ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಸುಜಾತಾ ಭಟ್ ಪರ ವಕೀಲರ ಆಗ್ರಹ

Date:

ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್‌ ಎನ್ ಅವರು ಆಗ್ರಹಿಸಿದ್ದಾರೆ.

ಎಲ್ಲ ಶವಗಳನ್ನು ಸೂಕ್ತ ದಾಖಲಾತಿಯೊಂದಿಗೆ ಅಧಿಕೃತ ಮಾರ್ಗಗಳ ಮೂಲಕ ಹೂಳಲಾಗಿತ್ತು ಎಂದು ಹೇಳಿಕೆ ನೀಡಿದ್ದ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು. ಅವರ ಹೇಳಿಕೆಯ ಹಿಂದೆ ಹಲವು ಅನುಮಾನಗಳಿವೆ. ಈ ಪ್ರಕರಣದಲ್ಲಿ ನಡೆದ ಬೆಳವಣಿಗೆಗಳು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರ ಪೊಳ್ಳು ಹೇಳಿಕೆಗಳನ್ನು ಬಹಿರಂಗಪಡಿಸಿವೆ ಎಂದು ವಕೀಲ ಮಂಜುನಾಥ್ ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರುದಾರರು ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ನೇತ್ರಾವತಿ ನದಿಯ ಬಳಿ ಅಪಾಯಕಾರಿ ಸ್ಥಳಗಳಲ್ಲಿ ಬಹು ಸಮಾಧಿ ಸ್ಥಳಗಳಿಗೆ ಕರೆದೊಯ್ದರು. ಇದು ಎಷ್ಟು ಅಪಾಯಕಾರಿ ಭೂಪ್ರದೇಶ ಎಂದರೆ ದೇಶದಲ್ಲಿ ಎಲ್ಲಿಯೂ ಯಾವುದೇ ಪಂಚಾಯತ್ ಅಧಿಕೃತ ಅಂತ್ಯಕ್ರಿಯೆಗಳಿಗಾಗಿ ಅಂತಹ ಸ್ಥಳಗಳನ್ನು ಆಯ್ಕೆ ಮಾಡುವುದಿಲ್ಲ. ಎಸ್‌ಐಟಿ ಗುರುತಿಸಿರುವ ಈ ಸ್ಥಳಗಳು 1980 ರ ದಶಕದಿಂದ ವ್ಯವಸ್ಥಿತ, ದಾಖಲಿತ ಹೂಳುವಿಕೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ನೀಡಿದ ಹೇಳಿಕೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಸುಜಾತಾ ಭಟ್ ಪರ ವಕೀಲರು ಹೇಳಿದ್ದಾರೆ.

ಸಂಬಂಧಿಕರು ಸಿಕ್ಕಾಗ ಶವಗಳನ್ನು ಹೊರತೆಗೆಯಲು ಅಲ್ಲಿ ಹೂಳಲಾಗಿತ್ತು ಎಂದು ರಾವ್ ಹೇಳಿಕೊಂಡಿದ್ದರು. ಆದರೆ ಸೋಮವಾರ ಗುರುತಿಸಲಾದ ಸ್ಥಳಗಳು ಅಪಾಯಕಾರಿಯಾಗಿದ್ದು ಅಲ್ಲಿಗೆ ತೆರಳುವುದೂ ಕಷ್ಟವಾಗಿದೆ. ಹಾಗಿರುವಾಗ ಯಾವುದೇ ವಿವೇಕಯುತ ಪಂಚಾಯತ್ ಆಡಳಿತವು ಈ ಸ್ಥಳವನ್ನು ಮೃತದೇಹ ಹೂಳಲು ಈ ಸ್ಥಳಗಳನ್ನು ನೀಡುವುದಿಲ್ಲ. ಈ ಸ್ಥಳಗಳು ಯಾವುದೇ ಗೊತ್ತುಪಡಿಸಿದ ಬಯಲು ಮತ್ತು ಸುಲಭವಾಗಿ ತಲುಪಬಹುದಾದ ಸ್ಥಳದಲ್ಲಿಲ್ಲ. ಅಪಾಯಕಾರಿ ಅರಣ್ಯದಂತಹ ಪ್ರದೇಶಗಳಲ್ಲಿದೆ. ಇದು ಅಧಿಕೃತ ಪಂಚಾಯತ್ ಕಾರ್ಯವಿಧಾನಗಳಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವುದಿಲ್ಲ. ಪಂಚಾಯತ್ ದುಃಖಿತ ಕುಟುಂಬಗಳನ್ನು ಈ ಅಪಾಯಕಾರಿ ಸ್ಥಳಗಳಿಗೆ ಸುರಕ್ಷಿತವಾಗಿ ಹೇಗೆ ಕರೆದೊಯ್ಯಬಲ್ಲದು” ಎಂದು ಪ್ರಶ್ನಿಸಿದ್ದಾರೆ.

“ಮಾಹಿತಿ ಬಹಿರಂಗಪಡಿಸಿದವರು ಎಸ್‌ಐಟಿಗೆ ಹಲವು ಗುಪ್ತ ಸ್ಥಳಗಳನ್ನು ತೋರಿಸಲು ಗಂಟೆಗಟ್ಟಲೆ ತೆಗೆದುಕೊಂಡರು. ಒಂದೇ ಒಂದು ಸಮಾಧಿ ಸ್ಥಳವೂ ಅಧಿಕೃತ ಕಾರ್ಯವಿಧಾನಗಳ ಪ್ರಕಾರ ಇಲ್ಲ. ಆದ್ದರಿಂದಾಗಿ ಶ್ರೀನಿವಾಸ್ ರಾವ್ ಅವರ ಪಾತ್ರದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟಿದೆ” ಎಂದು ವಕೀಲರು ಹೇಳಿದ್ದಾರೆ.

“ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ರಾವ್ ಅವರನ್ನು ತಕ್ಷಣ ಬಂಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಸಾರ್ವಜನಿಕರನ್ನು ದಾರಿ ತಪ್ಪಿಸಲು ಮತ್ತು ಕೊಲೆ ತನಿಖೆಗೆ ಅಡ್ಡಿಪಡಿಸಲು ಸಕ್ರಿಯವಾಗಿ ಪ್ರಯತ್ನಿಸಿದ ವ್ಯಕ್ತಿಯಾದ, ಈ ಕೊಲೆಗಳ ಹಿಂದಿರುವ ನಿಜವಾದ ಅಪರಾಧಿಗಳನ್ನು ಮುಚ್ಚಿಡುವುದರ ಹಿಂದಿರುವ ವ್ಯಕ್ತಿಗಳು, ಪಂಚಾಯತ್ ಅಧಿಕಾರಿಗಳು ಮತ್ತು ಜವಾಬ್ದಾರಿಯುತ ವ್ಯಕ್ತಿಗಳ ನಡುವಿನ ಸಂಬಂಧದ ಬಗ್ಗೆ ರಾವ್ ಅವರಿಗೆ ನಿರ್ಣಾಯಕ ಮಾಹಿತಿ ಇರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...