ಇನ್ನೋವಾ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್ (30) ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಚಾಲನೆ ಮಾಡುತ್ತಿದ್ದ ಕಾರು ಹುಣಸೂರು ಕಡೆಗೆ ತೆರಳುತ್ತಿದ್ದು, ಎದುರು ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯೊಂದಿಗೆ ಭೀಕರ ಡಿಕ್ಕಿ ಸಂಭವಿಸಿದೆ.
ಇದನ್ನೂ ಓದಿ: ಮಂಡ್ಯ | ಸೌಜನ್ಯ ಕೊಲೆ ಪ್ರಕರಣ; ಜಾಗೃತ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
ಡಿಕ್ಕಿಯಾದ ಕ್ಷಣಾರ್ಧದಲ್ಲೇ ಕಾರು ಬೆಂಕಿಗಾಹುತಿಯಾಗಿದ್ದು, ಚಾಲಕ ಚಂದ್ರಶೇಖರ್ ಕಾರಿನೊಳಗೇ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





