ಮೈಸೂರು | ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಕೈಬಿಡಿ, ಜನ ಹಿತ ಕಾಪಾಡಿ : ಎಬಿಜಿಪಿ

Date:

ಅಖಿಲ ಭಾರತೀಯ ಗ್ರಾಹಕ ಪಂಚಾಯತಿ ಮೈಸೂರು ಘಟಕದ ವತಿಯಿಂದ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಅವರಿಗೆ ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಮಾಡುವುದನ್ನು ಕೈ ಬಿಟ್ಟು ಜನರ ಹಿತ ಕಾಪಾಡುವಂತೆ ಮನವಿ ಪತ್ರ ಸಲ್ಲಿಸಿದರು.

ಮೈಸೂರು ಬಡಾವಣೆಯ ನಾಗರೀಕರಿಗೆ ಮೂಲಭೂತ ಸೌಲಭ್ಯ ಜೊತೆಯಲ್ಲೆ ಜನನ ಮತ್ತು ಮರಣ ಸಂಧರ್ಭದಲ್ಲಿ ಅವಶ್ಯಕ ವ್ಯವಸ್ಥೆಯನ್ನ ಒದಗಿಸುವುದು ತೆರಿಗೆ ಸಂಗ್ರಹಿಸಿಸುವ ಮೈಸೂರು ಮಹಾನಗರ ಪಾಲಿಕೆ ಕರ್ತವ್ಯ. ಈಗಾಗಲೇ ಪ್ರತಿಯೊಂದು ಮನೆಯಿಂದ ವಾರ್ಷಿಕ ತೆರಿಗೆಯಲ್ಲಿ ₹150 ರೂಪಾಯಿಗಳ ಸೆಸ್ ಸ್ಮಶಾನ ನಿರ್ವಹಣೆಗೆಂದು ಸಂದಾಯ ಮಾಡಿಕೊಳ್ಳುತ್ತಿದೆ.

ನಗರಪಾಲಿಕೆ ಸ್ಮಶಾನದಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿ ವರದಿ ಪಡೆದು ಅಭಿವೃದ್ಧಿಯ ಕೆಲಸಗಳು ಮಾಡದಿರುವುದು ಜನ ಸಾಮನ್ಯರ ಹಿಡಿ ಶಾಪಕ್ಕೆ ಕಾರಣವಾಗುತ್ತಿದೆ. ಸ್ಮಶಾನ ಅಭಿವೃದ್ಧಿ ಬಗ್ಗೆ ಚಿಂತಿಸದ ನಗರ ಪಾಲಿಕೆ ಜನನ, ಮರಣ ವಿಭಾಗದಲ್ಲಿ ಚಿತೆಯಲ್ಲಿ ಕಂತೆ ಕಂತೆ ಹೇಗೆ ಕಿತ್ತುಕೊಳ್ಳಬಹುದು ಎಂದು ಎಬಿಜಿಪಿ ಮುಖಂಡರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಮಶಾನಗಳಲ್ಲಿ ಹೆಣ ಸುಡಲು ( ಅಂತ್ಯ ಸಂಸ್ಕಾರ ) ಮಾಡಲು ₹500 ರೂಪಾಯಿಗಳನ್ನು ನಿಗಧಿಪಡಿಸಿರುವುದು ಮೈಸೂರಿಗರಿಗೆ ಆಗುತ್ತಿರುವ ಅನ್ಯಾಯ. ಸತ್ತವರ ಕುಟುಂಬದಿಂದಲೂ ಹಣ ಕೀಳುವ ಪರಿಸ್ಥಿತಿ ಪಾಲಿಕೆಯದ್ದು. ಯಾವ ಸೌಕರ್ಯ ಒದಗಿಸಲು ಸಾಧ್ಯ ಇಲ್ಲದೆ ಇದ್ದರು ವಸೂಲಿ ಮಾತ್ರ ನಿಲ್ಲುವುದಿಲ್ಲ.

ಜನ ಪ್ರತಿನಿಧಿಗಳೇ ಇಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದುರಾಲೋಚನೆ ಒಬ್ಬ ಬಡ ಸಾಮಾನ್ಯ ಕುಟುಂಬದ ಮೇಲೆ ಬರೆ ಹಾಕುವಂತಾಗಿದೆ. ಸಾವಿನಲ್ಲೂ ಸಂಪನ್ಮೂಲ ತೆಗೆದುಕೊಳ್ಳುತ್ತಿರುವುದು ನಗರ ಪಾಲಿಕೆಯ ಮಾನವೀಯತೆ ಹೀನ, ದುರಾಡಳಿತ, ಭ್ರಷ್ಟಾಚಾರದ ಕೈಗನ್ನಡಿಯಾಗಿದೆ. ಹಾಗಾಗಿ, ಈ ಕೂಡಲೇ ಮೈಸೂರು ಮಹಾನಗರಪಾಲಿಕೆಯ ಆಯುಕ್ತರು, ಜನನ ಮರಣ ವಿಭಾಗದ ಅಧಿಕಾರಿಗಳು ಇದರ ಬಗ್ಗೆ ಪರಿಶೀಲಿಸಿ, ಪರಿಗಣಿಸಿ ಜನರ ಹಿತಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತೀಯ ಪಂಚಾಯತ್ ಮೈಸೂರು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರೆರಚಿ ಅವಮಾನಿಸಿದ ಕಿಡಿಗೇಡಿಗಳು

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಮಾಜಿ ನಗರ ಪಾಲಿಕೆ ಸದಸ್ಯ ಎಂ.ಡಿ. ಪಾರ್ಥಸಾರಥಿ, ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಎಸ್. ಎನ್. ರಾಜೇಶ್, ರವಿಚಂದ್ರ, ಶ್ರೀಧರ್ ಹಾಗೂ ಇನ್ನಿತರರು ಮನವಿ ಸಲ್ಲಿಸುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...