ಬೇಸಿಗೆಯ ಬೇಗೆ | ಅರಣ್ಯದಂಚಿನಲ್ಲಿ ಮೂರು ದಿನಗಳ ಅಂತರದಲ್ಲಿ ಐದು ಕಾಡಾನೆಗಳ ಸಾವು

Date:

ಬಿಸಿಲಿನ ತಾಪ ವನ್ಯಜೀವಿಗಳ ಮೇಲೂ ಪ್ರಭಾವ ಬೀರಿದ್ದು, ಬಿಸಿಲಿನ ಬೇಗೆ ತಡೆಯಲಾಗದೆ  ಕಾಡಾನೆಗಳು ಅರಣ್ಯದಲ್ಲಿ ಸಾಯುತ್ತಿದೆ. ಮೂರು ದಿನದ ಅಂತರದಲ್ಲೇ ಐದು ಆನೆಗಳು ಮೃತಪಟ್ಟಿರುವುದರಿಂದ ಬಿಸಿಲಿನ ಜಳದ ಪರಿಣಾಮವನ್ನು ತೋರುತ್ತಿದೆ.

ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಾಡಾನೆಗಳು ಮೃತಪಟ್ಟಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಕೆಲವು ಆನೆಗಳು ನೀರಿನ ಕೊರತೆಯಿಂದ ಮೃತಪಟ್ಟರೆ, ಆಹಾರದಲ್ಲಿ ವ್ಯತ್ಯಯವಾಗಿ ಅನಾರೋಗ್ಯದಿಂದ ಎರಡು ಆನೆಗಳು ಮೃತಪಟ್ಟಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

ಕರ್ನಾಟಕದ ತಮಿಳುನಾಡು ಗಡಿಯಲ್ಲಿರುವ ಕಾವೇರಿ ವನ್ಯಜೀವಿ ಧಾಮದ ಗೋಪಿನಾಥಂನ ಕಾವೇರಿ ನದಿ ತೀರದಲ್ಲಿ ಭಾರೀ ಗಾತ್ರದ ಆನೆ ಮೃತಪಟ್ಟಿದೆ. ನೀರು ಕುಡಿಯಲೆಂದು ಆನೆ ಕಾವೇರಿ ನದಿಗೆ ಬಂದಾಗ ಕಾಲುಜಾರಿ ಬಿದ್ದಿದೆ. ಮತ್ತೆ ಮೇಲೆ ಏಳಲು ಆನೆಗೆ ಆಗಿಲ್ಲ. ಅಲ್ಲಿಯೇ ಬಿದ್ದು ಮೂರು ದಿನಗಳಾಗಿದ್ದು, ದೇಹದ ಭಾಗವನ್ನು ಮೀನುಗಳು ತಿಂದಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇಸಿಗೆ ಕಾರಣಕ್ಕೆ ನೀರು ಕುಡಿಯಲು ದೂರದಿಂದ ಬಂದಾಗ ಆನೆ ಬಿದ್ದು ಮೃತಪಟ್ಟಿರುವ ಅನುಮಾನಗಳಿವೆ. ಆನೆಯ ದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ದೇಹದ ಭಾಗವನ್ನು ವಿಧಿವಿಜ್ಞಾನ ಪ್ರಯೋಗಾಲಕ್ಕೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಆನೆಯ ಸಾವಿಗೆ ನಿಖರ ಕಾರಣ ತಿಳಿಯಲಿದೆ” ಎಂದು ಕಾವೇರಿ ವನ್ಯಧಾಮದ ಡಿಸಿಎಫ್‌ ಸುರೇಂದ್ರ ತಿಳಿಸಿದ್ದಾರೆ.

“ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿ ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ ಅರಣ್ಯದಲ್ಲಿ 11 ವರ್ಷದ ಆನೆ ಮಾವು ತಿಂದು ಮೃತಪಟ್ಟಿದೆ. ಆಹಾರ ಸೇವಿಸುವ ಮೇಳೆ ಮಾವಿನ ಕಾಯಿಗಳನ್ನು ತಿಂದಿದೆ. ಈ ವೇಳೆ ಕರುಳಿನಲ್ಲಿ ಸಿಲುಕಿಕೊಂಡು ಆನೆ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ. ಆಹಾರದ ವ್ಯತ್ಯಯವೇ ಆನೆ ಸಾವಿಗೆ ಕಾರಣವಿರಬಹುದು” ಎಂದು ಕನಕಪುರ ಎಸಿಎಫ್‌ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವಲಯದಲ್ಲಿ ಮಖನಾ( ಗಂಡೂ ಅಲ್ಲ ಹೆಣ್ಣೂ ಅಲ್ಲ) ಆನೆ ಜೀವ ಬಿಟ್ಟಿದೆ. ಈ ಆನೆಯೂ ಬಿಸಿಲಿನಿಂದ ಜೀವ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ದೇಹದಲ್ಲಿ ನೀರಿನ ಕೊರತೆಯಿಂದಾಗಿ ರಾಮನಗರ ಸಮೀಪದಲ್ಲೇ ಆನೆ  ಮೃತಪಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಶಿಬಿರದಲ್ಲೊಂದು ಆನೆ ಮೃತಪಟ್ಟಿದೆ. ಐದು ತಿಂಗಳ ಹಿಂದೆಯಷ್ಟೇ ಸೆರೆ ಹಿಡಿದಿದ್ದ ವಿರಾಟ್‌ ಎನ್ನುವ ಆನೆಯು ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗರಹೊಳೆ ವ್ಯಾಪ್ತಿಯ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿ ಕಾಡಿನಿಂದ ಹೊರಬಂದು ಉಪಟಳ ನೀಡುತ್ತಿದ್ದ ಕಾಡಾನೆಯನ್ನು ಕಳೆದ ವರ್ಷದ ನವೆಂಬರ್‌ನಲ್ಲಿ ಸೆರೆ ಹಿಡಿಯಲಾಗಿತ್ತು. ಅದಕ್ಕೆ ವಿರಾಟ್‌ ಎನ್ನುವ ಹೆಸರಿಟ್ಟು ಆನೆಚೌಕೂರು ಶಿಬಿರದಲ್ಲಿ ಪಳಗಿಸಲಾಗುತ್ತಿತ್ತು. ಆನೆ ಕಾಲಿಗೆ ಸೆರೆ ಹಿಡಿಯುವಾಗಲೇ ಗಾಯವಾಗಿತ್ತು. ಈಗ ಆನೆ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆ ನಡೆಸಿ ಆನೆಯ ಶವಸಂಸ್ಕಾರ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಕರ್ನಾಟಕದಲ್ಲಿ ಹಿಂದೆ ಈ ಪ್ರಮಾಣದಲ್ಲಿ ಬೇಸಿಗೆ ವೇಳೆ ಆನೆಗಳು ಮೃತಪಟ್ಟಿದ್ದು ಕಡಿಮೆ. ಈ ಬಾರಿ ಅವುಗಳ ಪ್ರಮಾಣ ಹೆಚ್ಚಾಗುತ್ತಿದೆ. ಅರಣ್ಯ ಇಲಾಖೆಯವರು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...