ದಾವಣಗೆರೆ | ಕಾರ್ಮಿಕರ ಮಕ್ಕಳಿಗೆ ಶೀಘ್ರದಲ್ಲಿ ವಿದ್ಯಾರ್ಥಿ ವೇತನ; ಸಚಿವ ಸಂತೋಷ್ ಲಾಡ್

Date:

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ ಸಂಘಟಿತ, ಅಸಂಘಟಿತ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಂದ ಅಹವಾಲು ಆಲಿಸಿ ಸರ್ಕಾರದಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಈ ಪ್ರಕ್ರಿಯೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮೂಲಕ ಇದರ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಲು ಹೊಸ ಕಾನೂನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೊಸ ಟೆಕ್ನಾಲಜಿ ಆಪ್ ಬಿಡುಗಡೆ ಮಾಡಲಾಗುತ್ತದೆ. ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ.

ಮನೆ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಇ-ಕಾಮರ್ಸ್‍ನಲ್ಲಿ ಕೆಲಸ ಮಾಡುವವರಿಗೆ ʼಗಿಗ್ʼ ಕಾರ್ಮಿಕರೆಂದು ಕರೆಯಲಾಗುತ್ತದೆ. ಇವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಲಾಗಿದ್ದು, ಮನೆ ಕೆಲಸದ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಆಸ್ತಿ ತೆರಿಗೆಯಲ್ಲಿ ಸೆಸ್ ಸಂಗ್ರಹಿಸುವ ಮೂಲಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶವಿದ್ದು, ಈ ವರ್ಷದಲ್ಲಿ ಅನುಷ್ಟಾನಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಮಿಕರ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆಯನ್ನು ಸ್ಥಾಪಿಸಲಾಗುತ್ತಿದ್ದು ಕನಿಷ್ಠ ವೇತನವನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರಿಗೆ ಟೋಲ್ ಫ್ರೀ ಸಂಖ್ಯೆಯಿಂದ ಪರಿಹಾರ, ತಾತ್ಕಾಲಿಕ ಸಹಾಯ ಮತ್ತು ಕುಂದುಕೊರತೆಗಳ ನಿವಾರಣೆಗೆ ಸಹಕಾರಿಯಾಗಲಿದೆ.

ಹೊರಗುತ್ತಿಗೆ ಕಾರ್ಮಿಕರ ಹಿತ ಕಾಪಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾವಾರು ಹೊರಗುತ್ತಿಗೆ ಸೊಸೈಟಿ ಮಾಡುವ ಮೂಲಕ ಈಗಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸೊಸೈಟಿ ಮೂಲಕ ಇಪಿಎಫ್, ಇಎಸ್‍ಐ ಸೌಲಭ್ಯಗಳು ತ್ವರಿತಗತಿಯಲ್ಲಿ ಸಿಗುವಂತೆ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ವಲಯದಲ್ಲಿ ವಿವಿಧ ಜಿಲ್ಲೆಗಳಲ್ಲಿ 4 ಲಕ್ಷಕ್ಕಿಂತ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು ಇವರೆಲ್ಲರಿಗೂ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಟ್ರೇಡ್ ಯೂನಿಯನ್ ಪದಾಧಿಕಾರಿಗಳು, ಎಐಟಿಸಿ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಟೈಲರ್ ಸಂಘದ ಪದಾಧಿಕಾರಿಗಳು, ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು, ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಯಿಸಿನ್, ಆಯುಕ್ತ ಡಾ. ಎಚ್.ಎನ್. ಗೊಪಾಲಕೃಷ್ಣ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಡಿ. ಭಾರತಿ, ಪ್ಯಾಕ್ಟರೀಸ್ ಮತ್ತು ಬಾಯ್ಲರ್ಸ್ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...