ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

Date:

ದೇಶದ ಅತಿದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು, ರೈತರು ಮತ್ತು ವ್ಯಾಪಾರಸ್ಥರು ಸಜ್ಜಾಗುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಸುಮಾರು 57 ಸಾವಿರ ಎಕರೆ ಭಾಗದಲ್ಲಿ ಮಾವು ಬೆಳೆಯಲಾಗುತ್ತಿದೆ. ಈ ಹಿನ್ನೆಲೆ ಶ್ರೀನಿವಾಸಪುರ ‘ಮಾವಿನ ನಾಡು’, ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ ಸ್ಥಾಪಿಸಿಕೊಂಡಿದೆ. ಇಲ್ಲಿನ ಮಾವಿಗೆ ರಾಜ್ಯದಷ್ಟೇ ಅಲ್ಲದೆ ದೇಶಾದ್ಯಂತ ಭಾರೀ ಬೇಡಿಕೆ ಉಂಟಾಗಿದೆ.

ತೋತಾಪುರಿ, ನೀಲಂ, ರಾಜಗಿರ, ಮಲಿಕಾ‌, ಬಾದಾಮಿ, ಬೇನಿಶ, ಮಲ್ಗೋಬಾ, ಖುದ್ದೂಸ್, ಶಕರ್ ಬೀಜ್, ದೇಸರಿ, ಇಮಾಮ್ ಪಸಂದ್, ಪಾಶಾ ಪಸಂದ್, ಶೇರಿ, ದಿಲ್ ಪಸಂದ್, ಖುದಾದತ್, ಕೆಸರ್, ಚಿತ್ತೋರ, ನಾಟಿ ಸೇರಿದಂತೆ ಮುಂತಾದ ಪ್ರಸಿದ್ಧ ಮಾವು ತಳಿಗಳು ಇಲ್ಲಿ ಸಸ್ಯವಾಗುತ್ತವೆ. ಇವುಗಳಲ್ಲಿ ಕೆಲವು ತಳಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಸಿದ್ಧಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಾರುಕಟ್ಟೆ 1

ಇಲ್ಲಿನ ಮಾವುಗಳು ಜಮ್ಮು-ಕಾಶ್ಮೀರ್, ಪಂಜಾಬ್, ಹರಿಯಾಣ, ರಾಜಸ್ಥಾನ್, ಗುಜರಾತ್, ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯ ಪ್ರದೇಶ, ವೆಸ್ಟ್ ಬಂಗಾಳ, ಗೋವಾ, ಕೇರಳ, ಛತ್ತೀಸ್‌ಗಢ, ಬಿಹಾರ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಇತರ ರಾಜ್ಯಗಳಿಗೆ ನಿತ್ಯ ರವಾನೆಯಾಗುತ್ತವೆ. ಬಾದಾಮಿ, ಮಲಿಕಾ‌, ಬೇನಿಶ ತಳಿಗಳ ಮಾವುಗಳು ದುಬೈ, ಸೌದಿ ಅರೇಬಿಯಾ, ಸಿಂಗಾಪುರ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿವೆ. ಅಲ್ಲದೆ ಇಲ್ಲಿನ ಮಾವಿನಿಂದ ತಯಾರಾಗುವ ಜ್ಯೂಸ್ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳಿಗೂ ವಿದೇಶಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ.

ಮಾರುಕಟ್ಟೆ

ಈ ಬಾರಿ ಮೇ 15ರಿಂದ ಮಾರುಕಟ್ಟೆ ಆರಂಭವಾಗಲಿದ್ದು, ರೈತರು ಹಾಗೂ ವ್ಯಾಪಾರಸ್ಥರಲ್ಲಿ ನೂತನ ಆಸೆಗಳು ಮೂಡಿವೆ. ಮಾರುಕಟ್ಟೆಗಳ ತಯಾರಿ ಕೆಲಸಗಳು ಪೂರ್ಣಗೊಂಡಿದ್ದು, ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿಸಲಾಗುತ್ತಿದೆ. ಪ್ರತ್ಯಕ್ಷ ಖರೀದಿದಾರರು, ಜೈವಿಕ ಉತ್ಪನ್ನ ಹಮ್ಮಿಕೊಳ್ಳುವ ವ್ಯಾಪಾರಸ್ಥರು, ತಾಜಾ ಮಾರುಕಟ್ಟೆ ವ್ಯವಸ್ಥಾಪಕರು ಎಲ್ಲರೂ ತಾವು ತಾವು ಸಜ್ಜಾಗುತ್ತಿದ್ದಾರೆ.

ಈ ಬಾರಿ ಮಾವಿಗೆ ಹವಾಮಾನ ಬೆಂಬಲವಾಗಿಲ್ಲವೋ ಎಂಬ ಅನುಮಾನವಿದ್ದರೂ, ಮಾರುಕಟ್ಟೆ ಆರಂಭವಾದ ಮೇಲೆ ಉತ್ಪಾದನೆಯ ಪೂರ್ಣ ಸ್ಥಿತಿ ಗೊತ್ತಾಗಲಿದೆ. ಕೆಲವೊಂದು ಪ್ರದೇಶಗಳಲ್ಲಿ ಫಲವತ್ತತೆ ಕಡಿಮೆಯಾಗಿದ್ದು, ಇದರಿಂದ ಬೆಲೆಗೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಮಾವು ಬೆಳಗಾರ ಬಿ ಎ ಸೈಯದ್ ಫಾರೂಕ್ ಬುರಕಾಯಲಕೋಟೆ ಹೇಳಿದ್ದಾರೆ.

ಇದನ್ನೂ ಓದಿದ್ದೀರಾ? ವಿಜಯಪುರ‌ | ಕಲ್ಲಂಗಡಿ ಹಣ್ಣು ಬೆಳೆದು ಲಕ್ಷಾಂತರ ರೂಪಾಯಿ ಆದಾಯ ಗಳಿಸಿದ ರೈತ

ಎಪಿಎಂಸಿ ಮಾರುಕಟ್ಟೆ ಮಂಡಿಗಳ ಮಾಲೀಕರು ಹಾಗೂ ಖಾಸಗಿ ಮಂಡಿಗಳವರು ಮೇ 15ರಿಂದ ಮಾರುಕಟ್ಟೆ ಆರಂಭವಾಗುತ್ತದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಜ್ಜಾಗುತ್ತಿದ್ದಾರೆ. ಈ ಬಾರಿ ಬೆಳೆಗೆ ಉತ್ತಮ ಬೆಲೆ ಸಿಗುತ್ತದೆಯೋ ಇಲ್ಲವೋ ಎಂಬುದು ಮಾರುಕಟ್ಟೆ ಚಟುವಟಿಕೆ ಪ್ರಾರಂಭವಾದ ನಂತರವೇ ಸ್ಪಷ್ಟವಾಗಲಿದೆ.

ವರದಿ : ಶಬ್ಬೀರ್ ಅಹ್ಮದ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...