ಶ್ರೀರಂಗಪಟ್ಟಣ ಎಲ್ಲ ಧರ್ಮಗಳ ಸಂಗಮ ಭೂಮಿ: ಸಿ ಎಸ್‌ ವೆಂಕಟೇಶ್

Date:

​”ಶ್ರೀರಂಗಪಟ್ಟಣವು ಎಲ್ಲ ಧರ್ಮಗಳ ಸಂಗಮ ಭೂಮಿ. ಇಲ್ಲಿನ ಐತಿಹಾಸಿಕ ಚರ್ಚ್‌ನಲ್ಲಿ ಎಲ್ಲ ಸಮುದಾಯದ ಮುಖಂಡರು ಸೇರಿ ಹಬ್ಬ ಆಚರಿಸುತ್ತಿರುವುದು ನಮ್ಮ ಮಣ್ಣಿನ ಸೌಹಾರ್ದತೆಗೆ ಸಾಕ್ಷಿ. ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಯ ಬದುಕು ಇಂದಿನ ತುರ್ತಾಗಿದೆ” ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ ಎಸ್ ವೆಂಕಟೇಶ್ ನುಡಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಐತಿಹಾಸಿಕ ಗಂಜಾಂ ಪ್ರದೇಶದ ಅಬೇ ದುಬಾ ಚರ್ಚ್‌ನಲ್ಲಿ ಅಬೇ ದುಬಾ ಚರ್ಚ್‌ನ ಧರ್ಮದರ್ಶಿ ಫಾದರ್ ಜಾನ್ ಶಗೈ ಪುಷ್ಪರಾಜರಿಗೆ ಪುಷ್ಪಗುಚ್ಛ ನೀಡಿ ಹಬ್ಬದ ಶುಭಾಶಯ ಕೋರಿ ಅವರು ಮಾತನಾಡಿದರು.

ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ಕ್ರಿಸ್ಮಸ್ ಹಬ್ಬವನ್ನು ಅತ್ಯಂತ ಸೌಹಾರ್ದಯುತವಾಗಿ ಆಚರಿಸಲಾಯಿತು. ವಿವಿಧ ಧರ್ಮಗಳ ಮುಖಂಡರು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ರವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ​​ಕೆ ಎಸ್ ಜಯಶಂಕರ್ ಮಾತನಾಡಿ, “ಮಾನವೀಯತೆಯೇ ದೊಡ್ಡ ಧರ್ಮ. ಕ್ರಿಸ್ಮಸ್ ಅಂತಹ ಪವಿತ್ರ ದಿನದಂದು ನಾವೆಲ್ಲರೂ ಒಂದಾಗಿರುವುದು ಸಮಾಜಕ್ಕೆ ಒಳ್ಳೆಯ ಮಾದರಿ” ಎಂದರು.

ಇದನ್ನೂ ಓದಿ: ಶ್ರೀರಂಗಪಟ್ಟಣ | ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಜ್ಞಾವಂತರ ಪ್ರತಿಭಟನೆ

ಮುಸ್ಲಿಂ ಸೌಹಾರ್ದ ವೇದಿಕೆ ಕಾರ್ಯದರ್ಶಿ ಅಬ್ದುಲ್ ಸುಕೂರ್ ಮಾತನಾಡಿ, “ಧರ್ಮಗಳು ಬೇರೆಯಾದರೂ ಮನುಷ್ಯತ್ವ ಒಂದೇ. ಸೌಹಾರ್ದತೆಯ ಮೂಲಕ ನಾವು ಭವ್ಯ ಭಾರತವನ್ನು ಕಟ್ಟಬಲ್ಲೆವು” ಎಂದು ಅಭಿಪ್ರಾಯಪಟ್ಟರು.

ಮಾನವ ಹಕ್ಕುಗಳ ಹೋರಾಟಗಾರ ​ಪ್ರಸನ್ನ ಪಾಲಹಳ್ಳಿ ಮಾತನಾಡಿ, “ಪ್ರತಿಯೊಬ್ಬರಿಗೂ ತಮ್ಮ ಧರ್ಮ ಆಚರಿಸುವ ಹಕ್ಕಿದೆ, ಅದರ ಜೊತೆಗೆ ಪರಸ್ಪರ ಗೌರವಿಸುವ ಸಂಸ್ಕೃತಿ ಬೆಳೆಯಬೇಕು” ಎಂದು ಹೇಳಿದರು.

​ಕಾರ್ಯಕ್ರಮದಲ್ಲಿ ಭಾರತೀಯ ಬೌದ್ಧ ಮಹಾಸಭಾದ ಮಾಜಿ ಅಧ್ಯಕ್ಷ ಕೆ ಟಿ ರಂಗಪ್ಪ, ಮುಖಂಡರಾದ ಎನ್. ಸರಸ್ವತಿ, ಚಿಕ್ಕ ತಮ್ಮೇಗೌಡ, ದಸಂಸ ನಂಜುಂಡ ಮೌರ್ಯ, ಕೆ ಶೆಟ್ಟಳ್ಳಿ ಅಪ್ಪಾಜಿ, ಶ್ರೀನಿವಾಸ್ ಸೇರಿದಂತೆ ಪ್ರಜ್ಞಾವಂತರ ವೇದಿಕೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...