ಉಡುಪಿ | ದಲಿತ ಸಮುದಾಯಕ್ಕೆ ತೊಂದರೆಯಾದರೆ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಸುಂದರ್ ಮಾಸ್ಟರ್

Date:

ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿ ದೌರ್ಜನ್ಯ ಎಸಗಿದ ಹೀನ ಕ್ರತ್ಯವನ್ನು ಸಮರ್ಥಿಸಿಕೊಳ್ಳುತ್ತಿರುವ ಪ್ರಮೋದ್ ಮಧ್ವರಾಜ್ ಮತ್ತು ರಘುಪತಿ ಭಟ್ ರಂತ ರಾಜಕಾರಣಿಗಳ ಕೀಳು ಮನಸ್ಥಿತಿಯ ಅನಾವರಣ ಮಾಡಿದ್ದಾರೆ. ರಾಜಕೀಯವಾಗಿ ತಮ್ಮ ಟಿಆರ್ ಪಿ ಯನ್ನು ಹೆಚ್ಚಿಸಿಕೊಳ್ಳಲು ಸ್ಪರ್ಧೆಗೆ ಬಿದ್ದವರಂತೆ ಮಾತನಾಡುವ ಈ ರಾಜಕಾರಣೀಗಳು ಮೊಗವೀರ ಸಮೂದಾಯವನ್ನು ದಲಿತರ ವಿರುದ್ಧ ರೊಚ್ಚಿಗೇಳುವಂತೆ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ ಮಾತ್ರವಲ್ಲ ಅಸ್ಪೃಶ್ಯ ಸಮುದಾಯಕ್ಕೆ ಬೆದರಿಕೆ ಹಾಕುವ ಕಾರ್ಯವನ್ನೂ ಮಾಡುತ್ತಿದ್ದಾರೆ ಎಂದರು. ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಮೋದ್ ಮಧ್ವರಾಜ್ ಮೇಲೆ ಸುಮೊಟೋ ಕೇಸ್ ದಾಖಲಿಸಿದ ಪೋಲೀಸ್ ಇಲಾಖೆಯನ್ನು ಅಬಿನಂಧಿಸಿದರು.

1004795277

ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮಾತನಾಡಿ ಬಂದರಿನಲ್ಲಿ ಕೆಲಸ ಮಾಡುವ ದಲಿತ ಸಮುದಾಯದವರಿಗೆ ತೊಂದರೆ ಆದರೆ ಸುಮ್ಮನೇ ಕೂರುವ ಪ್ರಶ್ನೆಯೇ ಇಲ್ಲ, ಈಗಾಗಲೇ ಲಂಬಾಣಿ ಸಮುದಾಯದವರನ್ನು ಬಂದರಿನಿಂದ ಮೊಗವೀರರು ಓಡಿಸುತ್ತಿರುವ, ಬೆದರಿಕೆ ಹಾಕುತ್ತಿರುವ ಸುದ್ದಿ ಬಂದಿದೆ, ಜಿಲ್ಲಾಡಳಿತ, ಪೋಲಿಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು. ಪ್ರತಿಭಟನೆಯಲ್ಲಿ ಕಿರುಚಾಡಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಹೆಸರು ಪ್ರಸ್ತಾಪಿಸಿ ಬೈಯ್ಯುವ ಬದಲು ಯಾವುದೇ ಚಾನಲ್ ನಲ್ಲಿ ಚರ್ಚೆಗೆ ಬಂದರೆ ನಿಮಗೆ ಸರಿಯಾದ ಉತ್ತರ ಕೊಡಲು ನಾವು ಮೂವರೂ ತಯಾರಿದ್ದೇವೆ ಎಂದರು.

ದೇಶದ ಯಾವುದೇ ಮೂಲೆಯಲ್ಲಿ ಶೋಷಿತರ ಮೇಲೆ ದೌರ್ಜನ್ಯಗೊಳಗಾದಗ ಅದರ ವಿರುದ್ಧ ಹೋರಾಡುವುದು ಒಂದು ಪ್ರಗತಿಪರ ಸಂಘಟನೆಯಾದ ನಮ್ಮ ಆದ್ಯ ಕರ್ತವ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಮಾತನಾಡಿ ಮಲ್ಪೆ ಬಂದರು ಯಾರೊಬ್ಬರ ಸ್ವಂತ ಆಸ್ತಿ ಅಲ್ಲಾ, ಬಂದರು ಸರಕಾರದ ಸ್ವತ್ತು, ಅಲ್ಲಿ ಎಲ್ಲರಿಗೂ ದುಡಿದು ತಿನ್ನುವ ಹಕ್ಕಿದೆ, ಪಾಳೇಗಾರಿಕೆ ಮಾಡಲು ಇದು ಉತ್ತರ ಪ್ರದೇಶ ಅಥವಾ ಬಿಹಾರ ಅಲ್ಲಾ. ಮಲ್ಪೆ ಘಟನೆಯಲ್ಲಿ ಮಾನ್ಯ ಪೋಲಿಸ್ ವರಿಷ್ಠಾಧಿಕಾರಿ ಡಾ: ಅರುಣ ಕುಮಾರ್ ರವರು ಕ್ಲಪ್ತ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಅಭಿನಂಧಿಸುತ್ತದೆ. ಮತ್ತು ಈ ನ್ಯಾಯಯುತ ಹೋರಾಟದಲ್ಲಿ ದಲಿತ ಸಂಘರ್ಷ ಸಮಿತಿಯು ಪೋಲಿಸ್ ವರಿಷ್ಠಾಧಿಕಾರಿಯವರ ಬೆಂಬಲಕ್ಕೆ ನಿಲ್ಲುತ್ತದೆ.

ಬುಧ್ಧಿವಂತರ ಸಹಬಾಳ್ವೆಯ ಜಿಲ್ಲೆಯಾದ ಉಡುಪಿಯಲ್ಲಿ ಈ ಪಾಳೇಗಾರಿಕೆಯ ಗುಂಡಾಗಿರಿ ಸಂಪೂರ್ಣವಾಗಿ ಹತ್ತಿಕ್ಕಬೇಕು ಎಂದರು. ಸಭೆಯಲ್ಲಿ ದ.ಸಂ.ಸ.ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ, ರಾಜೇಂದ್ರ ಮಾಸ್ಟರ್ ಬೆಳ್ಳೆ, ಮಂಜುನಾಥ ನಾಗುರು, ಸುರೇಶ ಹಕ್ಲಾಡಿ, ಭಾಸ್ಕರ ಮಾಸ್ಟರ್, ಶ್ರೀಧರ ಕುಂಜಿಬೆಟ್ಟು, ಅಣ್ಣಪ್ಪ ನಕ್ರೆ, ತಾಲೂಕು ಸಂಚಾಲಕರಾದ ರಾಜು ಬೆಟ್ಟಿನಮನೆ, ಮಂಜುನಾಥ್ ಬಾಳ್ಕುದ್ರು, ರಾಘವ ಬೆಳ್ಳೆ, ಹರೀಶ್ಚಂದ್ರ ಬಿರ್ತಿ, ಶಿವರಾಮ ಕಾಪು, ಕುಸುಮ ಹಂಗಾರಕಟ್ಟೆ, ಶಿವಾನಂದ ಬಿರ್ತಿ, ರಮೇಶ ಮರವಂತೆ, ಕ್ರಷ್ಣ, ಸುರೇಶ ಬಾರ್ಕೂರು, ಶಿವರಾಜ್ ಬೈಂದೂರು, ರತ್ನಾಕರ ಕುಂಜಿಬೆಟ್ಟು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...