ಶ್ರೀರಂಗಪಟ್ಟಣ | ಗ್ಯಾಸ್ ಏಜೆನ್ಸಿಯಿಂದ ಹೆಚ್ಚುವರಿ ಹಣ ವಸೂಲಿ, ಡೋರ್ ಡೆಲಿವರಿ ನಿರಾಕರಣೆ : ಗ್ರಾಹಕರ ಆರೋಪ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ.

ಅಶೋಕ್ ಗ್ಯಾಸ್ ಏಜೆನ್ಸಿಯವರ ಆಟಾಟೋಪ ಹೆಚ್ಚಾಗಿದೆ. ಡೋರ್ ಡೆಲಿವರಿ ಕೊಡುವುದಿಲ್ಲ. 45 ರೂ ಹೆಚ್ಚುವರಿ ಹಣ ವಸೂಲಿ ಮಾಡುತ್ತಾರೆ. ನಾವು ಊರ ಮುಂದಿನಿಂದ ಇನ್ನೊಂದು ಗಾಡಿಯಲ್ಲಿ ಇಲ್ಲವೇ ಹೆಗಲ ಮೇಲೆ ಹೊತ್ತುಕೊಂಡು ಮನೆಗೆ ಹೋಗಬೇಕು ಎಂದು ಚಿನ್ನಾಯಕನಹಳ್ಳಿ ಆಟೋ ಚಂದ್ರು ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿನ್ನನಾಯಕನಹಳ್ಳಿ ಊರಿಗೆ ಡೆಲಿವರಿ ಕೊಡುವ ಗ್ಯಾಸ್ ಏಜೆನ್ಸಿಯ ಡ್ರೈವರ್ ಮಾತನಾಡಿ, ಏಜೆನ್ಸಿಯ ನಿರ್ದೇಶನದಂತೆ ಹೆಚ್ಚುವರಿ ಹಣ ಪಡೆದಿರುತ್ತೇನೆ. ಏಜೆನ್ಸಿ ಕೊಡುವ ಬಾಡಿಗೆ ಹಣ ಸಾಲುವುದಿಲ್ಲ ಆದ್ದರಿಂದ ಗ್ರಾಹಕರ ಬಳಿ ಹೆಚ್ಚುವರಿ ಹಣ ಪಡೆದಿದ್ದೇನೆ. ಬಂದು ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ದೂರು ಕೊಡಲಿ ಅವರು ತೀರ್ಮಾನ ಮಾಡಿದಂತೆ ನಡೆಯುತ್ತೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಶೋಕ್ ಗ್ಯಾಸ್ ಏಜೆನ್ಸಿಯ ಕಚೇರಿಗೆ ಫೋನ್ ಮಾಡಿ ಮಾತನಾಡಿದಾಗ, ಒಂದು ಊರಿನಲ್ಲಿ ನಿಗದಿ ಮಾಡಿದ ಜಾಗಕ್ಕೆ ಮಾತ್ರ ಡೆಲಿವರಿ ಕೊಡುತ್ತೇವೆ. ಯಾವ ಗ್ರಾಹಕರಿಗೆ ತೊಂದರೆಯಾಗುತ್ತಿದೆಯೋ ಅವರಿಗೆ ಬೇಡ ಅನ್ನಿಸುವುದಾದರೆ ಗ್ಯಾಸ್ ಏಜೆನ್ಸಿಯನ್ನು ಬದಲಾವಣೆ ಮಾಡಿಕೊಳ್ಳಲಿ ಎಂದು ಉಡಾಫೆಯ ಉತ್ತರ ಕೊಟ್ಟು ಫೋನ್ ಕಟ್ ಮಾಡಿದರು.

ಇದನ್ನು ಓದಿದ್ದೀರಾ? ಗೋಕಾಕ್ | ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ: 14 ಆರೋಪಿಗಳ ಆಸ್ತಿ ಮುಟ್ಟುಗೋಲು; ಎಸ್‌ಪಿ

ಶ್ರೀರಂಗಪಟ್ಟಣ ಆಹಾರ ಶಾಖೆಯ ನಿರೀಕ್ಷಕರಾದ ರಮಾ ಮಾತನಾಡಿ, ತೊಂದರೆ ಆಗಿರುವ ಗ್ರಾಹಕರು ತಮಗೆ ದೂರು ಕೊಟ್ಟಲ್ಲಿ ಏಜೆನ್ಸಿಯವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...