ಬೀದರ್‌ನಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಬೀದರ ನಗರದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆಯನ್ನು ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ʼರಾಜ್ಯದ ಗ್ರಾಮೀಣ ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ ಜಾನಪದ ಜಾತ್ರೆಯನ್ನು ಬೀದರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದುʼ ಎಂದರು.

ʼಕಾರ್ಯಕ್ರಮದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಯ ಕಲಾವಿದರು ಈ ಜಾನಪದ ಜಾತ್ರೆಯಲ್ಲಿ ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ರಸದೌತಣವನ್ನು ಉಣಬಡಿಸಲಿದ್ದಾರೆ. ಜಾತ್ರೆಯ ಒಂದು ದಿನ ಮುಂಚೆ ಕಾರ್ಯಕ್ರಮದ ಜಾಗೃತಿಗಾಗಿ ಸಾವಿರಾರು ವಿದ್ಯಾರ್ಥಿಗಳಿಂದ, ಸಂಘ-ಸಂಸ್ಥೆಗಳಿಂದ ವಾಕಾಥಾನ್ ಹಮ್ಮಿಕೊಳ್ಳಲಾಗುವುದು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ನಗರದ ಮುಖ್ಯ ವೃತ್ತಗಳಲ್ಲಿ ಪ್ರಚಾರ ಹಮ್ಮಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ವಿವಿಧ ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸುವುದು. ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇನ್ನೊಂದು ಸಭೆ ನಡೆಸಲಾಗುವುದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮಾತನಾಡಿ, ʼಬೇರೆ ಜಿಲ್ಲೆಗಳಿಂದ ಬರುವ ಕಲಾವಿದರಿಗೆ ಸೂಕ್ತ ವಾಸ್ತವ್ಯ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ನಿಯಮಾನುಸಾರ ಸಂಭಾವನೆ ಹಾಗೂ ಪ್ರಯಾಣ ವೆಚ್ಚ ನೀಡಲಾಗುವುದು. ಜಾನಪದ ಜಾತ್ರೆಯಲ್ಲಿ ಬೆಳಿಗ್ಗೆ ನಗರದಾದ್ಯಂತ ಸಾವಿರಾರು ಕಲಾವಿದರಿಂದ ಮೆರವಣಿಗೆ ಜರುಗಲಿದ್ದು, ಕವಿಗೋಷ್ಠಿ, ಸಂಗೀತ ಕಾರ್ಯಕ್ರಮಗಳು, ನಾಟಕ ಹಾಗೂ ವಿವಿಧ ರೀತಿಯ ಕಲಾ ಪ್ರಕಾರಗಳು, ನೃತ್ಯ ಪ್ರದರ್ಶನಗೊಳ್ಳಲಿವೆʼ ಎಂದರು.

ʼವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ಹಾಕುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸ್ಥಳೀಯವಾಗಿ ಲಭ್ಯವಿರುವ ಕಲಾ ಪರಿಕರಗಳನ್ನು ಕಾಸ್ಟ್ ಕಲಾಕೃತಿ, ಬಿದರಿ ಕಲೆ, ಲಂಬಾಣಿ ಉಡುಪು, ಚಿತ್ರಸಂತೆ, ಪುಸ್ತಕ ಮಳಿಗೆ ಮುಂತಾದವುಗಳನ್ನು ಸಹ ಹಮ್ಮಿಕೊಳ್ಳಲಾಗುವುದುʼ ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಪ್ರೊ. ಜಗನ್ನಾಥ ಹೆಬ್ಬಾಳೆ, ಎಂ.ಎಸ್.ಮನೋಹರ ಭಾರತಿ ವಸ್ತ್ರದ, ಪಾರ್ವತಿ ಸೋನಾರೆ, ದಿಲೀಪ ಕಾಡವಾದ, ಶಂಭುಲಿಂಗ ವಾಲ್ದೊಡ್ಡಿ, ದೇವಿದಾಸ ಚಿಮಕೋಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಸಭೆಗೆ ಜಾನಪದ ಜಾತ್ರೆ ಯಶಸ್ವಿಯಾಗುವ ನಿಟ್ಟಿನಲ್ಲಿ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...