ಸುಳ್ಯ | ಯು ಟಿ ಖಾದರ್‌ ವಿರುದ್ಧ ಆಧಾರರಹಿತ ಆರೋಪ ಖಂಡನೀಯ: ಟಿ ಎಂ ಶಹೀದ್ ತೆಕ್ಕಿಲ್

Date:

ಯು ಟಿ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ ವಿಶ್ವ ಮನ್ನಣೆಗಳಿಸಿ ಕರುನಾಡಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದ ಆಧಾರರಹಿತ ಆರೋಪ ಮಾಡುವುದು ಖಂಡನೀಯ ಎಂದು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, “ಅತಿ ಕಿರಿಯ ವಯಸ್ಸಿನಲ್ಲಿ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿ ಜನಪರ ಮತ್ತು ಸಂವಿಧಾನಪರವಾಗಿ ಕೆಲಸ ಮಾಡಿ ಜನಪ್ರಿಯತೆಗಳಿಸಿರುವುದನ್ನು ಸಹಿಸಲಾಗದೆ ಈ ಹಿಂದಿನ ಸ್ಪೀಕರ್ ಕಾಗೇರಿಯವರು ಮತ್ತು ಪ್ರತಿಪಕ್ಷಗಳ ಕೆಲವು ಶಾಸಕರು ಮಾಡಿರುವ ಆಧಾರರಹಿತ ಆರೋಪ ದುರುದ್ದೇಶ ಪೂರಿತವಾಗಿರುತ್ತದೆ. ಅಲ್ಲದೆ ತಮ್ಮ ಪ್ರಚಾರಕ್ಕಾಗಿ ಹೀಗೆ ಆರೋಪ ಮಾಡಿರುವುದನ್ನು ಕಟುವಾದ ಶಬ್ದಗಳಿಂದ ಖಂಡಿಸುತ್ತೇನೆ” ಎಂದರು.

“ಹಿಂದಿನ ಸಭಾಪತಿಗಳು ಅಧಿಕಾರ ದುರುಪಯೋಗ, ಸ್ವೇಚ್ಛಾಚಾರ, ಸ್ವಜನ ಪಕ್ಷಪಾತ ಮಾಡಿ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ವಿನಾಕಾರಣ ಕೋಮುಭಾವನೆ ಕೆರಳಿಸಿ ದ್ವೇಷ ಉಂಟುಮಾಡುತ್ತಿದ್ದಾರೆ. ಅದೂ ಕೂಡ ಕೇವಲ ಮತಗಳಿಸುವ ಉದ್ದೇಶದಿಂದ ಮಾತ್ರ. ಜಿಲ್ಲೆಗೆ ಅವರ ಕೊಡುಗೆ ಏನು? ಖಾದರ್ ಅವರು ಎಲ್ಲ ಜಾತಿ, ಧರ್ಮ ಹಾಗೂ ಪಕ್ಷದವರನ್ನು ಒಂದೇ ಭಾವನೆಯಲ್ಲಿ ನೋಡುತ್ತಿದ್ದು, ಅವರನ್ನು ನೋಡಿ ಯಾರಾದರೂ ಮಾದರಿಯಾಗಿ ಕೆಲಸ ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವೇಶ್ವರ ಕಾಗೇರಿ ಮತ್ತು ಬೋಪಯ್ಯ ಅವರ ಅವಧಿಯಲ್ಲಾದ ಹಣಕಾಸಿನ ಬಿಡುಗಡೆ ಬಗ್ಗೆ ತನಿಖೆ ನಡೆಸಬೇಕು” ಎಂದು ಸ್ಪೀಕರ್ ಅವರನ್ನು ಒತ್ತಾಯಿಸಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, “ಯು ಟಿ ಖಾದರ್ ಅವರು ಜಾತಿ, ಮತ, ಪಕ್ಷ, ಪಂಥವೆಂಬ ಯಾವುದೇ ಭೇದವಿಲ್ಲದೆ, ಸಾಂಧಾನಿಕ ಹುದ್ದೆಯಲ್ಲಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಪ್ರತಿ ಬಾರಿ ಅಧಿವೇಶನದ ಸಂದರ್ಭದಲ್ಲಿ ಹೊಸತನ ತಂದು ಎಲ್ಲ ಪಕ್ಷದ ಶಾಸಕರುಗಳಿಂದ ಪ್ರಶಂಸಿಸಲ್ಪಡುತ್ತಾರೆ. ಇದನ್ನು ಸಹಿಸದೆ ಆರೋಪಿಸುವುದು ದುರದೃಷ್ಟಕರ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸುಡ) ಅಧ್ಯಕ್ಷ ಕೆ ಎಂ ಮುಸ್ತಫಾ ಮಾತನಾಡಿ, “ಬೆಳಗಾವಿ ಸುವರ್ಣ ಸೌಧದಲ್ಲಿ ಬಸವಣ್ಣನವರ ಅನುಭವ ಪಂಟಪ, ಖ್ಯಾತ ಉದ್ಯಮಿಗಳು, ವಿಶೇಷ ಸಾಧಕರು ಹಾಗೂ ಕಟ್ಟಕಡೆಯ ವ್ಯಕ್ತಿಗಳಾದ ಬೀದಿ ವ್ಯಾಪಾರ ಮಾಡಿ ಮಕ್ಕಳನ್ನು ಸಮಾಜದ ಗಣ್ಯರನ್ನಾಗಿಸಿದ ಮಹಾನುಭಾವರನ್ನು ಸದನಕ್ಕೆ ಪರಿಚಯಿಸಿ ಪ್ರತಿಪಕ್ಷ, ಆಡಳಿತ ಪಕ್ಷದ ನಾಯಕರುಗಳಿಂದ ಭೇಷ್ ಎನಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಅಧಿವೇಶನ ಕಲಾಪ ವೀಕ್ಷಿಸಿ ಮಾದರಿ ವಿದ್ಯಾರ್ಥಿ ಸಂಸತ್ತು ಮೂಲಕ ಶಾಲೆಗಳಲ್ಲಿ ಪ್ರಜಾಪ್ರಭುತ್ವದ ಸೌಂದರ್ಯವನ್ನು ಹೆಚ್ಚಿಸಿದ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ. ಇದೆಲ್ಲವೂ ಇತಿಹಾಸ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಹಾರ ಚುನಾವಣೆ | ವಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಧಾಕೃಷ್ಣ ಬೊಳ್ಳುರು ಮಾತನಾಡಿ, “ಖಾದರ್ ಅವರು ಸೇವೆ ಮತ್ತು ನಡವಳಿಕೆಗಳಿಗೆ ಮಾದರಿಯಾಗಿದ್ದಾರೆ. ಎಲ್ಲ ಪಕ್ಷದವರನ್ನೂ ಗೌರವಿಸುತ್ತಾರೆ. ಅಂಥವರ ಬಗ್ಗೆ ಕ್ಷುಲ್ಲಕ ಆರೋಪ ಖಂಡನೀಯ” ಎಂದರು.

ಪತ್ರಿಕಾಗೋಷ್ಟಿಯಲ್ಲಿ ನಗರ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರುಗಳಾದ ರಾಜು ಪಂಡಿತ್, ಸಿದ್ದೀಕ್ ಕೊಕ್ಕೋ, ಭಾಸ್ಕರ ಪೂಜಾರಿ ಕೊಯಿಕುಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...