ಉಡುಪಿ | ರಂಗ ಸಂಸ್ಥೆಗಳು ಕಲೆಯ ಜೊತೆಗೆ ಜೀವನ ಪಾಠ ಹೇಳಿಕೊಡುತ್ತವೆ – ಜಯಕರ ಶೆಟ್ಟಿ ಇಂದ್ರಾಳಿ

Date:

ಯುವಜನರು ದಾರಿ ತಪ್ಪುವುದನ್ನು, ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯುವ ಕೆಲಸ ರಂಗಚಟುವಟಿಕೆ, ಸಮಾಜಮುಖಿ ಕಾರ್ಯಗಳಿಂದ ಆಗುತ್ತವೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು.

ಸಣ್ಣಪ್ರಾಯದಲ್ಲಿಯೇ ಹಾಡು, ನೃತ್ಯ, ನಾಟಕಗಳಲ್ಲಿ ತೊಡಗಿಸಿಕೊಳ್ಳುವವರು ದಾರಿ ತಪ್ಪುವುದಿಲ್ಲ. ದುರಭ್ಯಾಸಗಳಿಗೆ ಒಳಗಾಗುವುದಿಲ್ಲ. ರಂಗ ಸಂಸ್ಥೆಗಳು ಕಲೆಯನ್ನು ಕಲಿಸುವುದರ ಜೊತೆಗೆ ಜೀವನ ಪಾಠವನ್ನೂ ಹೇಳಿಕೊಡುತ್ತವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾನ ಮನಸ್ಕರು ಸೇರಿ ಸಮಾಜಮುಖಿ ಕೆಲಸಗಳಿಗಾಗಿ ಸಂಘಟನೆ ಕಟ್ಟಿದರು. ಅದರ ಜೊತೆಗೆ ಪ್ರತಿಭೆಗಳನ್ನು ಬೆಳಗುವ ಕಾರ್ಯವನ್ನು ಮಾಡತೊಡಗಿದರು. ಎಲ್ಲರಲ್ಲಿ ಹುದುಗಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುತ್ತಿದೆ ಎಂದರು.

ಯಾವುದೇ ಕಲಾವಿದರು ಸನ್ಮಾನಕ್ಕಾಗಿ ಕಲಾಸೇವೆ ಮಾಡಿದವರಲ್ಲ. ಆದರೆ, ಅವರು ಸಾಧನೆಯನ್ನು ಗುರುತಿಸುವುದು ಸಮಾಜದ ಕರ್ತವ್ಯ. ಅಂಥ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸುಮನಸಾ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಶ್ಲಾಘಿಸಿದರು.

ಲಯನ್ಸ್‌ ಉಪ ಗವರ್ನರ್‌ ಸಪ್ನಾ ಸುರೇಶ್‌ ಮಾತನಾಡಿ, ಸಂಘ ಸಂಸ್ಥೆಗಳನ್ನು ಹುಟ್ಟು ಹಾಕಿದ್ದಕ್ಕಿಂತ ದೊಡ್ಡ ಜವಾಬ್ದಾರಿ ಬೆಳೆಸುವುದು. ಅದಕ್ಕೆ ನಿರಂತರ ಪರಿಶ್ರಮ ಅಗತ್ಯ. ಸುಮನಸಾ 23 ವರ್ಷಗಳಿಂದ ಸತತ ಪರಿಶ್ರಮಗಳನ್ನು ಹಾಕುತ್ತಾ ಬೆಳೆಯುತ್ತಾ ಬಂದಿದೆ ಎಂದು ಹೇಳಿದರು.

ಯಕ್ಷಗುರು ಯು. ದುಗ್ಗಪ್ಪ ಸ್ಮರಣಾರ್ಥ ಯಕ್ಷಸುಮ ಪ್ರಶಸ್ತಿಯನ್ನು ಗೋಪು ಕೆ. ಅವರಿಗೆ ಪ್ರದಾನ ಮಾಡಲಾಯಿತು.

ಮಲ್ಪೆ ಕಾರ್ತಿಕ್‌ ಗ್ರೂಪ್‌ ಪ್ರವರ್ತಕ ಹರಿಯಪ್ಪ ಕೋಟ್ಯಾನ್‌, ಮಲ್ಪೆ ಉದ್ಯಮಿ ಆನಂದ್‌ ಪಿ. ಸುವರ್ಣ, ಉದ್ಯಮಿ ಹರೀಶ್‌ ಶ್ರೀಯಾನ್‌,  ಉದ್ಯಮಿಗಳಾದ ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ದೇವದಾಸ್‌ ಆರ್‌. ಸುವರ್ಣ, ಪ್ರಭಾಕರ ಪೂಜಾರಿ, ಸುಮನಸಾ ಕೊಡವೂರು ಸಂಸ್ಥೆಯ ಸಂಚಾಲಕ ಭಾಸ್ಕರ ಪಾಲನ್‌ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು. ಅಕ್ಷತ್‌ ಅಮೀನ್‌ ವಂದಿಸಿದರು. ಯೋಗೀಶ್‌ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಉಡುಪಿಯ ಪುನಹ ಥಿಯೇಟರ್‌ ಕಲಾವಿದರಿಂದ ‘ಯೋಗಿ ಮತ್ತು ಭೋಗಿ’ ನಾಟಕ ಪ್ರದರ್ಶನಗೊಂಡಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...