ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

Date:

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ನೆರವಿಗೆ ನಿಂತಿದ್ದಾರೆ. ಈ ಉದಾರ ಕಾರ್ಯದ ಮೂಲಕ ಪಂತ್ ಕ್ರೀಡಾಂಗಣದಾಚೆಗೆ ತಮ್ಮ ಮಾನವೀಯತೆ ಮೆರೆದಿದ್ದಾರೆ.

ಆಕೆ ಒಂದು ಬಡ ಕುಟುಂಬದ ವಿದ್ಯಾರ್ಥಿನಿ. ಉತ್ತಮ ಅಂಕಗಳನ್ನು ಪಡೆದರೂ ಆರ್ಥಿಕ ಅಸಾಧ್ಯತೆಯಿಂದಾಗಿ ಮುಂದಿನ ವಿದ್ಯಾಭ್ಯಾಸ ಮುಂದುವರಿಸಲು ಅಡಚಣೆ ಆಗಿತ್ತು. ತಂದೆಗೆ ಮಗಳನ್ನು ಕಾಲೇಜಿಗೆ ಸೇರಿಸಲು ಸಾಧ್ಯವಾಗುತ್ತಿಲ್ಲ ಎಂಬ ಸ್ಥಿತಿಯಲ್ಲಿದ್ದಾಗ, ರಿಷಬ್‌ ಆಕೆಯ ಆರ್ಥಿಕ ನೆರವಿಗೆ ನಿಂತರು.

ಹೀಗೆ ಬಡತನದ ಮಧ್ಯೆ ತನ್ನ ಮುಂದಿನ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಪಡೆದ ವಿದ್ಯಾರ್ಥಿನಿ ಜ್ಯೋತಿ ಕಣಬೂರ್. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಮಗಳು. ತಂದೆ ತೀರ್ಥಯ್ಯ ಹಾಗೂ ರೂಪಾ. ತಂದೆ ತೀರ್ಥಯ್ಯ ಗ್ರಾಮದಲ್ಲಿ ಚಿಕ್ಕ ಹೋಟೆಲ್ ಇರಿಸಿಕೊಂಡು 4 ಮಕ್ಕಳೊಂದಿಗೆ ಬದುಕು ನಡೆಸುತ್ತಿದ್ದಾರೆ. ಈ ಮಧ್ಯೆ ಇಬ್ಬರು ಸಹೋದರರು ಹೊಲದಲ್ಲಿ ಕೂಲಿ ಮಾಡ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಕ್ರೀಡೆ ಯುವಕರ ಜೀವನದ ಅವಿಭಾಜ್ಯ ಅಂಗವಾಗಬೇಕು: ಶರಬಬಸಪ್ಪ ಸಂಗಳದ

ಇನ್ನು ಕಣಬೂರ ಕುಟುಂಬದ ಕೊನೆಯ ಮಗಳಾಗಿರೋ ಜ್ಯೋತಿ ಹೊಲದಲ್ಲಿ ಕೆಲಸ ಮಾಡುತ್ತಲೇ ಬಂದ ಹಣದಿಂದ ಪಿಯುಸಿ ಶಿಕ್ಷಣ ಮುಗಿಸಿದ್ದಳು. ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.85 ಅಂಕಗಳೊಂದಿಗೆ ತೇರ್ಗಡೆಯಾದ ಜ್ಯೋತಿಗೆ ಮುಂದಿನ ವ್ಯಾಸಂಗಕ್ಕೆ ಹಣಕಾಸಿನ ತೊಂದರೆಯುಂಟಾಗಿತ್ತು. ಆಗ ತಂದೆ ತೀರ್ಥಯ್ಯ ಗ್ರಾಮದ ಅನಿಲ್ ಹುಣಸಿಕಟ್ಟಿ ಅವರ ಬಳಿ ಹೇಳಿದಾಗ, ಇವರ ಸಮಸ್ಯೆ ಕೇಳಿದ ಅನಿಲ್ ನೇರವಾಗಿ ಬೆಂಗಳೂರಿನ ಐಪಿಎಲ್ ನಲ್ಲಿ ಕಾರ್ಯನಿರ್ವಹಿಸುವ ತಮ್ಮ ಸ್ನೇಹಿತರ ಮೂಲಕ ಕ್ರಿಕೆಟಿಗ ರಿಷಬ್ ಪಂತ್‌ ಅವರನ್ನು ಸಂಪರ್ಕಿಸಿದ್ದಾರೆ. ಆಗ ಜ್ಯೋತಿಯ ಸಮಸ್ಯೆ ಕೇಳಿ ತಕ್ಷಣ ರಿಷಬ್ ಪಂತ್‌ ಆಕೆಯ ಮೊದಲ ವರ್ಷದ ಬಿಸಿಎ ತರಗತಿಗೆ ಅಗತ್ಯವಿರುವ 40 ಸಾವಿರ ಹಣ ನೆರವು ನೀಡಿದ್ದಾರೆ. ಕ್ರಿಕೆಟಿಗ ರಿಷಬ್ ನೆರವಿನ ಹಿನ್ನೆಲೆ ಬಿಎಲ್ ಡಿ ಸಂಸ್ಥೆಯಿಂದ ಅಭಿನಂದನಾ ಪತ್ರ ಬರೆಯಲಾಗಿದೆ. ರಿಷಬ್ ಅವರ ಕಾರ್ಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...