ಶ್ರೀನಿವಾಸಪುರ | ಸರ್ಕಾರಿ ಉರ್ದು ಶಾಲೆಯನ್ನು ಉನ್ನತೀಕರಣಗೊಳಿಸಿ: ವಿದ್ಯಾರ್ಥಿಗಳ ಪೋಷಕರ ಆಗ್ರಹ

Date:

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿನ ಡಾ. ಜಾಕಿರ್ ಹುಸೇನ್ ಮೊಹಲ್ಲಾ ಪ್ರದೇಶದಲ್ಲಿರುವ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಉನ್ನತೀಕರಿಸಬೇಕು ಎಂದು ಸ್ಥಳೀಯ ಪೋಷಕರು, ಸಮುದಾಯದ ಮುಖಂಡರು ಹಾಗೂ ವಿದ್ಯಾಭಿವೃದ್ಧಿ ಹಿತಚಿಂತಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ್ದು, ತ್ವರಿತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಈ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ 213 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ ಈ ಶಾಲೆಯಲ್ಲಿ ಕೇವಲ 5 ಸರ್ಕಾರಿ ಶಿಕ್ಷಕರು ಮತ್ತು ಓರ್ವ ಅತಿಥಿ ಶಿಕ್ಷಕ ಮಾತ್ರ ಇದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ. ಇದರಿಂದಾಗಿ ಪಾಠದ ಗುಣಮಟ್ಟ ಮತ್ತು ಮಕ್ಕಳ ವೈಯಕ್ತಿಕ ಬೆಳವಣಿಗೆಗೆ ತೊಂದರೆಯಾಗಿದೆ ಎಂದು ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಈ ಶಾಲೆಯಲ್ಲಿ 3 ಮಾತ್ರ ಬೋಧನಾ ಕೊಠಡಿಗಳು ಮತ್ತು ಒಂದು ಅಡುಗೆ ಕೋಣೆ ಮಾತ್ರ ಇವೆ. ಶಾಲೆಗೆ ಸಂಬಂಧಿಸಿದ ಪರಿಶೀಲನಾ ದಾಖಲೆ ಪ್ರಕಾರ, ಗಂಡು ಮಕ್ಕಳಿಗೆ ಎರಡು ಮತ್ತು ಹೆಣ್ಣು ಮಕ್ಕಳಿಗೆ ಎರಡೇ ಶೌಚಾಲಯಗಳಿವೆ. ಈ ಸೌಲಭ್ಯಗಳು ಮಕ್ಕಳಿಗೆ ಸಾಕಾಗುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಶಾಲೆಯ 213 ವಿದ್ಯಾರ್ಥಿಗಳಿದ್ದು, ಈ ಪೈಕಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದಿಂದ ಬಂದವರು. ಶಾಲೆಯು ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಪ್ರಮುಖ ಆಧಾರವಾಗಿದ್ದು, ಬಹುಮಟ್ಟಿಗೆ ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ಈ ಶಾಲೆಯ ಮೂಲಕ ರೂಪಿಸುತ್ತಿದ್ದಾರೆ.

ಈ ಶಾಲೆಯನ್ನು ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಘೋಷಿಸಿದರೆ ಅಧ್ಯಾಪಕರ ಸಂಖ್ಯೆ ಹೆಚ್ಚಿಸಿ ಗುಣಮಟ್ಟದ ಪಾಠ ನೀಡಲು ಸಾಧ್ಯವಾಗುತ್ತದೆ. ಕೊಠಡಿಗಳು, ಶೌಚಾಲಯಗಳು, ಪೀಠೋಪಕರಣಗಳು, ಆಟದ ಸಾಮಗ್ರಿಗಳು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳು ಸಿಗಬಹುದು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಶಾಲೆಯು ಮಾದರಿ ಶಾಲೆಯಾಗಿ ಪರಿವರ್ತಿತವಾದರೆ ನಮ್ಮ ಮಕ್ಕಳು ದೂರದ ಶಾಲೆಗಳಿಗೆ ಹೋಗಬೇಕಾಗುವುದಿಲ್ಲ. ನಮ್ಮ ಊರಿನಲ್ಲಿಯೇ ಉತ್ತಮ ಶಿಕ್ಷಣ ಸಿಗಲಿದೆ ಎಂದು ಪಾಲಕರು ತಮ್ಮ ಭಾವನೆ ಹಂಚಿಕೊಂಡಿದ್ದಾರೆ.

shabeer ahmed
ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಸದಸ್ಯರಾದ ಶಬ್ಬೀರ್ ಅಹ್ಮದ್

ಈ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಮತ್ತು ಸರ್ಕಾರಿ ಉದ್ದೇಶಿತ ‘ಮೌಲಾನಾ ಆಜಾದ್ ಮಾದರಿ ಶಾಲೆಗಳ’ ಉದ್ದೇಶ ಸಫಲವಾಗಿಸಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಶಬ್ಬೀರ್ ಅಹ್ಮದ್ ತಮ್ಮ ಮನವಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಈ ಪ್ರಸ್ತಾಪ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಅಡಿಯಲ್ಲಿ ಬರುವ ಯೋಜನೆಗಳ ಒಂದು ಭಾಗವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಸಕಾರಾತ್ಮಕ ಶೈಕ್ಷಣಿಕ ಉನ್ನತಿಯತ್ತ ಹೆಜ್ಜೆ ಇಡಲಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...