ಉಡುಪಿ | ಯುವತಿಯ ಮೇಲೆ ಅತ್ಯಾಚಾರ ಪ್ರಕರಣ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಬಂಧನ !

Date:

ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಪ್ರದೀಪ್ ಪೂಜಾರಿ (26) ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಯುವತಿಯೊಬ್ಬಳನ್ನು ನಿರ್ಜನ ಪ್ರದೇಶದಲ್ಲಿ ಬೆದರಿಸಿ ಅತ್ಯಾಚಾರ ಎಸಗಿದ ಬಗ್ಗೆ ವರದಿಯಾಗಿದೆ. ಮೊದಲೇ ಕಿರುಕುಳ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯು ಮತ್ತೆ ಕುಕೃತ್ಯಕ್ಕೆ ಮುಂದಾಗಿದ್ದಾನೆ.

ನ.29ರಂದು ಈ ಘಟನೆ ನಡೆದಿದ್ದು ನಂತರದಲ್ಲಿ ಯುವತಿ ಮನೆಯವರಿಗೆ ಮಾಹಿತಿ ನೀಡಿದ್ದಳು. ಕುಟುಂಬದವರು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸಂಘಪರಿವಾರದ ಕಾರ್ಯಕರ್ತರಿಂದ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ — CPI(M)
ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಉಭಯ ಜಿಲ್ಲೆಗಳ ಸಂಘ ಪರಿವಾರದ ಕಾರ್ಯಕರ್ತರು ನಿರಂತರವಾಗಿ ಜಿಲ್ಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಮಾಡುತ್ತಿದ್ದ ಸುದ್ಧಿಗಳು ಜಿಲ್ಲೆಯ ಜನತೆಯನ್ನು ಆತಂಕಕ್ಕೆ ಒಳಗಾಗಿಸಿದೆ ಇದನ್ನು ಎಲ್ಲಾ ಪ್ರಜ್ಞಾವಂತರು ವಿರೋಧಿಸಬೇಕು. ಸಂಘಪರಿವಾರದ ಕಾರ್ಯಕರ್ತರಿಗೆ ಮನುಸ್ಮೃತಿಯ ವಿಚಾರಧಾರೆಯ ಪಾಠ ಹೇಳಿಕೊಡುತ್ತಿರುವುದರಿಂದಲೇ ಹೆಣ್ಣು ಮಕ್ಕಳನ್ನು ತುಚ್ಚವಾಗಿ ಎರಡನೇ ದರ್ಜೆಯ ಪ್ರಜೆಯಾಗಿ ನೋಡುತ್ತಿರುವ ಪರಿಣಾಮವೇ ಈ ಕೃತ್ಯಕ್ಕೆ ಕಾರಣ. ಸಂಘಪರಿವಾರದ ಸಂಘಟನೆಗಳಿಂದ ಹೆಣ್ಣು ಮಕ್ಕಳು ಹಾಗೂ ಯುವಜನರು ಅಂತರ ಕಾಪಾಡಿಕೊಳ್ಳಬೇಕು ಹಾಗೂ ಮಹಿಳಾ ವಿರೋಧಿಯಾದ ಈ ಸಂಘಟನೆಗಳನ್ನು ವಿರೋಧಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ನೀಡಲೇಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರಾಧಿಯ ಧರ್ಮ ನೋಡಿ ಮೌನವಾಗಬೇಡಿ – WIM
ಈ ಬಗ್ಗೆ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಉಡುಪಿ ಜಿಲ್ಲಾ ಅಧ್ಯಕ್ಷೆ ನಾಝಿಯಾ ನಸ್ರುಲ್ಲಾ ಪ್ರತಿಕ್ರಿಯಿಸಿದ್ದು, ಇತ್ತೀಚೆಗೆ ಅವಳಿ ಜಿಲ್ಲೆಗಳಲ್ಲಿ ಸ್ವಯಂ ಧರ್ಮ ರಕ್ಷಕರೆಂದು ಕರೆಸಿಕೊಳ್ಳುವವರಿಂದ ಇಂತಹ ಪ್ರಕರಣಗಳು ಜಾಸ್ತಿಯಾಗಿ ನಡೆಯುತ್ತಿದ್ದು, ಕಳೆದ ತಿಂಗಳು ಮದುವೆಯಾಗುವುದಾಗಿ ನಂಬಿಸಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಮಣಿಪಾಲದ ಲಾಡ್ಜ್ ಗೆ ಕರೆದು ಸಿಕ್ಕಿಬಿದ್ದ ಘಟನೆಯು ನಡೆದಿತ್ತು. ಪೆರ್ಡೂರಿನಲ್ಲಿ ನಡೆದ ಘಟನೆಯಲ್ಲಿ ಒಂದು ವೇಳೆ ಆರೋಪಿಯು ಅನ್ಯ ಕೋವಿನವನಾಗಿದ್ದರೆ ಇಲ್ಲಿಯ ಶಾಸಕರ ಹಾಗೂ ಹಿಂದೂ ಧರ್ಮದ ರಕ್ಷಕರೆಣಿಸಿಕೊಂಡವರ ಆಕ್ರೋಶ, ಪ್ರತಿಭಟನೆ ಮುಗಿಲು ಮುಟ್ಟುತ್ತಿತ್ತು. ಆದರೆ ಆರೋಪಿಯು ತಮ್ಮದೇ ಸಂಘಟನೆಯವನಾಗಿರುವುದರಿಂದ ಸಂತ್ರಸ್ತೆಯ ನೋವು ಇವರಿಗೆ ಕಾಣಿಸುತ್ತಿಲ್ಲ. ಇಂತಹ ಅಪರಾಧ ಪ್ರಕರಣಗಳಳ್ಳೂ ಕೃತ್ಯ ಎಸಗಿದವನು ತಮ್ಮ ಧರ್ಮದವನು ಎಂದು ತಿಳಿದು ಸುಮ್ಮನಿರುವ ಪ್ರವೃತ್ತಿ ನಿಜಕ್ಕೂ ಕಳವಳಕಾರಿ. ಇದು ಅಪರಾಧಿಗಳಿಗೆ ಕುಮ್ಮಕ್ಕು ನೀಡುತ್ತದೆ. ಆದ್ದರಿಂದ ನಾಗರಿಕ ಸಮಾಜ ಇವರ ನಕಲಿ ಧರ್ಮ ಪ್ರೇಮವನ್ನು ಅರ್ಥಮಾಡಿಕೊಳ್ಳಬೇಕು, ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ಧ ಒಟ್ಟಾಗಿ ಹೋರಾಟವನ್ನು ನಡೆಸುವ ಮೂಲಕ ಇಂತಹ ಪ್ರಕರಣಗಳು ಮರುಕಳಿಸಿದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...