಕರಣ; ಓರ್ವ ಪೊಲೀಸ್ ವಶಕ್ಕೆ

ಹೆಚ್ಚಿನ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸುವಿಕೆ ವಿವರಗಳಿಗಾಗಿ, ಇಲಾಖೆಯ ಅಧಿಕೃತ ವೆಬ್‌ಸೈಟ್ https://enquiry.indianrail.gov.in ಗೆ ಭೇಟಿ ನೀಡಿ ಅಥವಾ 139 ಅನ್ನು ಡಯಲ್ ಮಾಡಿ ಅಥವಾ ನಿಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...