ಉಡುಪಿ | ಸಾಹಿತಿ ಬಾನು ಮುಷ್ತಾಕ್ ಅವರಿಂದ ನಾಡ ಹಬ್ಬ ದಸರಾ ಉದ್ಘಾಟನೆ ; ದಸಂಸ ಸ್ವಾಗತ

Date:

ಕರ್ನಾಟಕದ ನಾಡ ಹಬ್ಬ ದಸರಾ ವನ್ನು ಪ್ರತಿಷ್ಟಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಸ್ತಾಕ್ ಉದ್ಘಾಟಿಸುತ್ತಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಸ್ವಾಗತಿಸುತ್ತದೆ ಎಂದು ದ. ಸಂ.ಸ. ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ತಿಳಿಸಿದರು.

ದಸರಾ ನಾಡ ಹಬ್ಬವು ಒಂದು ಧರ್ಮ, ಒಂದು ಜಾತಿಯ ಆಚರಣೆಯಲ್ಲಾ, ಸರ್ವ ಜನರ ಸೌಹಾರ್ದತೆಯ ಪ್ರತೀಕವಾಗಿರುವ ದಸರಾ ಹಬ್ಬವನ್ನು ಒಂದು ಧರ್ಮಕ್ಕಷ್ಟೇ ಸೀಮಿತಗೊಳಿಸುವುದು, ಕುವೆಂಪು, ಬಸವಣ್ಣ ಹುಟ್ಟಿದ ಈ ಶ್ರೇಷ್ಠ ನಾಡಿಗೆ ಮಾಡುವ ಅಪಮಾನವೇ ಸರಿ. ಶತಮಾನಗಳಿಂದಲೂ ಈ ನಾಡಿನ ಸರ್ವ ಜನರೂ ಹೆಮ್ಮೆಯಿಂದ ಆಚರಿಸಿಕೊಂಡು ಬರುತ್ತಿರುವ ನಾಡ ಹಬ್ಬ ದಸರವನ್ನು ನೋಡಲು ಜಾತಿ, ಮತ, ಧರ್ಮ, ಲಿಂಗ ಬೇದವಿಲ್ಲದೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಬರುತ್ತಾರೆ. ಈ ಒಂದು ಸೌಹಾರ್ದತೆಯ ಹಬ್ಬವನ್ನು ತಮ್ಮ ರಾಜಕೀಯ ಲಾಭಕ್ಕೋಸ್ಕರ ವಿವಾದವೆಬ್ಬಿಸುತ್ತಿರುವುದು ವಿದೇಶಿ ಪ್ರವಾಸಿಗರ ಎದುರು ನಮ್ಮ ಅಲ್ಪತನ ಮತ್ತು ಹೊಲಸು ಮನಸ್ಸಿನ ಅನಾವರಣವಾಗಲಿದೆ ಎಂದು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಭಾಜನರಾದ ಪ್ರಥಮ ಭಾರತೀಯರು ಅದರಲ್ಲೂ ಒಬ್ಬರು ಮಹಿಳೆಯಾದರೂ ಅವರನ್ನು ಅಭಿನಂಧಿಸುವ ಯೋಗ್ಯತೆಯೂ ಇಲ್ಲದ ನಮ್ಮ ದೇಶದ ಶ್ರೇಷ್ಠ ನಾಯಕರ ಮನಸ್ಥಿತಿ ಅಸಹ್ಯ ಹುಟ್ಟಿಸುತ್ತದೆ. ಕ್ರಿಕೆಟ್ ಆಟಗಾರ ಶತಕ ಹೊಡೆದಾಗ ಟ್ವೀಟ್ ಮಾಡಿ ಅಭಿನಂದಿಸುವ ಈ ಸರ್ವೋಚ್ಛ ನಾಯಕ, ಈ ದೇಶಕ್ಕೆ ಪ್ರಥಮ ಬೂಕರ್ ಪ್ರಶಸ್ತಿ ತಂದುಕೊಟ್ಟ ಮಹಿಳೆಯನ್ನು ಧರ್ಮದ ಆಧಾರದಲ್ಲಿ ನೋಡಿದ್ದು ನಿಜಕ್ಕೂ ಬುಧ್ಧ , ಗಾಂಧಿ ಹುಟ್ಟಿದ ನಾಡಿನ ದುರಂತವೇ ಸರಿ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಮಹಿಳೆ ಬಾನು ಮುಸ್ತಾಕ್ ಈ ಬಾರಿಯ ನಾಡ ಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದು ಈ ದೇಶದ ಸಂವಿಧಾನಕ್ಕೆ, ಸಮಾನತೆಯನ್ನು ಸಾರುವ ಈ ಭರತ ಭೂಮಿಗೆ, ಕುವೆಂಪು ಅವರು ಸಾರಿದ ಸರ್ವ ಜನಾಂಗದ ಶಾಂತಿಯ ತೋಟದ ಕಲ್ಪನೆಗೆ ಹಿಡಿದ ಕನ್ನಡಿಯಾಗಿದೆ, ಮತ್ತು ಆ ಮೂಲಕ ಈ ಬಾರಿಯ ನಾಡ ಹಬ್ಬದ ಮೆರುಗು ಹೆಚ್ಚಿದಂತಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ಪದಾಧಿಕಾರಿಗಳಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು, ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಅಣ್ಣಪ್ಪ ನಕ್ರೆ, ಭಾಸ್ಕರ ಮಾಸ್ಟರ್ ಕುಂಜಿಬೆಟ್ಟು, ಮಂಜುನಾಥ ನಾಗೂರು, ದೇವು ಹೆಬ್ರಿ, ಶ್ರೀಧರ ಕುಂಜಿಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...