ಎಸ್‌ಸಿಎಸ್‌ಪಿ/ಟಿಎಸ್‌ಪಿ ವಾಪಸ್ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ ಎಚ್ಚರಿಕೆ

Date:

  • ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ಬಳಕೆ
  • ಎಚ್ ಸಿ ಮಹಾದೆವಪ್ಪಗೆ ತಡೆಯಲು ಬೆನ್ನುಮೂಳೆ ಇರಲಿಲ್ಲವೇ?

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಸರ್ಕಾರದ ನಡೆ ಇವತ್ತು ನಮಗೆ ನಿರಾಸೆ ತಂದಿದೆ. ಪ್ರಜಾಪ್ರಭುತ್ವದಲ್ಲಿ ಜನರಿಗೆ ಆಶ್ವಾಸನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈಗ ದಲಿತರ ಜೀವನದ ಜೊತೆ ಆಟ ಆಡುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಇಬ್ಬರೂ ದಲಿತರ ಕೇರಿಗಳಿಗೆ ಹೋಗಿ ಗ್ಯಾರಂಟಿ ಕಾರ್ಡ್ ನೀಡಿ ಬಂದಿರಿ, ಆಗ ದಲಿತರಿಗೆ ನಿಮ್ಮ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ಬಳಕೆ ಮಾಡುತ್ತೇವೆ ಅಂತ ಹೇಳಬೇಕಿತ್ತು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿಗಳ ಹೆಸರಲ್ಲಿ ರಾಜ್ಯವನ್ನು ದಿವಾಳಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನಾನು ಬಜೆಟ್ ಸಂದರ್ಭದಲ್ಲಿಯೇ‌ ಹೇಳಿದ್ದೇ. ನೀವು 34 ಸಾವಿರ ಕೊಟಿ ಕೊಡುವುದಾಗಿ ಹೇಳಿದ್ದೀರಿ. ಆದರೆ ಸುಮಾರು 23 ಸಾವಿರ ಕೋಟಿ ಮಾತ್ರ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ನೀಡುತ್ತಿದ್ದೀರಿ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? SCSP/TSP ಅನುದಾನ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ: ಎಚ್‌ ಸಿ ಮಹದೇವಪ್ಪ

“ಶಕ್ತಿ ಯೋಜನೆಗೆ 700 ಕೋಟಿ ಮೀಸಲಿಟ್ಟಿದ್ದೀರಿ. ಶಕ್ತಿ ಯೋಜನೆಯಡಿ ಎಸ್ಸಿ ಎಸ್ಟಿ ಯಾರು ಎಂದು ಹೇಗೆ ಗುರುತಿಸುತ್ತೀರಿ. ಗೃಹ ಲಕ್ಷ್ಮೀ ಯೋಜನೆ ಅಡಿ ಗೃಹಿಣಿಯರಿಗೆ ಸುಮಾರು 5,500 ಕೋಟಿ ರೂ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣ ನೀಡಿದ್ದೀರಿ, ಅವರಲ್ಲಿ ಯಾರು ಎಸ್ಸಿ ಎಸ್ಟಿ ಅಂತ ಹುಡುಕುತ್ತಿರಾ? ಎಸ್‌ಸಿಎಸ್‌ಪಿ/ಟಿಎಸ್‌ಪಿಯಿಂದ ವರ್ಗಾವಣೆ ಮಾಡಿರುವ ಸುಮಾರು 11 ಸಾವಿರ ಕೋಟಿ ರೂ ಎಲ್ಲವೂ ಎಸ್ಸಿ ಎಸ್ಟಿ ಸಮುದಾಯಕ್ಕೆ ಬಳಕೆ ಆಗುವುದಿಲ್ಲ” ಎಂದರು.

“ಈ ಹಣ ಇದ್ದಿದ್ದರೆ ದಲಿತರಿಗೆ ಸಾವಿರಾರು ಗಂಗಾ ಕಲ್ಯಾಣ ಬೋರ್ ವೆಲ್ ಕೊರೆಸಬಹುದಿತ್ತು. ಎಸ್ಸಿ ಎಸ್ಟಿ ಹಾಸ್ಟೆಲ್ ನಿರ್ಮಾಣ ಮಾಡಬಹುದಿತ್ತು. ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿಸಬಹುದಿತ್ತು. ನೀವು ಅದನ್ನು ತಪ್ಪಿಸಿ ಎಸ್ಸಿ ಎಸ್ಟಿ ಜನರಿಗೆ ಅನ್ಯಾಯ ಮಾಡಿದ್ದೀರಿ” ಹರಿಹಾಯ್ದರು.

“ನಾವು ದಲಿತರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡಿದ್ದೆವು. ನೀವು ಅದನ್ನು 47 ಯುನಿಟ್ ಗೆ ಇಳಿಸಿದ್ದೀರಿ. ನೀವು ದಲಿತರ ಪರವಾಗಿದ್ದರೆ 7ಡಿ ಕಾಯ್ದೆಯನ್ನು ಮೊದಲ ಅಧಿವೇಶನದಲ್ಲಿ ರದ್ದುಗೊಳಿಸಬಹುದಿತ್ತು. ಅದರ ಬದಲು ಮತಾಂತರ, ಗೋಹತ್ಯೆ ನಿಷೇಧ ವಾಪಸ್ ಪಡೆಯಲು ಮುಂದಾಗಿದ್ದೀರಿ” ಎಂದು ಆರೋಪಿಸಿದರು.

ಮಹಾದೆವಪ್ಪಗೆ ಬೆನ್ನುಮೂಳೆ ಇಲ್ವಾ?

“ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ದಲಿತ ಸಮುದಾಯದಿಂದ ಬಂದವರು. ಆ ಸಮುದಾಯದ ಆಶೀರ್ವಾದದಿಂದ ಮಂತ್ರಿಯಾದವರು. ಇದನ್ನು ತಡೆಯಲು ಅವರಿಗೆ ಬೆನ್ನು ಮೂಳೆ ಇಲ್ಲವೇ? ಹಣ ವರ್ಗಾವಣೆಗೆ ಒಲ್ಲದ ಮನಸಿನಿಂದ ಒಪ್ಪಿರುವುದಾಗಿ ಹೇಳಿದ್ದೀರಿ. ನಿಮಗೆ ಅಂತಹ ಅನಿವಾರ್ಯತೆ ಏನಿದೆ? ನೀವು ದಲಿತರಿಗೆ ಮಾಡುತ್ತಿರುವ ದ್ರೋಹವಾಗಿದೆ” ಟೀಕಿಸಿದರು.

“ನೀವು ಎಷ್ಟೇ ದೊಡ್ಡ ಮಂತ್ರಿಗಳಿದ್ದರೂ ದಲಿತರಿಗೆ ಅನ್ಯಾಯ ಮಾಡಿದರೆ ನೀವು ಆ ಸಮುದಾಯಕ್ಕೆ ಮಾಡುವ ದ್ರೋಹವಾಗಿದೆ. ಕೂಡಲೇ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೊಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಚಳವಳಿ ರೂಪದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಕೆ. ಬೆಳ್ಳುಬ್ಬಿ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...