ಶ್ರೀರಂಗಪಟ್ಟಣ | ಸಂವಿಧಾನ ಸಮರ್ಪಣಾ ದಿನ, ರಾಷ್ಟ್ರೀಯ ಕಾನೂನು ದಿನಾಚರಣೆ

Date:

ಸಂವಿಧಾನವನ್ನು ಪಾಲನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಬೇಕು. ಆಗ ಭಾರತೀಯರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಆಗುತ್ತದೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ಸಿ.ಎಸ್.ವೆಂಕಟೇಶ್ ಅಭಿಪ್ರಾಯ ಪಟ್ಟರು.

ಅವರು ಸಂವಿಧಾನ ಸಮರ್ಪಣಾ ದಿನ ಮತ್ತು ರಾಷ್ಟ್ರೀಯ ಕಾನೂನು ದಿನಾಚರಣೆ ಪ್ರಯುಕ್ತ ಶ್ರೀರಂಗಪಟ್ಟಣ ತಾಲೂಕು ಪಂಚಾಯಿತಿ ಎದುರಿರುವ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಸಂವಿಧಾನ ಪ್ರಸ್ತಾವನೆಗೆ ‘ಸಮಾಜವಾದಿ’ ‘ಜಾತ್ಯಾತೀತ’ ಮತ್ತು ‘ಸಮಗ್ರತೆ’ ಎಂಬ ಪದಗಳನ್ನು ಸೇರಿಸಿದ್ದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಇದು ಖುಷಿ ಪಡುವ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241126 WA0038

ನಂತರ ಪ್ರಜ್ಞಾವಂತರ ವೇದಿಕೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟ, ಶ್ರೀರಂಗಪಟ್ಟಣ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡಿದ್ದ ಸಂವಿಧಾನ ಪೀಠಿಕೆಯ ಮೆರವಣಿಗೆಗೆ ಆಶಾ ಪುಟ್ಟೇಗೌಡ ಚಾಲನೆ ನೀಡಿದರು. ಕುವೆಂಪು ವೃತ್ತದಿಂದ ಹೊರಟ ಸಂವಿಧಾನ ಪೀಠಿಕೆಯ ಮೆರವಣಿಗೆ ಶ್ರೀರಂಗಪಟ್ಟಣದ ಪೇಟೆಯ ಮುಖ್ಯ ಬೀದಿಗಳ ಮೂಲಕ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಕೊನೆಗೊಂಡಿತು. ನಂತರ ಎಲ್ಲರಿಗೂ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ವಿಜಯ ಮಂಗಳೂರು ಮಾತನಾಡಿ, ಇವತ್ತು ಎಲ್ಲ ಭಾರತೀಯರಿಗೆ ಬಹಳ ಮುಖ್ಯವಾದ ದಿನ. ಇವತ್ತು ಸಂವಿಧಾನ ಅಂತಿಮಗೊಂಡ ದಿನ. ನಮ್ಮ ಸಂವಿಧಾನವು 1950ರ ಜನವರಿ 26 ರಿಂದ ಜಾರಿಗೆ ಬರಲಿದೆ ಎಂದು ತೀರ್ಮಾನಗೊಂಡ ದಿನ. ನಾವೆಲ್ಲರೂ ಸಂವಿಧಾನ ರಚನಾ ಸಭೆ ಹೇಗೆ ಕೆಲಸ ಮಾಡಿತು ಅಂತ ತಿಳಿಯಬೇಕು. ಯಾರು ಏನು ಮಾತನಾಡಿದರು, ಅದಕ್ಕೆ ಏನು ಉತ್ತರ ಕೊಟ್ಟರು, ಕೊಟ್ಟ ಉತ್ತರ ಎಲ್ಲರಿಗೂ ಸಮಾಧಾನ ತಂದಿತಾ ಎಂಬುದನ್ನು ತಿಳಿದುಕೊಳ್ಳಬೇಕಿದೆ ಎಂದರು.

IMG 20241126 WA0062

ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಒಂದೇ ಭಾಷೆ, ಧರ್ಮ ಮತ್ತು ಆಚರಣೆಗಳು ಇರುತ್ತವೆ. ಅಲ್ಲಿಗೆ ಸಂವಿಧಾನ ರಚಿಸುವುದು ಬಲು ಸುಲಭ. ಆದರೆ ಭಾರತ ಬಹಳ ದೊಡ್ಡ ಒಕ್ಕೂಟ. ಇಲ್ಲಿ ಅನೇಕ ರೀತಿಯ ಭಾಷೆ, ಧರ್ಮ ಹಾಗೂ ಪ್ರದೇಶಗಳಿವೆ. ಇಲ್ಲಿ ಎಲ್ಲರೂ ಒಪ್ಪುವ ಸಂವಿಧಾನ ರಚನೆ ಬಲು ಸಂಕೀರ್ಣ. ಇದನ್ನು ಸಾಧಿಸಿದವರು ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಶ್ಲಾಘಿಸಿದರು.

ಸಂವಿಧಾನ ಇದೆ. ಸಂವಿಧಾನ ವಿಧಿ ವಿಧಾನಗಳ ಅಡಿಯಲ್ಲಿ ಆಡಳಿತ ನಡೆಯುತ್ತಿದೆ. ಆದರೂ, ನಮ್ಮಗಳ ಸ್ಥಿತಿ ಇನ್ನೂ ಸುಧಾರಿಸಬೇಕಿದೆ. ಇನ್ನೂ ಸಾಕಷ್ಟು ಸೌಲಭ್ಯಗಳು ತಲುಪಬೇಕಿದೆ. ಇನ್ನು ನ್ಯಾಯ ಸರಿಯಾಗಿ ಸಿಗುತ್ತಿಲ್ಲ. ಸಂವಿಧಾನ ಇದ್ದಾಗ ಈ ರೀತಿ ಆದರೆ ಇನ್ನೂ ಸಂವಿಧಾನ ಇಲ್ಲದಿದ್ದಾಗ ನಮ್ಮಗಳ ಬದುಕು ಹೇಗೆ ನೆನಪಿಸಿಕೊಳ್ಳಿ ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ನನಗೀಗ 75 ವರ್ಷ. ನಾನು ಚಿಕ್ಕವನಾಗಿದ್ದಾಗ ನಮ್ಮ ಗುಡಿಸಲು ಹಂದಿಗಳನ್ನು ಕೂಡಿ ಹಾಕಿದಂತಿತ್ತು. ನನಗೆ ಈಗಲೂ ನೆನಪಿದೆ ಅಲ್ಲೇ ಐದಾರು ಅಣ್ಣ-ತಮ್ಮಂದಿರ ಸಂಸಾರವೆಲ್ಲ ಇತ್ತು. ಈಗ ನಮ್ಮ ಪರಿಸ್ಥಿತಿ ಸಾಕಷ್ಟು ಬದಲಾವಣೆ ಕಂಡಿದೆ ಎಂದು ತಮ್ಮ ಬಾಲ್ಯ ಕಾಲವನ್ನು ನೆನಪಿಸಿಕೊಂಡರು.

ಈ ಕಾರ್ಯಕ್ರಮದಲ್ಲಿ ಚಂದ್ರಣ್ಣ ಕ್ಯಾತನಹಳ್ಳಿ, ರೈತ ಸಂಘದ ಪಾಂಡು, ಜಯರಾಮೇಗೌಡ, ಚಿಕ್ಕತಮ್ಮೇಗೌಡ, ಸರ್ವೋದಯ ಪಕ್ಷದ ರಮೇಶ್, ಸವೆರ ಸ್ವಾಮಿ, ಡಿಎಸ್ಎಸ್‌ನ ಕುಬೇರಪ್ಪ, ಟಿಪ್ಪು ಚಂದ್ರು, ಸಂಜಯ ಪ್ರಕಾಶನದ ಶಿವಕುಮಾರ್, ಕಡತನಾಳು ಜಯಶಂಕರ್, ಪ್ರಿಯಾ ರಮೇಶ್, ಸೌಹಾರ್ದ ವೇದಿಕೆಯ ಅಕ್ಬರ್, ಪಾಂಡವಪುರ ವಿಜಯ್ ಕುಮಾರ್, ಕೃಷ್ಣಮೂರ್ತಿ ಇನ್ನೂ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...