ಶ್ರೀರಂಗಪಟ್ಟಣ | ಕಾಂತರಾಜ, ಅನ್ನಪೂರ್ಣಮ್ಮ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Date:

ಎಲ್ಲ ಸಮುದಾಯಗಳ ಸ್ಥಿತಿಗಳನ್ನು ಅವಲೋಕನ ಮಾಡುವ ವರದಿಯನ್ನು ಕಾಂತರಾಜು ಆಯೋಗ ನೀಡಿದೆ. ನಾಡಿನಲ್ಲಿ 1700ಕ್ಕೂ ಹೆಚ್ಚು ಜಾತಿಗಳಿವೆ. ವಿಶೇಷವಾಗಿ ಹಿಂದುಳಿದ ವರ್ಗ 1 ಮತ್ತು 2ಎ ನಲ್ಲಿ ಇರುವಂತಹ ಸಮುದಾಯಗಳು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನಿರೀಕ್ಷಿತ ಮಟ್ಟದ ಯಶಸ್ಸನ್ನು ಕಾಣಲಿಕ್ಕೆ ಸಾಧ್ಯವಾಗಿಲ್ಲ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಸರಕಾರ ಈ ವರದಿಯನ್ನು ಈ ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ ಎಂದು ತಗ್ಗಳ್ಳಿ ಸಂದೇಶ್ ಒತ್ತಾಯಿಸಿದರು.

ಅವರು ಅ.21ರ ಸೋಮವಾರ ಶ್ರೀರಂಗಪಟ್ಟಣ ನಡೆದ ಕಾಂತರಾಜ್ ಆಯೋಗ ಹಾಗೂ ಅನ್ನಪೂರ್ಣಮ್ಮ ವರದಿಯನ್ನು ಯಥಾವತ್ತು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಶ್ರೀರಂಗಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಾಲ್ಲಾಕು ಕಚೇರಿಯವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಳಿಕ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧ್ಯಕ್ಷರಾದ ಮರಳಗಾಲ ಮಂಜುನಾಥ್ ಮಾತನಾಡಿ, ಇವತ್ತು ಯಾವುದೇ ಸರ್ಕಾರ ಮಡಿವಾಳ ಸಮಾಜಕ್ಕೆ ಯಾವುದೇ ಅನುಕೂಲ ಮಾಡುತ್ತಿಲ್ಲ. ನಮ್ಮ ಯಾವುದೇ ಹೋರಾಟಕ್ಕೂ ಪ್ರತಿಫಲ ಸಿಗುತ್ತಿಲ್ಲ. ಪ್ರತಿ ತಾಲೂಕುಗಳಲ್ಲಿ ಮಡಿವಾಳ ಕಟ್ಟೆ ಮಾಡಿಕೊಡಲು ಇಟ್ಟ ಬೇಡಿಕೆಗಳು ಇನ್ನು ಈಡೇರಿಸಿಲ್ಲ. ನಮ್ಮ ಬೇಡಿಕೆಗಳ ಬಗ್ಗೆ ಈ ಕೂಡಲೇ ಸರಕಾರ ಗಮನಹರಿಸಿ ಈಡೇರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

1002104146

ಪ್ರಿಯ ರಮೇಶ್ ಮಾತನಾಡಿ, ಮಡಿವಾಳ ಸಮಾಜ ಸ್ವಾವಲಂಬಿಯಾಗಿ ಬದುಕಲು ತುಂಬಾ ಕಷ್ಟ ಆಗುತ್ತಿದೆ. ಬಟ್ಟೆ ಒಗೆದು ಬದುಕು ಮಾಡಲು ನಮಗೆ ಇಂದು ಸಾಧ್ಯವಾಗುತ್ತಿಲ್ಲ. ಶೈಕ್ಷಣಿಕವಾಗಿ ಬಹಳ ಹಿಂದುಳಿದಿದ್ದೇವೆ. ಮಡಿವಾಳ ಸಮಾಜದ ಹಿತಕ್ಕಾಗಿ ಅನ್ನಪೂರ್ಣ ವರದಿ ಜಾರಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ. ಈ ವರದಿ ಜಾರಿಯಾದರೆ ಸಮುದಾಯಕ್ಕೆ ಬಹಳ ಅನುಕೂಲವಾಗುತ್ತದೆ ಎಂದರು.

ಮಡಿವಾಳರಿಗೆ ಮೇಲಿಂದ ಮೇಲೆ ಅನ್ಯಾಯವಾಗುತ್ತಲೇ ಇದ್ದು, ಸರ್ಕಾರ ಕೂಡಲೇ ಕಾಂತರಾಜ್ ಮತ್ತು ಅನ್ನಪೂರ್ಣಮ್ಮ ವರದಿ ಜಾರಿಗೊಳಿಸಿ ಸಮುದಾಯದ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿ ತಹಶೀಲ್ದಾ‌ರ್ ಪರಶುರಾಮ್ ಸತ್ತಿಗೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಮರಳಗಾಲ ಮಂಜುನಾಥ್, ಮಹಿಳಾ ಅಧ್ಯಕ್ಷೆ ಪ್ರಿಯಾ ರಮೇಶ್, ಗೌರವ ಅಧ್ಯಕ್ಷ ಪಾಲಹಳ್ಳಿ ನರಸಿಂಹ, ತಾಲ್ಲೂಕು ಅಧ್ಯಕ್ಷ ಮಜ್ಜಿಗೆಪುರ ಶ್ರೀನಿವಾಸ್, ರಮೇಶ್, ವಿಶ್ವಾಶ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...