ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ.

ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ. ಇವರು ಸುಮಾರು ಎರಡೂವರೆ ಶತಮಾನಗಳ ಕಾಲ ರಾಜ್ಯಭಾರ ನಡೆಸಿದ ಇತಿಹಾಸ ಇದೆ. ಚಾಲುಕ್ಯರ ಸಾಮಂತರಾಗಿದ್ದ ಇವರು, ಚಾಲುಕ್ಯರ ಅವನತಿಯ ನಂತರ ಸ್ವತಂತ್ರ ಸಾಮ್ರಾಜ್ಯವನ್ನು ಸ್ಥಾಪಿಸಿದರು. ಇವರು ತಮ್ಮನ್ನು ‘ಲಟ್ಟಲೂರ ಪುರವರಾಧೀಶ್ವರ’ ರೆಂದು ಗುರುತಿಸಿಕೊಂಡಿದ್ದಾರೆ. ರಾಷ್ಟ್ರಕೂಟರ ರಾಜಧಾನಿ ಮಳಖೇಡವಾಗಿತ್ತು ಹಾಗೂ ಲಾಂಛನ ‘ಗರುಡ’ ವಾಗಿತ್ತು.

ಕ್ರಿ.ಶ. 735ರಿಂದ 756ರ ವರೆಗೆ ಆಳ್ವಿಕೆ ನಡೆಸಿದ ‘ದಂತಿದುರ್ಗನು’ ರಾಷ್ಟ್ರಕೂಟ ರಾಜ್ಯದ ಸ್ಥಾಪಕ. ಬಾದಾಮಿ ಚಾಲುಕ್ಯರ ಸಾಮಂತನಾಗಿದ್ದ ಈತ, ಕ್ರಿ. ಶ. 752-53ರಲ್ಲಿ ಚಾಲುಕ್ಯರ ಕೊನೆಯ ಅರಸ ಎರಡನೇ ಕೀರ್ತಿವರ್ಮಾನನ್ನು ಸೋಲಿಸಿ ಸ್ವತಂತ್ರ ರಾಜ್ಯ ಸ್ಥಾಪನೆ ಮಾಡಿದನಲ್ಲದೇ, ಮಾಳವ, ಗುಜರಾತ್ ಪ್ರದೇಶಗಳನ್ನು ಆಕ್ರಮಿಸಿಕೊಂಡು ಆ ನಂತರ ಕಂಚಿಯ ಪಲ್ಲವರು, ಮಧುರೈಯ ಪಾಂಡ್ಯರನ್ನು ಸೋಲಿಸಿ ರಾಷ್ಟ್ರಕೂಟರ ಸಾಮ್ರಾಜ್ಯ ಬೆಳೆಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೋಟೆ 2

ಕ್ರಿ. ಶ. 821ರಲ್ಲಿ ಸಿಂಹಾಸನವೇರಿ ಅಧಿಕಾರ ವಹಿಸಿಕೊಂಡಿದ್ದ ರಾಷ್ಟ್ರಕೂಟರ ರಾಜ ಅಮೋಘ ವರ್ಷನು ಅವಿಧೇಯರಾಗಿದ್ದ ಅನೇಕ ಸಾಮಂತರನ್ನು ಬಗ್ಗು ಬಡಿದನಲ್ಲದೆ, ಚಾಲುಕ್ಯರ ದೊರೆ ಗುಣಗ ವಿಜಯಾದಿತ್ಯವನ್ನು ಸೋಲಿಸಿದನು. ಈತನು ಧರ್ಮನಿಷ್ಠನೂ, ಶಾಂತಪ್ರಿಯನೂ ಮತ್ತು ಸ್ವತಃ ಕವಿಯೂ ಆಗಿದ್ದನು. ಅಮೋಘವರ್ಷನಿಗೆ ‘ವೀರನಾರಾಯಣ’ ಎಂಬ ಬಿರುದು ಇತ್ತು. ಕನ್ನಡದ ಮೊದಲ ಕೃತಿ ಎನಿಸಿರುವ ‘ಕವಿರಾಜಮಾರ್ಗ’ ಕೃತಿ ರಚಿಸಿ ಪ್ರಸಿದ್ಧ ದೊರೆ.

ಕ್ರಿ. ಶ. 851ರಲ್ಲಿ ಅರೇಬಿಯಾದ ಪ್ರವಾಸಿ ಸುಲೇಮಾನ್ ಅಮೋಘ ವರ್ಷನ ಆಸ್ಥಾನಕ್ಕೆ ಭೇಟಿ ನೀಡಿದ್ದನು. ಅಮೋಘವರ್ಷ ಅಳ್ವಿಕೆಯಲ್ಲಿ ರಾಷ್ಟ್ರಕೂಟರ ರಾಜಧಾನಿಯನ್ನು ಬೀದರ್ ಜಿಲ್ಲೆಯ ಮಯೂರಖಂಡಿಯಿಂದ ಮಾನ್ಯಖೇಟಕ್ಕೆ ಸ್ಥಳಾಂತರಿಸಿದಾಗ ಮಾನ್ಯಖೇಟವು 814 ರಿಂದ 968 ಎಡಿ ವರೆಗೆ ಪ್ರಾಮುಖ್ಯತೆಗೆ ಏರಿತು. ಸುಮಾರು 64 ವರ್ಷಗಳ ಕಾಲ ರಾಜ್ಯಭಾರ ಮಾಡಿದ ಅಮೋಘವರ್ಷನು ಕ್ರಿ. ಶ. 878ರಲ್ಲಿ ನಿಧನ ಹೊಂದಿದ್ದ.

ಅಮೋಘವರ್ಷನ ನಂತರ ಸಿಂಹಾಸನವೇರಿದ ಯಾವ ರಾಷ್ಟ್ರಕೂಟ ದೊರೆಗಳೂ ಅಷ್ಟು ಪ್ರಬಲರಾಗಿರಲಿಲ್ಲ. ರಾಷ್ಟ್ರಕೂಟರ ಕೊನೆಯ ದೊರೆ ಇಮ್ಮಡಿ ಕರ್ಕನನ್ನು ಕ್ರಿ. ಶ. 973 ರಲ್ಲಿ ಕಲ್ಯಾಣ ಚಾಲುಕ್ಯ ದೊರೆ ಎರಡನೇ ತೈಲಪನು ಸೋಲಿಸಿ ಕಲ್ಯಾಣದ ಚಾಲುಕ್ಯರ ಆಳ್ವಿಕೆಗೆ ತಳಹದಿ ಹಾಕಿದರು.

ಮಾನ್ಯಖೇಟವು ರಾಷ್ಟ್ರಕೂಟರ ಅವನತಿಯ ನಂತರ ಕಲ್ಯಾಣಿ ಚಾಲುಕ್ಯರು ಅಥವಾ ಪಶ್ಚಿಮ ಚಾಲುಕ್ಯರ ರಾಜಧಾನಿಯಾಗಿತ್ತು. ಅಂದಿನ ಪ್ರಮುಖ ಮಳಖೇಡ ಕೋಟೆ ಇಂದು ಅವನತಿಯತ್ತ ತಲುಪಿದೆ.

WhatsApp Image 2024 10 07 at 2.17.47 PM

ಐತಿಹಾಸಿಕ ಚರಿತ್ರೆಯುಳ್ಳ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು ₹5 ಕೋಟಿ ಅನುದಾನ ನೀಡಿ ಜೀರ್ಣೋದ್ದಾರ ಮಾಡಿಸಿದ್ದರು. ಜೊತೆಗೆ ಆಗಿನ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಅವರು ₹1 ಕೋಟಿ ಅನುದಾನ ನೀಡಿದ್ದರು.

ಈ ಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾರ್ಚ್ 4 ಹಾಗೂ 5ರಂದು ರಾಷ್ಟ್ರಕೂಟ ಉತ್ಸವ-2018 ಬಹಳ ವಿಜೃಂಭಣೆಯಿಂದ ಜರುಗಿತ್ತು.

2018ರಲ್ಲಿ ಜೀರ್ಣೋದ್ದಾರದ ಬಳಿಕ ಹಳೆ ಗೋಡೆಗಳು ಬಿದ್ದಿಲ್ಲ. ಆದರೆ, ಜೀರ್ಣೋದ್ದಾರ ಮಾಡಿದ ಗೋಡೆಯೇ ಬಿದ್ದಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.

ಸೇಡಂ

ಐತಿಹಾಸಿ ಮಹತ್ವವುಳ್ಳ ಕೋಟೆಗೆ ಇಂದು ಭದ್ರತೆಯೇ ಎಂಬುದು ಇಲ್ಲದಂತಾಗಿದೆ. ಕೋಟೆಯ ಜೀರ್ಣೋದ್ಧಾರಕ್ಕೆ ಸರಕಾರವು ಅನುದಾನ ಬಿಡುಗಡೆ ಮಾಡಿತ್ತು. ಅಭಿವೃದ್ಧಿ ಮಾಡಿದ ಕೇವಲ ಎಂಟು ತಿಂಗಳಲ್ಲಿ ಕೋಟೆ ಸ್ವಲ್ಪ ಮಳೆ ಬಂದ ಕೂಡಲೇ ಕುಸಿತಕ್ಕೆ ಒಳಗಾಗಿದೆ. ಇದೇ ರೀತಿ ಕೋಟೆಯನ್ನು ಕೈ ಬಿಟ್ಟರೆ ಸಂಪೂರ್ಣ ಭುಕುಸಿತಕ್ಕೆ ಒಳಗಾಗುವುದು ಖಂಡಿತ ಎಂಬುದು ಇಲ್ಲಿನ ಜನರ ಅಭಿಪ್ರಾಯ ಆಗಿದೆ.

ಸರ್ಕಾರ ಸರಿಯಾದ ಕ್ರಮ ಕೈಗೊಂಡು, ಐತಿಹಾಸಿಕ ಸ್ಮಾರಕವನ್ನು ಉಳಿಸಬೇಕೆಂಬುದು ಜನರ ಮನವಿ. ಜಿಲ್ಲೆಯ ಇಬ್ಬರು ಸಚಿವರಾದ ಶರಣಪ್ರಕಾಶ ಪಾಟೀಲ ಹಾಗೂ ಪ್ರಿಯಾಂಕ್ ಖರ್ಗೆಯವರು ಇದಕ್ಕೆ ಯಾವ ರೀತಿಯ ಸ್ಪಂದನೆ ನೀಡುತ್ತಾರೆ ಎಂದು ಕಾದು ನೋಡಬೇಕಿದೆ.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...