ಬೀದರ್‌ | ವ್ಯಕ್ತಿಯಲ್ಲಿ ಬದಲಾವಣೆ ಲಕ್ಷಣ ಕಂಡರೆ ಆತ್ಮಹತ್ಯೆ ತಡೆಯಲು ಸಾಧ್ಯ: ನ್ಯಾ. ಕನಕಟ್ಟೆ

Date:

  • ಆತ್ಮಹತ್ಯೆಗೆ ಒಳಗಾಗುವುದು ಒಂದೇ ಪರಿಹಾರವಲ್ಲ, ಸಮಸ್ಯೆಗಳು ಧೈರ್ಯದಿಂದ ಎದುರಿಸಬೇಕು.
  • ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಅವಶ್ಯಕ

ಆತ್ಮಹತ್ಯೆ ತಡೆಯಲು ಮೊದಲು ವ್ಯಕ್ತಿಯಲ್ಲಿನ ಲಕ್ಷಣಗಳನ್ನು ಕಂಡು ಹಿಡಿದು, ಅವರ ಮನ ನೋವಾಗದಂತೆ ನೋಡಿಕೊಳ್ಳಬೇಕು. ಶಿಕ್ಷಣ , ಹುದ್ದೆಯಲ್ಲಿ ಮನನೊಂದವರು ಆತ್ಮಹತ್ಯೆಗೆ ಶರಣಾಗುವುದು ಮೂಲ ಕಾರಣವಿರುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪಾ ಕೆ. ಕನಕಟ್ಟೆ ಹೇಳಿದರು.

ಬೀದರ ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ” ನಾವು ನಮ್ಮ ಹತ್ತಿರ ಇರುವ ವಿಷಯವನ್ನು ಬೇರೊಬ್ಬರಿಗೆ ಹಂಚಿಕೊಳ್ಳುವುದರಿಂದ ಒಳ್ಳೆಯ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಓದಿನಲ್ಲಿ ಮಕ್ಕಳು ಕಡಿಮೆ ಓದಿದ್ದೇನೆ ಎಂದು ಕುಗ್ಗದೇ ಹೆಚ್ಚು ಓದಿ, ಒಳ್ಳೆ ಹುದ್ದೆಯಿದೆ ಎಂದು ಹಿಗ್ಗದೇ, ಸಮವಾಗಿರಬೇಕು” ಎಂದರು.

ಕೆ.ಆರ್.ಇ.ಸಂಸ್ಥೆ ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ್ ಮಾತನಾಡಿ, “ಸಮಸ್ಯೆಗಳು ಧೈರ್ಯದಿಂದ ಎದುರಿಸಬೇಕು, ಆತ್ಮಹತ್ಯೆಗೆ ಒಳಗಾಗುವುದು ಒಂದೇ ಪರಿಹಾರವಲ್ಲ, ಮೊದಲು ಸೂಕ್ಷ್ಮ ಆಪ್ತಸಮಾಲೋಚಕರು ಮತ್ತು ಮನೋವೈದ್ಯರ ಸಲಹೆಯನ್ನು ಪಡೆಯುವಂತೆ” ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ್ ಮಾತನಾಡಿ, “ಆತ್ಮಹತ್ಯೆಗೆ ಒಳಗಾಗುವ ಮೊದಲು ವ್ಯಕ್ತಿಯ ವರ್ತನೆಯನ್ನು ಗಮನಿಸಬೇಕು. ನಿದ್ದೆ ಬರದೆ ಇರುವುದು, ಅತೀಯಾದ ಸಿಟ್ಟು, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೆ ಇರುವುದು, ಒಂಟಿಯಾಗಿರುವುದು ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ, ಮನೋವೈದ್ಯರ ಹಾಗೂ ಆಪ್ತಸಮಾಲೋಚಕರ ಸಲಹೆಯನ್ನು ಪಡೆದುಕೊಳ್ಳಬೇಕೆಂದು” ಹೇಳಿದರು.

ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಅನೀಲಕುಮಾರ ಚಿಕ್ಕಮಣನೂರ ಮಾತನಾಡಿ, “ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವನ್ನು ಪಡೆಯಲು ಮುಜುಗರ ಪಡದೆ ಸಾಧ್ಯವಾದಲ್ಲಿ 14416 ಟೆಲಿ ಮಾನಸಾ ಟೊಲ್‌ಫ್ರೀ ನಂಬರ್‌ಗೆ ಕರೆ ಮಾಡಿ, ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಹೇಳಿದರು.

ಹಿರಿಯ ವಕೀಲ ಬಿ.ಎಸ್. ಪಾಟೀಲ್ , ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ. ಅಮಲ ಶರೀಫ್ ಮಾತನಾಡಿದರು. ಮಾನಸಿಕ ಆರೋಗ್ಯ ವಿಭಾಗ, ಬ್ರಿಮ್ಸ್ ಆಸ್ಪತ್ರೆಯ ಮನೋವೈದ್ಯ ಡಾ. ರಾಘವೇಂದ್ರ ವಾಗೋಲೆ ರವರು ಆತ್ಮಹತ್ಯೆ ತಡೆಗಟ್ಟುವ ಕುರಿತು ಉಪನ್ಯಾಸವನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಕಾರ್ಯಕ್ರಮದಲ್ಲಿ ಹಿರಿಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಮಲ್ಲಿಕಾರ್ಜುನ ಗುಡ್ಡೆ, ಆಪ್ತ ಸಮಾಲೋಚಕಿ ರೇಣುಕಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಶಾಮರಾವ, ರಮೇಶ, ಅಬ್ದುಲ ಹೈ, ಇಮಾನುವೇಲ್, ಜ್ಯೋತಿ, ಬ್ರಹ್ಮರಾಂಭದೇವಿ, ಸಾಮಾಜಿಕ ಕಾರ್ಯಕರ್ತ ಪರಶುರಾಮ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...