ಶ್ರೀರಂಗಪಟ್ಟಣ | ಕಾನೂನು ಎಲ್ಲವನ್ನೂ ಸರಿಪಡಿಸಲು ಸಾಧ್ಯವಿಲ್ಲ: ನ್ಯಾ. ನಾಗಮೋಹನ್ ದಾಸ್

Date:

ಸಂವಿಧಾನದ ಅಡಿಯಲ್ಲಿ ಕಾರ್ಯಗತ ಮಾಡುವುದಕ್ಕೆ ಅನೇಕ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೆ ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು ಸುಧಾರಣೆಯಾಗಬೇಕು ಎಂದು ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಮಾಹಿತಿ ನೀಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಾಲಹಳ್ಳಿಯ ರುದ್ರಮ್ಮ ನಾಗರಾಜರ ಮನೆಯಲ್ಲಿ ಏರ್ಪಡಿಸಿದ್ದ ದಲಿತರೊಂದಿಗಿನ ಸಹಭೋಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಭಾರತಕ್ಕೆ ಒಂದು ಸಂವಿಧಾನವಿದೆ. ಆ ಸಂವಿಧಾನದಲ್ಲಿ ಅಸ್ಪೃಶ್ಯತೆಯನ್ನು ನಿಷೇಧ ಮಾಡಲಾಗಿದೆ. ಅಸ್ಪೃಶ್ಯತೆಯನ್ನು ಆಚರಣೆ ಮಾಡಿದರೆ ದಂಡನೆ ನೀಡಲಾಗುತ್ತದೆಂದು ನಮ್ಮ ಸಂವಿಧಾನದಲ್ಲಿ ಪ್ರಸ್ತಾಪನೆ ಮಾಡಲಾಗಿದೆ. ಕಾನೂನಿನಿಂದ ಒಂದಷ್ಟು ಬದಲಾವಣೆಯಾಗಿದೆ. ಇನ್ನೂ ಬಹಳಷ್ಟು ಸುಧಾರಣೆಯಾಗುವುದು ಬಾಕಿ ಉಳಿದಿದೆ. ಪ್ರತಿಯೊಂದು ಕಾನೂನು ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು, ಬುದ್ಧಿ, ಚಿಂತನೆಗಳು ಸುಧಾರಣೆಯಾಗಬೇಕು. ಈ ದಿಸೆಯಲ್ಲಿ ಯಾವುದೇ ಸಂಘರ್ಷವಿಲ್ಲದೆ, ಶಾಂತಿಯುತವಾಗಿ ಅಸ್ಪೃಶ್ಯತೆಯ ನಿವಾರಣೆ ಕೆಲಸವಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241201 WA0018

ಮೈಸೂರಿನ ಪ್ರಜಾವಾಣಿ ಬ್ಯೂರೊ ಮುಖ್ಯಸ್ಥ ಕೆ ನರಸಿಂಹಮೂರ್ತಿ ಮಾತನಾಡಿ, “ಮನೆಗೆದ್ದು ಮಾರುಗೆಲ್ಲು ಎನ್ನುವ ಗಾದೆ ಮಾತಿನಂತೆ ಅಸ್ಪೃಶ್ಯತೆ ನಿವಾರಣೆಯ ಮೊದಲ ಪ್ರಯತ್ನ ಅರಿವು ಶಿವಪ್ಪರ ಮನೆಯಿಂದಲೇ ಶುರುವಾಯಿತು. ನಾವು ಕೇವಲ ಮಾತನಾಡುತ್ತೇವೆ. ಆದರೆ ನಮ್ಮ ಮನೆಗಳಲ್ಲಿ ಆಚರಣೆಯಲ್ಲಿರುವುದಿಲ್ಲ. ದಲಿತರ ಗೃಹಪ್ರವೇಶ ಕಾರ್ಯಕ್ರಮಕ್ಕೆ ದಲಿತರು ಶಿವಪ್ಪನವರ ಮನೆಗೆ ಬಂದು ತತ್ವಪದ ಹಾಡಿ ಊಟ ಮಾಡಿ ಹೋದ ಘಟನೆ ಹೊಸ ಬದಲಾವಣೆಗೆ ನಾಂದಿ ಹಾಡಿತು” ಎಂದರು.

ಕಾಳೇಗೌಡ ನಾಗವಾರ ಮಾತನಾಡಿ, “ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಇನ್ನೂ ಕೂಡಾ ಅಸ್ಪೃಶ್ಯತೆ ಆಚರಣೆಯಲ್ಲಿದೆ. ಮಂಡ್ಯ ಜಿಲ್ಲೆಯ ಹನಕೆರೆಯಲ್ಲಿ ದಲಿತರನ್ನು ಗುಡಿಗೆ ಸೇರಿಸದಿರುವುದು ತುಂಬಾ ನೋವುಂಟು ಮಾಡಿದ ಘಟನೆಯಾಗಿದೆ. ಹಿಂದಿನ ಕಾಲದಲ್ಲಿ ದಲಿತರ ಬಹಿಷ್ಕಾರಗಳು ಹೆಚ್ಚಾಗಿ ನಡೆಯುತ್ತಿದ್ದವು, ನಾನು ಮತ್ತು ಬಿಸಗರಹಳ್ಳಿ ರಾಮಣ್ಣ ಜಂಟಿಯಾಗಿ ಡಿಸಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸುತ್ತಿದ್ದೆವು” ಎಂದು ಹಳೆಯ ಘಟನೆ ನೆನೆಪಿಸಿಕೊಂಡರು.

IMG 20241201 WA0015

ಅಂತರಂಗ ಚಳವಳಿಯ ವಿವೇಕಾನಂದ ಹೆಚ್‌ ಕೆ ಮಾತನಾಡಿ, “ಅಸ್ಪೃಶ್ಯತೆ ನಿವಾರಣೆ ಕಾರ್ಯಕ್ರಮಗಳನ್ನು ಆಯೋಜಿಸುವುದು ಹೆಮ್ಮೆಯೋ, ಬೇಸರವೋ, ನಾಚಿಕೆಯೋ ಗೊತ್ತಿಲ್ಲ. ಆದರೆ ಅನಿವಾರ್ಯವಂತೂ ಖಂಡಿತ ಇದೆ‌. ಕರ್ನಾಟಕದಲ್ಲಿ ದಲಿತ ಚಳವಳಿ ಜನ ಮನ್ನಣೆ ಪಡೆದು 50 ವರ್ಷ ಆಗುತ್ತಿದ್ದು, ಇಂಥ ಸಂದರ್ಭದಲ್ಲಿ ಚಳವಳಿಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿಯನ್ನು ಯಾರು ಹೊರಬೇಕು? ಅಸ್ಪೃಶ್ಯತೆ ನಿವಾರಣೆ ಮಾಡುವವರು ಯಾರು? ಎಂಬುದು ತಿಳಿದಿಲ್ಲ, ಇನ್ನೂ ಅಸ್ಪೃಶ್ಯತೆ ನಿವಾರಣೆ ಸಾಧ್ಯವಾಗಿಲ್ಲ” ಎಂದರು.

ಸದಾಶಿವ ಕೆ ಮಾತನಾಡಿ, “ಅಸ್ಪೃಶ್ಯತೆ ಆಚರಣೆಯ ಬಗ್ಗೆ ಇತಿಹಾಸದಲ್ಲಿ ಮೊಟ್ಟಮೊದಲು ಕಂಡು ಬರೋದು ಜಾತಕ ಕಥೆಗಳಲ್ಲಿ. ಕ್ರಿಸ್ತ ಪೂರ್ವ 6ನೇ ಶತಮಾನದಲ್ಲಿ ಐತಿಹಾಸಿಕ ವಿದ್ಯಮಾನಗಳನ್ನು ಜಾತಕ ಕಥೆಗಳು ಉಲ್ಲೇಖಿಸುತ್ತದೆ. ಅಸ್ಪೃಶ್ಯತೆ ಆಚರಣೆ ಘಟನೆ ನಡೆದ ಬಗ್ಗೆ ಉಲ್ಲೇಖವಿದೆ. ಮಾತಂಗ ಮುನಿಯ ವಿರುದ್ಧ ನಡೆದ ಅಸ್ಪೃಶ್ಯತೆ ಆಚರಣೆ ಎದುರು ಹೋರಾಟ ಮಾಡುತ್ತಾನೆ” ಎಂದು ಇತಿಹಾಸವನ್ನು ತಿಳಿಸಿದರು.

IMG 20241201 WA0016

ಈ ಸಹಬೋಜನ ಕಾರ್ಯಕ್ರಮದಲ್ಲಿ ಪಾಲಹಳ್ಳಿ ಗ್ರಾಮದ ರುದ್ರಮ್ಮ ನಾಗರಾಜ್‌ರವರಿಗೆ ಗ್ರಾಮರತ್ನ ಪ್ರಶಸ್ತಿಯನ್ನು ಕಾಳೇಗೌಡ ನಾಗವಾರ ಪ್ರಧಾನ ಮಾಡಿದರು.

ಇದನ್ನು ಓದಿದ್ದೀರಾ? ಕೆಆರ್‌ಪೇಟೆ | ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದೆ: ಪ್ರೊ ಎಸ್ ಜಿ ಸಿದ್ದರಾಮಯ್ಯ

ಅಭಿಯಾನದ ರೂವಾರಿ ಅರಿವು ಶಿವಪ್ಪ, ಡಾ. ರುದ್ರೇಶ್ ಅದರಂಗಿ, ಡಾ. ಚಿನ್ನಸ್ವಾಮಿ ಸೋಸಲೆ, ಜಾಣ ಜಾಣೆಯರು ಜಗದೀಶ್, ಮಹಮ್ಮದ್ ಇಲಿಯಾಜ್, ಪಾಲಹಳ್ಳಿ ಪ್ರಸನ್ನ, ಅಬ್ಬಣಿ ಶಿವಪ್ಪ, ನಗರಕೆರೆ ಜಗದೀಶ್, ಪ್ರಜಾವಾಣಿಯ ಗಣಂಗೂರು ನಂಜೇಗೌಡ, ಕಡತನಾಳು ಜಯಶಂಕರ್, ಎಚ್‌ಡಿ ಕೋಟೆಯ ಹಾಡಿ ವಾಸಿಗಳು, ಪಾಲಹಳ್ಳಿ ಹಾಗೂ ಶ್ರೀರಂಗಪಟ್ಟಣದ ಪ್ರಜ್ಞಾವಂತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...