ಉಡುಪಿ | RSS ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಬೇಕೆಂಬ ಬೇಡಿಕೆಗೆ ಬೆಂಬಲ : ಸುಂದರ ಮಾಸ್ಟರ್

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ಟರ್, ಸರಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಹಾಗೂ ಸರಕಾರದ ಅಧೀನ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಬಿ.ಕೆ. ಹರಿಪ್ರಸಾದ್ ಮತ್ತು ಪ್ರಿಯಾಂಕ ಖರ್ಗೆ ಅವರ ಪ್ರತಿಪಾದನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಒಂದು ನೊಂದಣಿಯೇ ಆಗದ ಸಂಘಟನೆಯಾದ ಆರ್‌ಎಸ್‌ಎಸ್‌ನ ಭಯೋತ್ಪಾದಕ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದು ಈ ದೇಶದ ಪ್ರಜಾಪ್ರಭುತ್ವವಾದಿಗಳ ಧ್ವನಿ. ಸಂವಿಧಾನ ವಿರೋಧಿ, ರಾಷ್ಟ್ರಧ್ವಜ ವಿರೋಧಿ ಹಾಗೂ ಸಮಾನತೆ ವಿರೋಧಿ ಸಂಘಟನೆಯಾದ ಆರ್‌ಎಸ್‌ಎಸ್‌ಗೆ ಬೆಂಗಳೂರಿನ ಮುಖ್ಯರಸ್ತೆಗಳಲ್ಲಿ ಲಾಠಿ ಹಿಡಿದು ಪಥಸಂಚಲನ ಮಾಡಲು ಅನುಮತಿ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಖಂಡಿಸಿದ್ದಾರೆ.

ನೂರು ವರ್ಷ ತುಂಬಿದ ಆರ್‌ಎಸ್‌ಎಸ್ ಈ ಪ್ರಜಾಪ್ರಭುತ್ವ ದೇಶದಿಗಾಗಿ ಮಾಡಿದ ಯಾವುದೇ ಘನಾಂದಾರಿ ಕೆಲಸದ ದಾಖಲೆ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಒಬ್ಬರೂ ಆರ್‌ಎಸ್‌ಎಸ್ ಧುರೀಣ ಬಲಿದಾನ ಮಾಡಿದ ಉದಾಹರಣೆ ಇಲ್ಲ. ಬ್ರಿಟಿಷರ ಪರವಾಗಿ ಕೆಲಸ ಮಾಡುವ ತಪ್ಪೋಪ್ಪಿಗೆ ಪತ್ರ ಬರೆದ ಸಂಘಟನೆಯವರು ಇಂದು ದೇಶಭಕ್ತಿಯ ಪಾಠ ಬೋಧಿಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಎಸ್‌ಎಸ್‌ನ ನೂರು ವರ್ಷಗಳ ಸಾಧನೆ ಎಂದರೆ ಚಡ್ಡಿಯಿಂದ ಪ್ಯಾಂಟಿಗೆ ಬಂದ ಅಭಿವೃದ್ದಿ ಮಾತ್ರ. ಸನಾತನ ಧರ್ಮದ ಹೆಸರಿನಲ್ಲಿ ಅಸಮಾನತೆಯನ್ನು ಬೆಳೆಸುವ, ಚಾತುರ್ವರ್ಣ ವ್ಯವಸ್ಥೆಯನ್ನು ಪೋಷಿಸುವ ಆರ್‌ಎಸ್‌ಎಸ್, ಸಮಾಜದ ಶೂದ್ರ ವರ್ಗದ ಕೈಯಿಂದಲೇ ತಮ್ಮ ಬ್ರಾಹ್ಮಣ್ಯವನ್ನು ಬಲಪಡಿಸುತ್ತಿದೆ. ಇದರ ಅರಿವು ಜನತೆ ಹೊಂದಬೇಕು.

ಬಿಜೆಪಿ ಸರ್ಕಾರದ ಮೂಲಕ ತಮ್ಮ ಅಜೆಂಡಾಗಳನ್ನು ಜಾರಿಗೊಳಿಸುತ್ತಿರುವ ಆರ್‌ಎಸ್‌ಎಸ್‌ ತೆರೆಯ ಹಿಂದೆ ನಿಂತು ರಾಜಕೀಯವನ್ನು ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ ಅವರು, ಡಿ.ಎಸ್‌.ಎಸ್.ಗೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡುವ ಈ ಸರಕಾರ, ಆರ್‌ಎಸ್‌ಎಸ್‌ಗೆ ಮುಖ್ಯರಸ್ತೆಗಳಲ್ಲಿ ಲಾಠಿ ಹಿಡಿದು ಮೆರವಣಿಗೆ ನಡೆಸಲು ಅವಕಾಶ ನೀಡುವುದರಿಂದ ಸನಾತನ ಪರ ನಿಲುವು ತೋರಿಸಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...