ಬೀದರ್‌ | ವಿದ್ಯಾರ್ಥಿಗಳು ಮೌಢ್ಯ ತೊರೆದು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಗುಂಡಪ್ಪ ಹುಡಗೆ

Date:

ಮೌಢ್ಯ ತೊರೆದು ವಿಜ್ಞಾನದ ತಳಹದಿಯ ಮೇಲೆ ಮಕ್ಕಳು ಜೀವನ ರೂಪಿಸಿಕೊಳ್ಳಬೇಕು ಎಂದು ಸಮಗ್ರ ಶಿಕ್ಷಣ ಯೋಜನಾ ಸಮನ್ವಯಾಧಿಕಾರಿ ಗುಂಡಪ್ಪ ಹುಡಗೆ ಸಲಹೆ ನೀಡಿದರು.

ಔರಾದ ತಾಲೂಕಿನ ಎಕಲಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ರಜೆ ಸದ್ಬಳಕೆ ಹಿನ್ನೆಲೆ ಬುಧುವಾರ ಆಯೋಜಿಸಿರುವ ʼವೈಜ್ಞಾನಿಕ ಚಿಂತನೆ ಹಾಗೂ ಅಧ್ಯಯನʼ ಶಿಬಿರದಲ್ಲಿ ಅವರು ಮಾತನಾಡಿದರು.

“ಪ್ರತಿಯೊಂದು ವೈಜ್ಞಾನಿಕ ದೃಷ್ಟಿಕೋನದಿಂದ ಕಲಿಯಬೇಕು. ಸ್ವಾಮಿ ವಿವೇಕಾನಂದ, ಡಾ. ಬಿ.ಆರ್ ಅಂಬೇಡ್ಕರ್, ಮಹಾತ್ಮ ಬುದ್ದ, ಬಸವ, ಗಾಂಧೀಜಿ, ಸಿ.ವಿ ರಾಮನ್, ಅಬ್ದುಲ್ ಕಲಾಂ ಸೇರಿದಂತೆ ಇನ್ನಿತರ ಸಾಧಕರ ವೈಜ್ಞಾನಿಕ ಹಾಗೂ ವೈಚಾರಿಕ ವಿಚಾಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು” ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೌಢಶಾಲಾ ಶಿಕ್ಷಕ ಸಂಘದ ನಿರ್ದೇಶಕ ಶಾಮಸುಂದರ್ ಖಾನೂಪೂರೆ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮನುಷ್ಯತ್ವದ ಕೊರತೆ ಎದ್ದು ಕಾಣುತ್ತಿದೆ. ಮಾಢ್ಯದಿಂದ ಮುಗ್ಧ ಜನರು ಯಾವೆಲ್ಲ ರೀತಿ ವಂಚನೆಗೆ ಒಳಗಾಗುತ್ತಾರೆ ಎಂಬುದನ್ನು ಹಲವಾರು ನಿದರ್ಶನಗಳ ಮೂಲಕ ಮಕ್ಕಳಿಗೆ ತಿಳಿಸಿದರು.

ಶಿಬಿರದ ಸಂಯೋಜಕ ಶಿಕ್ಷಕ ಬಾಲಾಜಿ ಅಮರವಾಡಿ ಮಾತನಾಡಿ, “ಮಕ್ಕಳು ಚಿಕ್ಕಂದಿನಿಂದಲೇ ವೈಜ್ಞಾನಿಕವಾಗಿ ಯೋಚಿಸಲು ಶಕ್ತರಾಗಬೇಕು ಮತ್ತು ದಸರಾ ರಜೆಯ ಸದುಪಯೋಗವಾಗಲಿ ಎಂಬ ಉದ್ದೇಶದಿಂದ ಈ ಶಿಬಿರ ಏರ್ಪಡಿಸಲಾಗಿದ್ದು, ಅಕ್ಟೋಬರ್ 18 ರವರೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರಾಫ್ಟ್, ಯೋಗ ಮತ್ತು ಧ್ಯಾನ ಸೇರಿದಂತೆ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಪೂರಕವಾದ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಚೆಂಡು ಹೂ ಕೃಷಿ : ಉತ್ತಮ ಆದಾಯದ ನಿರೀಕ್ಷೆಯಲ್ಲಿ ಯುವ ರೈತ

ಕಾರ್ಯಕ್ರಮದಲ್ಲಿ ಕೊಳ್ಳೂರ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ ಪಾಂಡ್ರೆ, ಮಾಜಿ ಸೈನಿಕ ನಾಗುರಾಂ, ಸಿಆರ್‌ಪಿ ಮಹಾದೇವ ಘೂಳೆ, ಅನೀಲಕುಮಾರ ಮಾಟೆ, ಎಸ್‌ಡಿಎಂಸಿ ಸದಸ್ಯ ಶಿವಾನಂದ ಬಿರಾದಾರ್, ಮುಖ್ಯ ಶಿಕ್ಷಕ ಪ್ರಭು ಬಾಳೂರೆ ಹಾಗೂ ಶಿಕ್ಷಕರಾದ ಅಂಕುಶ ಪಾಟೀಲ್, ಸಿದ್ದೇಶ್ವರಿ, ರೂಪಾ, ಕಿರಣ ಹಿಪ್ಪಳಗಾವೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...