ಬೀದರ್‌ | ಸರ್ಕಾರ ಅಧೀನದಲ್ಲಿ ʼಬಿಎಸ್‌ಎಸ್‌ಕೆʼ ಆರಂಭವಾಗಲಿ; ರೈತ ಸಂಘ ಒತ್ತಾಯ

Date:

ಬೀದರ್‌ ಜಿಲ್ಲೆಯ ರೈತರ ಜೀವನಾಡಿ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಕರ್ತರು ಆಗ್ರಹಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಸಲ್ಲಿಸಿದರು.

“ಬೀದರ ಜಿಲ್ಲೆಯ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದು, ಸರ್ಕಾರ ಶೀಘ್ರದಲ್ಲಿ ರೈತರ ನೆರವಿಗೆ ಧಾವಿಸಿ ಸಮಸ್ಯೆಗಳು ಬಗೆಹರಿಸಬೇಕು. ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ್‌ ಸಮಯ ಮತ್ತು ಗಂಟೆಗಳು ಬದಲಾವಣೆ ಮಾಡಲಾಗಿದ್ದು. ಅದನ್ನು ಶೀಘ್ರದಲ್ಲಿ ರದ್ದುಪಡಿಸಿ, ಮೊದಲಿನಂತೆ ಹಗಲಿನಲ್ಲಿ ಏಳು ಗಂಟೆ ವಿದ್ಯುತ್‌ ಪೂರೈಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ತಿಂಗಳಲ್ಲಿ ಸಕ್ಕರೆ ಕಾರ್ಖಾನೆಗಳು ಪುನಾರಂಭವಾಗಲಿದ್ದು, ಇಲ್ಲಿಯವರೆಗೆ ದರ ನಿಗದಿಪಡಿಸಿಲ್ಲ, ಕೂಡಲೇ ದರ ನಿಗದಿ ಮಾಡುವ ವ್ಯವಸ್ಥೆ ಮಾಡಬೇಕು. ಶೂನ್ಯ ಬಡ್ಡಿಯಲ್ಲಿ ಎಲ್ಲಾ ರೈತರಿಗೆ ಸಹಕಾರ ಬ್ಯಾಂಕಿನಿಂದ ಐದು ಲಕ್ಷದವರೆಗೆ ಸಾಲ ಒದಗಿಸುವ ವ್ಯವಸ್ಥೆ ಮಾಡಿಸಬೇಕೆಂದರು.

“ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಎಲ್ಲಾ ರೈತರಿಗೆ  ಪರಿಹಾರ ಒದಗಿಸಬೇಕು.  ಕೃಷಿ ಮಾರುಕಟ್ಟೆಯಲ್ಲಿ ರೈತರ ದವಸ, ಧಾನ್ಯಗಳ ಪ್ರತಿ ಕ್ವಿಂಟಲ್‌ಗೆ ಒಂದುವರೆ ಕೆ.ಜಿ. ಕಡತ ಹಾಗೂ 2% ಕಮಿಷನ್ ಪಡೆಯುವುದಕ್ಕೆ ಕಡಿವಾಣ ಹಾಕಬೇಕು. ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಯ ಪರಿಹಾರ ಹಣ ಕೂಡಲೇ ಬಿಡುಗಡೆ ಮಾಡಬೇಕೆಂದು” ಆಗ್ರಹಿಸಿದರು.

ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಅತೀ ಶೀಘ್ರದಲ್ಲಿ ಬಗೆಹರಿಸಿ, ರೈತರ ಹಿತ ಕಾಪಾಡಬೇಕು. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗೆ ಸರಕಾರವೇ ಜವಾಬ್ದಾರಿ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 82ರ ಇಳಿ ವಯಸ್ಸಿನಲ್ಲೂ ಆರದ ಉತ್ಸಾಹ; ಸ್ವತಃ ಖರ್ಚಿನಲ್ಲೇ ಊರಿನ ರಸ್ತೆ ದುರಸ್ತಿ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಾ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರ. ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಹಾಗೂ ರೈತ ಸಂಘದ ಪ್ರಮುಖರಾದ ಸುಭಾಷ ರಗಟೆ, ಬಾಬುರಾವ ಜೋಳದಾಬಕಾ, ಪ್ರವೀಣ ಕುಲಕರ್ಣಿ, ಬಸಪ್ಪಾ ಆಲೂರೆ, ರಿಯಾಜ ಪಟೇಲ್, ಪ್ರಕಾಶ ಬಾವಗೆ, ಶಿವಾನಂದ ಹುಡಗೆ, ಧೂಳಪ್ಪಾ ಆಣದೂರ, ಮನೋಹರ ಬಿರಾದಾರ, ಶ್ರೀನಿವಾಸ ರೆಡ್ಡಿ, ರಾಜಕುಮಾರ ಪಾಟೀಲ, ಮಲ್ಲಿಕಾರ್ಜುನ ಚಕ್ಕಿ, ವಿಠಲರಾವ ಪಾಟೀಲ,ಪ್ರಭುದಾಸ ಸಂತಪೂರ, ವಿಶ್ವನಾಥ ಧರಣಿ, ಬಾಬುರಾವ ಕೃಷ್ಣಾಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...