ಸುಬ್ರಹ್ಮಣ್ಯ | ಇಂದಿನಿಂದ ಕುಮಾರ ಪರ್ವತಕ್ಕೆ ಚಾರಣ: ಆನ್‌ಲೈನ್‌ ನೋಂದಣಿ ಮಾಡಿದರಷ್ಟೇ ಅವಕಾಶ

Date:

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಇಂದಿನಿಂದ(ಅ.6) ಆರಂಭಗೊಂಡಿದ್ದು, ಆನ್‌ಲೈನ್‌ ಮೂಲಕ ನೋಂದಾಯಿಸಿದವರಿಗೆ ಮಾತ್ರ ಚಾರಣಕ್ಕೆ ಅವಕಾಶ ಇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಲು ಕುಕ್ಕೆ ಸಮೀಪದ ದೇವರಗದ್ದೆ ಎಂಬಲ್ಲಿಂದ ಅರಣ್ಯ ಪ್ರವೇಶಿಸಬೇಕು. ಸೋಮವಾರ ಪೇಟೆ ಬಳಿಯಿಂದಲೂ ಚಾರಣ ಆರಂಭಿಸಬಹುದು. ಕಳೆದ ವರ್ಷ ಕುಮಾರ ಪರ್ವತ ಚಾರಣಕ್ಕೆ ಭಾರೀ ಸಂಖ್ಯೆಯ ಚಾರಣಿಗರು ಬಂದಿದ್ದರಿಂದ ಸೀಮಿತ ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್, ಹೊಸ ಮಾರ್ಗಸೂಚಿಯೊಂದಿಗೆ ಪರಿಸರ ಸ್ನೇಹಿ ಚಾರಣಕ್ಕೆ ಅವಕಾಶ ನೀಡುವ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ವರ್ಷದಿಂದ ಅರಣ್ಯ ಇಲಾಖೆಯ ಅರಣ್ಯ ವಿಹಾರ ಎಂಬ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಸಿಕೊಂಡು ಚಾರಣ ಕೈಗೊಳ್ಳಬಹುದು. ದಿನಕ್ಕೆ 335 ಚಾರಣಿಗರಿಗೆ ಮಾತ್ರ ಅವಕಾಶ ಇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಕ್ಕೆ ಸುಬ್ರಹ್ಮಣ್ಯ – ಕುಮಾರಪರ್ವತ, ಕೊಡಗಿನ ಬೀದಹಳ್ಳಿ – ಕುಮಾರಪರ್ವತ – ಬೀದಹಳ್ಳಿ, ಬೀದಹಳ್ಳಿ- ಕುಮಾರಪರ್ವತ – ಸುಬ್ರಹ್ಮಣ್ಯ ಎಂಬ ಮೂರು ಆಯ್ಕೆಗಳನ್ನು ಪ್ರವೇಶ ಚಾರಣ ಮಾರ್ಗ ಆಯ್ಕೆ ಆನ್‌ಲೈನ್‌ ಬುಕ್ಕಿಂಗ್‌ನಲ್ಲಿ ಸೂಚಿಸಲಾಗಿದೆ.

ಕುಮಾರಪರ್ಚತ

ಕುಮಾರ ಪರ್ವತಕ್ಕೆ ಚಾರಣ ಕೈಗೊಳ್ಳುವವರು ಗಿರಿಗದ್ದೆಯಲ್ಲಿ ವಾಸ್ತವ್ಯ ಮಾಡಿ ಮರುದಿನ ಬೆಳಗ್ಗೆ ಕುಮಾರ ಪರ್ವತದ ಮೇಲಿನ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ, ಈ ಬಾರಿ ಗಿರಿಗದ್ದೆಯಲ್ಲಿ ತಂಗುವುದನ್ನು ನಿರ್ಬಂಧಿಸಲಾಗಿದೆ.

ಕುಮಾರ ಪರ್ವತ ಚಾರಣ ಪ್ರವೇಶಕ್ಕೆ ಬೆಳಗ್ಗೆ 6ರಿಂದ 9ರ ಅವಧಿಯಲ್ಲಿ ಪ್ರವೇಶಿಸಬೇಕು. 11 ಗಂಟೆಗೆ ಗಿರಿಗದ್ದೆಯಿಂದ ಮೇಲಿನ ಪ್ರದೇಶಕ್ಕೆ ತೆರಳಬೇಕು. ಸಂಜೆ 6 ಗಂಟೆಗೂ ಮುನ್ನ ಚಾರಣದಿಂದ ನಿರ್ಗಮಿಸಬೇಕು. ಚಾರಣದ ಮಧ್ಯೆ ತಂಗಲು ಅವಕಾಶ ಇಲ್ಲ ಎಂಬುದೂ ಸೇರಿದಂತೆ ವಿವಿಧ ಮಾರ್ಗಸೂಚಿಗಳನ್ನು ಅರಣ್ಯ ಇಲಾಖೆ ಹೊರಡಿಸಿದೆ. ಅವುಗಳನ್ನು ಪಾಲಿಸದಿದ್ದಲ್ಲಿ ಸೂಕ್ತ ಕ್ರಮದ ಎಚ್ಚರಿಕೆಯನ್ನೂ ಕೂಡ ಚಾರಣಿಗರಿಗೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಸೇತುವೆ ಮೇಲೆ ಕಾರು ಪತ್ತೆ

ಗಿರಿಗದ್ದೆಯಲ್ಲಿ ಈ ಬಾರಿ ತಂಗಲು ಅವಕಾಶ ನಿರ್ಬಂಧಿಸಿರುವುದರಿಂದ ಸುಬ್ರಹ್ಮಣ್ಯದಿಂದ ಸುಮಾರು 12 ಕಿ.ಮೀ. ದೂರದ ಕಠಿಣ ಹಾದಿಯ ಕುಮಾರ ಪರ್ವತವನ್ನು ಗರಿಷ್ಠ 12 ಗಂಟೆಯೊಳಗೆ ವೀಕ್ಷಿಸಿ ಹಿಂದಿರುಗುವಂತೆ ಚಾರಣಿಗರಿಗೆ ನಿರ್ದೇಶನ ನೀಡಲಾಗಿದೆ.

ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕಾದ ವೆಬ್‌ಸೈಟ್ ವಿಳಾಸ: ನೋಂದಣಿ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.
https://aranyavihaara.karnataka.gov.in/login

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...