ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮಾರ್ಗಗಳಲ್ಲಿ ಶಾಲಾ ಕಾಲೇಜು ಸಮಯಗಳಲ್ಲಿ ಸಂಚರಿಸುತ್ತಿರುವ ಬಸ್ ಗಳಲ್ಲಿ ಜನರನ್ನು ವಿಪರೀತವಾಗಿ ಕಾನೂನು ಬಾಹಿರವಾಗಿ ತುಂಬಿಸಿಕೊಂಡು ಸಂಚರಿಸುತ್ತಿದ್ದು ಅಪಾಯಕಾರಿ ಸನ್ನಿವೇಶವಾಗಿದೆ.
ಈ ಸಮಯದಲ್ಲಿ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳು ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿದ್ದಾರೆ ಎಲ್ಲರೂ ಬಸ್ ಏರಿದ ಮೇಲೆ ವಿದ್ಯಾರ್ಥಿಗಳನ್ನು ಬಸ್ ಹತ್ತುವಂತೆ ಬೆದರಿಕೆ ಹಾಕಲಾಗುತ್ತಿದೆ ಇದರಲ್ಲಿ ಬಹು ದೂರದ ವರೆಗೆ ಸಾಗುವ ಮುಟ್ಟಾದ ಸಂದರ್ಭದ ವಿದ್ಯಾರ್ಥಿನಿಯರ ಪಾಡು ಕಷ್ಟದಾಯಕ ಆಗಿದೆ.ಪುಟ್ ಬೋರ್ಡ್ ಮೇಲೆ ನಿಂತು ಪ್ರಾಣ ಭಯ ಎದುರಿಸುತ್ತಿದ್ದಾರೆ.
ಈ ಸಮಸ್ಯೆಯು ಜಿಲ್ಲಾಡಳಿತ ಹಾಗೂ ಸಾರಿಗೆ ಪ್ರಾಧೀಕಾರದ ಗಮನದಲ್ಲಿದ್ದರೂ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪರ್ಯಾಯ ವ್ಯವಸ್ಥೆ ಮಾಡದೇ ಕಣ್ಣು ಮುಚ್ಚಿ ಕುಳಿತಿರುವುದು ಖಂಡನೀಯವಾಗಿದೆ.ಕೂಡಲೇ ಜಿಲ್ಲಾಡಳಿತ ಸಮಸ್ಯೆಯನ್ನು ಪರಿಹರಿಸಲು ಗ್ರಾಮೀಣ ಪ್ರದೇಶದ ಎಲ್ಲಾ ಮಾರ್ಗಗಳಿಗೂ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಕ್ರಮ ವಹಿಸಬೇಕು ಎಲ್ಲಾ ಮಾರ್ಗಗಳನ್ನು ರಾಷ್ಟ್ರೀಕರಣ ಮಾಡಬೇಕು.
ಸರಕಾರದ ಶಕ್ತಿ ಯೋಜನೆಯಿಂದ ವಿದ್ಯಾರ್ಥಿನಿಯರನ್ನು ವಂಚಿಸಿರುವ ಜಿಲ್ಲಾಡಳಿತ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸಬೇಕು.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಾಯ ಮಾಡಲು ಮುಂದಾಗಬೇಕು ಇಲ್ಲವಾದರೆ ವಿದ್ಯಾರ್ಥಿಗಳು ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗುತ್ತದೆ ಎಂದು ಎಸ್ ಎಫ್ ಐ ರಾಜ್ಯ ಸಮಿತಿ ಸದಸ್ಯ ರಿತಿಕಾ ಹಾಗೂ ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ಕಾರ್ತಿಕ್ ಉಡುಪಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.





