ಬಾಗೇಪಲ್ಲಿ | ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024

Date:

ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಪ್ರಯುಕ್ತ ತಾಲೂಕಿನಾದ್ಯಂತ ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ತಿಳಿಸಿದರು.

ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲೆ ಆವರಣದಲ್ಲಿ ಮತದಾರರ ಸಾಕ್ಷರತಾ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಾ ಸರಕಾರಿ ಹಾಗೂ ಖಾಸಗಿ ಅನುದಾನಿತ ಪ್ರೌಢಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮತದಾರರ ಸಾಕ್ಷರತಾ ಸಂಘಗಳನ್ನು ಸ್ಥಾಪಿಸಿ ಎಲ್ಲಾ ವಿದ್ಯಾರ್ಥಿಗಳು ಸಂಘಕ್ಕೆ ನೋಂದಣಿಯಾಗಬೇಕು. ಈ ಸಂಘಗಳ ಸದಸ್ಯರು ಮತ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪಾಲ್ಗೊಂಡು 1950ಕ್ಕೆ ಉಚಿತ ಸಂಖ್ಯೆಗೆ ಕರೆ ಮಾಡುವ ಮೂಲಕ ಮತಪಟ್ಟಿಯ ಮಾಹಿತಿ ಪಡೆಯುವ, ಹೊಸದಾಗಿ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಮತದಾರರ ಪಟ್ಟಿ ಪರಿಶೀಲನೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಬಿಇಓ ಎನ್ ವೆಂಕಟೇಶಪ್ಪ ಮಾತನಾಡಿ, 18 ವರ್ಷ ತುಂಬಿದ ಅರ್ಹ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಲು ಅವಕಾಶವಿದೆ. ಮತಪಟ್ಟಿ ಪರಿಶೀಲನೆಗಾಗಿ ಸಾರ್ವಜನಿಕರು ಆಯಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಪ್ರಥಮವಾಗಿ ತಾವು, ನಂತರ ತಮ್ಮ ಕುಟುಂಬ, ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾಹಿತಿ ನೀಡಿ ವಿಶೇಷ ಪರಿಷ್ಕರಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪುನರ್ವಸತಿ ಕಾರ್ಯಕರ್ತರ ಪ್ರತಿಭಟನೆ

ಈ ಸಂದರ್ಭದಲ್ಲಿ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಪೈ, ಬಾಲಕರ ಕಾಲೇಜಿನ ಪ್ರಾಂಶುಪಾಲ ನಂಜಿರೆಡ್ಡಿ, ಉಮಾಶಶಿ, ಉಪನ್ಯಾಸಕರಾದ ನಾಗರಾಜ್, ವೆಂಕಟರಾಮರೆಡ್ಡಿ, ಸಂಯೋಜಕರಾದ ಶಿವಪ್ಪ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...