ಗುಬ್ಬಿ | ರೈತ ವಿರೋಧಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಿ : ಕೇಂದ್ರ ಸಚಿವ ವಿ.ಸೋಮಣ್ಣ

Date:

ತುಮಕೂರು ಜಿಲ್ಲೆಯ ರೈತ ವಿರೋಧಿ ಎನಿಸಿದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸಂಬಂಧಪಟ್ಟ ಇಂಜಿನಿಯರ್ ಗಳು ಸ್ಥಗಿತಗೊಳಿಸಿ ವಾಸ್ತವ ಅಂಶ ರೈತರ ಮುಂದಿಡಬೇಕು ಎಂದು ಕೇಂದ್ರ ರೈಲ್ವೆ ಸಚಿವ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಸೂಚಿಸಿದರು.

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಸಂಕಾಪುರ ಬಳಿ ನಡೆದಿದ್ದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು ಎರಡು ಲಕ್ಷ ಮತಗಳ ಅಂತರದಲ್ಲಿ ನನ್ನನ್ನು ಲೋಕಸಭೆಗೆ ಕಳುಹಿಸಿದ ತುಮಕೂರು ಜಿಲ್ಲೆಯ ರೈತರ ಹಿತ ಕಾಯುವ ಕೆಲಸ ಕರ್ತವ್ಯವಾಗಿದೆ. ನಮ್ಮ ಪಾಲಿನ ನೀರು ಹೇಗೆ ಹರಿಸಲು ಸಾಧ್ಯ. 15 ರಿಂದ 20 ಟಿಎಂಸಿ ಹೆಚ್ಚಿನ ಹಂಚಿಕೆ ಮಾಡಿಕೊಂಡು ಮುಖ್ಯ ನಾಲೆ ಮೂಲಕ ಕುಣಿಗಲ್ ಗೆ ಮತ್ತಷ್ಟು ಹೆಚ್ಚಿಗೆ ಹರಿಸಲಿ. ಅದನ್ನು ಬಿಟ್ಟು ನಮ್ಮ ನೀರನ್ನು ತಿರುವಿಸಿದ ಯೋಜನೆ ಬಗ್ಗೆ ಅಧಿಕಾರಿಗಳು ವಾಸ್ತವ ಅಂಶ ಹೇಳಬೇಕಿದೆ ಎಂದರು.

ನಮ್ಮ ನೀರು ಪ್ರತಿಪಾದಿಸಿದ ರೈತರು ನಡೆಸಿದ ಹೋರಾಟ, ಪೊಲೀಸ್ ಕೇಸ್ ಎಲ್ಲವೂ ಕಪ್ಪುಚುಕ್ಕೆಯಾಗಿ ಕಾಣುವ ಮುನ್ನ ಯೋಜನೆಗೆ ತಾರ್ಕಿಕ ಅಂತ್ಯ ಕಾಣಿಸಿ ಕಪ್ಪು ಚುಕ್ಕೆ ಅಳಿಸಬೇಕಿದೆ. ನಮ್ಮ ಪಾಲಿನ ನೀರು ಕಿತ್ತು ಕೊಳ್ಳುವ ಯೋಜನೆ ನಮ್ಮ ಜನ ಒಪ್ಪುವುದಿಲ್ಲ. ತಾಂತ್ರಿಕ ವ್ಯವಸ್ಥೆ ಕೂಡ ಸರಿಯಿಲ್ಲ. ಬಹಳ ಮಂದಿ ಮುಖಂಡರ ಜೊತೆ ಚರ್ಚಿಸಿದ್ದೇನೆ.ಕಳೆದ 15 ವರ್ಷದಿಂದ ಗೊಂದಲ ಉಂಟು ಮಾಡಿದ ಈ ಯೋಜನೆ ಬಗ್ಗೆ ನೀರಾವರಿ ಇಂಜಿನಿಯರ್ ಗಳು ಎಚ್ಚರಿಕೆ ವಹಿಸಿ ಮುಂದುವರೆಯಬೇಕು. ಇತಿಮಿತಿಯಲ್ಲಿ ಅಧಿಕಾರಿಗಳು ಮಾತನಾಡಬೇಕು. ಯಾವ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ವಾಸ್ತವ ಚಿತ್ರಣ ನೀಡಬೇಕು ಎಂದು ತಾಕೀತು ಮಾಡಿದ ಅವರು ನಮ್ಮ ಜಿಲ್ಲೆಯ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಜಿಲ್ಲೆಯ ರೈತರಿಗೆ ಯಾವುದೇ ಅಪಚಾರ ಆಗದಂತೆ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001570550

ಯಾವುದೇ ಪೂರ್ವಗ್ರಹ ಪೀಡಿತರಾಗದೇ ದೊಡ್ಡ ಅಂತರದ ಗೆಲುವು ನೀಡಿದ ಜನರ ಋಣ ತೀರಿಸಬೇಕಿದೆ. ಈ ನಿಟ್ಟಿನಲ್ಲಿ ಯೋಜನೆಯ ಬಗ್ಗೆ ಎಲ್ಲೆಲ್ಲಿ ಮಾತನಾಡಬೇಕೂ ಅಲ್ಲಲ್ಲಿ ಮಾತನಾಡಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿದ್ದೇನೆ. ಗೃಹಮಂತ್ರಿ ಪರಮೇಶ್ವರ್ ಜೊತೆ ಕೂಡಾ ಒಂದು ಗಂಟೆಯ ಚರ್ಚೆ ಮಾಡಿದ್ದೇನೆ. ಜಿಲ್ಲೆಯ 11 ಶಾಸಕರ ಜೊತೆ ಚರ್ಚಿಸಿ ಒಂದು ಅಂತಿಮ ತೀರ್ಮಾನ ಕೈಗೊಳ್ಳುವ ಜೊತೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ನಾಲೆ ಅಗಲೀಕರಣ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನವನ್ನು ಪ್ರಧಾನಿಗಳ ಜೊತೆ ಮಾತನಾಡಿ ಮಂಜೂರು ಮಾಡಿಸೋಣ ಎಂದ ಅವರು ಶಾಶ್ವತ ಪರಿಹಾರ ಕಂಡು ಹಿಡಿಯುವವರೆಗೆ ರೈತರು ಶಾಂತ ರೀತಿ ವರ್ತಿಸಬೇಕಿದೆ. ಇಲ್ಲಿನ ಮುಂದಿನ ಪೀಳಿಗೆ ಶಾಪ ಹಾಕುವ ಮುನ್ನ ಸಮಸ್ಯೆ ಬಗೆಹರಿಸೋಣ. ಈ ಜೊತೆಗೆ ಹೋರಾಟದಲ್ಲಿ ಪಾಲ್ಗೊಂಡು ಮಠಾಧೀಶರ ಮೇಲಿನ ಕೇಸು ವಾಪಸ್ಸಾಗಲಿದೆ. ಯಾರನ್ನೂ ಬಂಧಿಸುವ ಕೆಲಸ ನಡೆಯುವುದಿಲ್ಲ. ಇದೇ ತಿಂಗಳ ಕೊನೆಯ ವಾರದಲ್ಲಿ ಒಂದು ಪರಿಹಾರ ಕಂಡು ಹಿಡಿಯಲಾಗುವುದು. ಅಲ್ಲಿಯವರೆಗೆ ಎಂಜಿನಿಯರ್ ಗಳು ಕೆಲಸ ಸ್ಥಗಿತಗೊಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಎಚ್.ನಿಂಗಪ್ಪ, ಸುಧಾಕರಲಾಲ್, ದಿಶಾ ಸಮಿತಿ ಸದಸ್ಯ ವೈ.ಎಚ್.ಹುಚ್ಚಯ್ಯ, ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಇಂಜಿನಿಯರ್ ಮಹೇಶ್, ಸೂಪರಿಡೆಂಟ್ ಇಂಜಿನಿಯರ್ ಫಣಿರಾಜ್, ಮುಖಂಡರಾದ ಬಿ.ಎಸ್.ನಾಗರಾಜು, ಪಿ.ಬಿ.ಚಂದ್ರಶೇಖರಬಾಬು, ಎಸ್.ಡಿ.ದಿಲೀಪ್ ಕುಮಾರ್, ಸಾಗರನಹಳ್ಳಿ ವಿಜಯಕುಮಾರ್, ಎಸ್.ನಂಜೇಗೌಡ, ರೈತ ಸಂಘದ ವೆಂಕಟೇಗೌಡ, ಕಳ್ಳಿಪಾಳ್ಯ ಲೋಕೇಶ್, ಜಿ.ಎನ್.ಬೆಟ್ಟಸ್ವಾಮಿ, ಹೊನ್ನಗಿರಿಗೌಡ, ಎಚ್.ಟಿ.ಭೈರಪ್ಪ, ಬ್ಯಾಟರಂಗೇಗೌಡ, ಪಂಚಾಕ್ಷರಿ, ಯೋಗಾನಂದಕುಮಾರ, ಸಿದ್ದಗಂಗಮ್ಮ, ಕೊಂಡಜ್ಜಿ ವಿಶ್ವನಾಥ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...