ಬೀದರ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳು ಹೋರಾಟ ಸಮಿತಿಯಿಂದ ಜ.9ರಂದು ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು‌, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ʼದಲಿತ್‌ ಯೂನಿಟಿ ಮ್ಯೂವಮೆಂಟ್‌ʼ ಬೆಂಬಲ :

ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಅಂಬೇಡ್ಕರ್‌ ಅವರಿಗೆ ಕೀಳಾಗಿ ಮಾತನಾಡಿದ್ದು ಖಂಡಿಸಿ ಜನವರಿ 9ರಂದು ಬೀದರ್‌ ಬಂದ್‌ಗೆ ಕರೆ ನೀಡಲಾಗಿದ್ದು, ಈ ಬೃಹತ್‌ ಹೋರಾಟಕ್ಕೆ ದಲಿತ ಯೂನಿಟಿ ಮ್ಯೂವಮೆಂಟ್‌ ಸಂಘಟನೆ ಸಂಪೂರ್ಣವಾಗಿ ಬೆಂಬಲಿಸಿ ಎಲ್ಲಾ ಕಾರ್ಯಕರ್ತರು ಬೀದರ್‌ ಬಂದ್‌ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಪ್ರಕಾಶ ರಾವಣ, ಜಿಲ್ಲಾಧ್ಯಕ್ಷ ವಿನೀತ್ ಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನ ಮಾಡಿರುವ ಅಮಿತ್‌ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು.

ಬೀದರ್ ಬಂದ್‌ಗೆ ಬೆಂಬಲ ಸೂಚಿಸಿದ ಬಿಎಸ್ಪಿ :

ʼಅಂಬೇಡ್ಕರ್ ಅಂಬೇಡ್ಕರ್ ಅನ್ನುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳಲ್ಲಿ ಸ್ವರ್ಗ ದೊರೆಯುತ್ತಿತ್ತು ಎಂದು ರಾಜ್ಯಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಖಂಡಿಸಿ ಕರೆ ಬೀದರ್‌ ಬಂದ್‌ಗೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಸಂಪೂರ್ಣ ಬೆಂಬಲ ಸೂಚಿಸಿದ್ದು, ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕಪೀಲ್‌ ಗೋಡಬೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಾದ್ಯಂತ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ನಡೆಯುತ್ತಿದ್ದರೂ ಇಲ್ಲಿಯವರೆಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಅಮಿತ್ ಶಾ ರಾಜೀನಾಮೆಗೆ ಮುಂದಾಗುತ್ತಿಲ್ಲ. ಹೀಗಾಗಿ ಬೀದರ್‌ ಬಂದ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಲು ಜಿಲ್ಲೆಯ ಸಮಾಜ ಪರ ಚಿಂತಕರು, ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹೇಶ್ ಭೋಲಾ ಅವರು ಮನವಿ ಮಾಡಿದ್ದಾರೆ.

ಅಂಬೇಡ್ಕರ್‌ ಸೇವಾ ಸಮಿತಿ ಬೆಂಬಲ :

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಕರೆ ನೀಡಿದ ಬೀದರ್‌ ಬಂದ್‌ಗೆ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ಸೂಚಿಸಿದೆ.

ದೇಶದ ಎಲ್ಲ ಜಾತಿ, ಧರ್ಮದವರಿಗೆ ಸಂವಿಧಾನ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅವರನ್ನು ರಾಜ್ಯಸಭೆಯಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಬೀದರ್‌ ಬಂದ್‌ಗೆ ಬೆಂಬಲ ಸೂಚಿಸಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಲೋಕೇಶ ಕಾಂಬಳೆ, ಜಿಲ್ಲಾ ಉಪಾಧ್ಯಕ್ಷ ಸಿದ್ಧಾರ್ಥ್ ನಾಟೀಕರ್ ಹಾಗೂ ನಿಲೇಶ್ ಮೇಲಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಡಿಸೆಂಬರ್‌ 24 ರಂದು ಬೀದರ್‌ ನಗರದಲ್ಲಿ ಸ್ವಾಭಿಮಾನಿ ಡಾ.ಬಿ.ಆರ್.‌ ಅಂಬೇಡ್ಕರ್‌ವಾದಿಳಗಳ ಹೋರಾಟ ಸಮಿತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಅಮಿತ್‌ ಶಾ ದೇಶದ ಜನರ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕೆಂದು ಒಂದು ವಾರದ ಗಡುವು ನೀಡಲಾಗಿತ್ತು. ಆ ಅವಧಿ ಮುಗಿದಿದ್ದರೂ ಅಮಿತ್‌ ಶಾ ಕ್ಷಮೆಯಾಚಿಸಿಲ್ಲ, ರಾಜೀನಾಮೆ ನೀಡಲಿಲ್ಲ. ಹೀಗಾಗಿ ಜನವರಿ 9 ರಂದು ಬೀದರ್‌ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ ಎಂದು ಸ್ವಾಭಿಮಾನಿ ಡಾ.ಬಿ.ಆರ್.‌ ಅಂಬೇಡ್ಕರ್‌ವಾದಿಳಗಳ ಹೋರಾಟ ಸಮಿತಿ ಅಧ್ಯಕ್ಷ ಉಮೇಶಕುಮಾರ್‌ ಸ್ವಾರಳ್ಳಿಕರ್‌ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...