ಗುಬ್ಬಿ | ಅತಿಯಾದ ಕಂಪ್ಯೂಟರ್ ಬಳಕೆ ನಿಲ್ಲಿಸಿ : ಕುಮಾರಸ್ವಾಮಿ

Date:

ಆಧುನಿಕತೆಗೆ ತಕ್ಕಂತೆ ಸಕಲವೂ ಕಂಪ್ಯೂಟರ್ ಮಯವಾಗಿದೆ. ಸಾಧ್ಯವಾದಷ್ಟು ಕಂಪ್ಯೂಟರ್ ಬಳಕೆಯಿಂದ ದೂರವಿದ್ದು ದೃಷ್ಟಿ ಉಳಿಸಿಕೊಳ್ಳಬೇಕಿದೆ. ಪ್ರತಿ 20 ನಿಮಿಷಕ್ಕೊಮ್ಮೆ ಕಂಪ್ಯೂಟರ್ ಪರದೆಯಿಂದ ಬೇರೆಡೆ ದೃಷ್ಟಿ ಹಾಯಿಸಿ ನಿಮ್ಮ ಕಣ್ಣುಗಳನ್ನು ಉಳಿಸಿಕೊಳ್ಳಬೇಕು ಎಂದು ನೇತ್ರಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಕುಮಾರಸ್ವಾಮಿ ಸಲಹೆ ನೀಡಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯ ನೇತ್ರ ವಿಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಆಶಾ ಕಿರಣ ದೃಷ್ಟಿ ಕೇಂದ್ರಕ್ಕೆ ಚಾಲನೆ ನೀಡಿ ಕಣ್ಣುಗಳು ಮನುಷ್ಯನ ಬದುಕಿನ ಪ್ರಮುಖ ಅಂಗವಾಗಿದೆ. ದೃಷ್ಟಿಹೀನತೆ ಶಾಪವಾಗುವ ಮುನ್ನ ನಿಯಮಿತವಾಗಿ ದೃಷ್ಟಿ ನಿಯಮಿತವಾಗಿ ಪರೀಕ್ಷಿಸಿಕೊಳ್ಳಬೇಕು. ಸಕಾಲದಲ್ಲಿ ನೇತ್ರ ತಪಾಸಣೆ ಬಹುಮುಖ್ಯ ಎಂಬ ಅಂಶದಲ್ಲಿ ಸರ್ಕಾರ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಕಣ್ಣಿನ ದೋಷಗಳ ಪಟ್ಟಿ ಮಾಡಿ ಆಯಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಹಾಗೂ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಅವಶ್ಯ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ವಿವರಿಸಿದರು.

ಶುಭ್ರ ಕೈಗಳಿಂದ ಕಣ್ಣನ್ನು ಮುಟ್ಟಬೇಕು. ಇಲ್ಲವಾದಲ್ಲಿ ಅನೇಕ ವೈರಸ್ ಗಳು ಕಣ್ಣು ಸೇರುವ ಮುನ್ನ ನಿಮ್ಮ ಕಣ್ಣಿನ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕಣ್ಣಿನ ಸೋಂಕು, ವಿಟಮಿನ್ ಕೊರತೆ, ಅಪೌಷ್ಟಿಕತೆ, ಅಕ್ಷಿಪಟಲದ ಗಾಯ, ಅನುವಂಶಿ ನ್ಯೂನ್ಯತೆ ಹೀಗೆ ಅನೇಕ ರೀತಿಯಲ್ಲಿ ಕಣ್ಣಿಗೆ ಕಂಟಕ ಎದುರಾಗುತ್ತದೆ. ಇವೆಲ್ಲದರ ತಡೆಗಟ್ಟುವ ಹಾಗೂ ಕೂಡಲೇ ಚಿಕಿತ್ಸೆ ವ್ಯವಸ್ಥೆಗೆ ಕೇಂದ್ರದ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣಾ ಕಾರ್ಯಕ್ರಮ ಜೊತೆ ರಾಜ್ಯ ಸರ್ಕಾರ ಆಶಾ ಕಿರಣ ದೃಷ್ಟಿ ಕೇಂದ್ರ ಎಲ್ಲಡೆ ಏಕ ಕಾಲಕ್ಕೆ ತೆರೆದಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಡಳಿತ ವೈದ್ಯಾಧಿಕಾರಿ ಡಾ.ಕೇಶವರಾಜ್ ಮಾತನಾಡಿ ಕಣ್ಣಿನ ಮಹತ್ವ ಎಲ್ಲರಿಗೂ ತಿಳಿದಿದೆ. ಆದರೆ ನೇತ್ರ ಕಾಪಾಡಿಕೊಳ್ಳುವ ಬಗೆ ಮಾತ್ರ ಅರಿತಿಲ್ಲ. ಕಣ್ಣುಗಳ ರಕ್ಷಣೆಗೆ ಗ್ರಾಮೀಣ ಭಾಗದಲ್ಲಿ ಅವಶ್ಯ ಜಾಗೃತಿ ಮೂಡಬೇಕಿದೆ. ಈ ಕೆಲಸ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರ ಮೂಲಕ ನಡೆಸಲಿದೆ. ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆಗೆ ಇಲಾಖೆ ಸಕಲ ವ್ಯವಸ್ಥೆ ಮಾಡಲಿದೆ. ಕೇಂದ್ರದ ಮೊದಲ ದಿನವೇ ನೂರಕ್ಕೂ ಹೆಚ್ಚು ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ತಾಲ್ಲೂಕಿನ ಸಾರ್ವಜನಿಕರು ಈ ಕಣ್ಣಿನ ಕೇಂದ್ರದ ಉಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ನೇತ್ರ ವೈದ್ಯೆ ಡಾ. ಕುಸುಮಾ ಮಾತನಾಡಿ ಕಣ್ಣುಗಳ ರಕ್ಷಣೆಗೆ ಹೆಚ್ಚು ಹಸಿರು ತರಕಾರಿ ಹಾಗೂ ಹಳದಿ ಕೆಂಪು ಹಣ್ಣುಗಳ ಸೇವಿಸಬೇಕಿದೆ. ಸಕ್ಕರೆ ಕಾಯಿಲೆಯು ಉಲ್ಬಣಗೊಂಡಂತೆ ರೆಟಿನೋಪತಿ ಗ್ಲಾಕೋಮದಂತಹ ಮೂಕ ರೋಗಗಳು ಹೆಚ್ಚುತ್ತವೆ. ಈ ನಿಟ್ಟಿನಲ್ಲಿ ಕಣ್ಣಿನ ಬಗ್ಗೆ ಎಚ್ಚರಿಕೆ ವಹಿಸಿ ಪರೀಕ್ಷೆಗೆ ಒಳಗಾಗುವುದು ಸೂಕ್ತ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಕಣ್ಣಿನ ಪರೀಕ್ಷೆಗೆ ಒಳಗಾದ ರೋಗಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಹಾಗೂ ಆನ್ ಲೈನ್ ಮೂಲಕ ಏಕಕಾಲದಲ್ಲಿ ದೃಷ್ಟಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನೇತ್ರ ಪರೀಕ್ಷಕ ಆರ್.ವಿ.ಗೌಡ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...