ಉಡುಪಿ | ರಾಜ್ಯ ಬಜೆಟ್, ಅಸಂಘಟಿತ ಕಾರ್ಮಿಕರ ಭದ್ರತೆ ನಿರ್ಲಕ್ಷ್ಯ – ಸುರೇಶ್ ಕಲ್ಲಾಗರ

Date:

ರಾಜ್ಯ ಕರ್ನಾಟಕ ಸರ್ಕಾರ ಇಂದು ಮಂಡಿಸಿದ ಬಜೆಟ್ ನಲ್ಲಿ ಅಸಂಘಟಿತ ಕಾರ್ಮಿಕರ ಭದ್ರತೆಗೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.

ದೇಶದ ಒಟ್ಟು ಕಾರ್ಮಿಕರಲ್ಲಿ 90% ಅಸಂಘಟಿತ ಕಾರ್ಮಿಕರಿದ್ದಾರೆ. ದೇಶದ ಜಿಡಿಪಿಗೆ ಅವರ ಕಾಣಿಕೆ ಶೇ 56% ಈ ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ಇನ್ನೊಂದಡೆ ಕರ್ನಾಟಕ ರಾಜ್ಯದಲ್ಲಿ ಸುಮಾರು 1.5 ಕೋಟಿ ಅಸಂಘಟಿತ ಕಾರ್ಮಿಕರಿದ್ದಾರೆ. ಅದರಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಪ್ರತ್ಯೇಕ ಮಂಡಳಿ ಸೌಲಭ್ಯಗಳು ಇವೆ. ಅವರನ್ನು ಹೊರತುಪಡಿಸಿದರೆ ಹಮಾಲಿ, ಟೇಲರ್ಸ, ಹೋಟೆಲ್, ಬೀದಿಬದಿ, ಪತ್ರಿಕಾ ವಿತರಕರು, ಸಿನಿಮಾ, ಮನೆಗೆಲಸದ ಮಹಿಳೆಯರು, ಅಕ್ಕಸಾಲಿಗರು, ಚಿಂದಿ ಆಯುವವರು, ನೇಕಾರರು, ಅಲೆಮಾರಿ, ಕ್ಷೌರಿಕರು, ದೋಬಿಗಳು , ಕುಂಬಾರರು, ಬೀಡಿ, ಪೋಟೋಗ್ರಾಫರಗಳು, ಶ್ಯಾಮಿಯಾನ ಕಾರ್ಮಿಕರು ಹೀಗೆ 26 ವಲಯಗಳಲ್ಲಿ ಸುಮಾರು 01 ಕೋಟಿಯಷ್ಟು ವಿವಿಧ ಅಸಂಘಟಿತ ಕಾರ್ಮಿಕರಿದ್ದಾರೆ.
ಈ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಯಲ್ಲಿ ಅಫಘಾತ ಮರಣ, ಅಂಗವಿಕಲತೆ, ಚಿಕಿತ್ಸೆ ಸೌಲಭ್ಯಗಳನ್ನು ಇತ್ತೀಚಿಗೆ ಜಾರಿಮಾಡಲಾಗಿದೆ.

ಬಹುತೇಕ ದಲಿತ ಅಲ್ಪಸಂಖ್ಯಾತ, ಹಿಂದುಳಿದ ವಿಭಾಗಳಿಗೆ ಸೇರಿದ ಅಸಂಘಟಿರು ಸಾಮಾಜಿಕವಾಗಿ, ಆರ್ಥಿಕವಾಗಿ ಶೈಕ್ಷಣಿಕರಾಗಿ ಹಿಂದುಳಿದಿರುವ ಹಾಗೂ ನಿರತರ ಆದಾಯ ಉದ್ಯೋಗ ಭದ್ರತೆ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತೆ ಇಲ್ಲದೆ ಸಂಕಷ್ಟದಲ್ಲಿರುವ ಸಮುದಾಯಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ವಲಯದ ಅಸಂಘಟಿತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಪ್ರಮುಖ ಬೇಡಿಕೆ ಬದುಕಿರುವಾಗ ಸಹಾಯವಾಗಬಲ್ಲ ಭವಿಷ್ಯನಿಧಿ ಯೋಜನೆ, ಪಿಂಚಣಿ, ವಸತಿ ಹಾಗೂ ಮಕ್ಕಳ‌ ಶಿಕ್ಷಣ, ಆರೋಗ್ಯದ ಸಮಗ್ರ ಸಾಮಾಜಿಕ ಭದ್ರತೆ ಒದಗಿಸಬೇಕು ಅದಕ್ಕಾಗಿ ಪ್ರಸಕ್ತ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ರೂ. 500 ಕೋಟಿ ನೀಡಬೇಕು. ನಿರಂತರವಾಗಿ ಕಲ್ಯಾಣ ಸೌಲಭ್ಯಗಳನ್ಜು ಜಾರಿಮಾಡಲು ಅಗತ್ಯ ಹಣಕಾಸು ಸಂಪನ್ಮೂಲ ಕ್ರೂಢಿಕರಿಸಲು ಸೆಸ್ ಸಂಗ್ರಹ ಮಾಡಬೇಕೆಂಬುದು ಬೇಡಿಕೆಯಾಗಿತ್ತು. ನಾವು ಮುಖ್ಯ ಮಂತ್ರಿಗಳಗೆ, ಕಾರ್ಮಿಕ ಸಚಿವರಿಗೆ ನಿರಂತರ ಒತ್ತಾಯ ಮಾಡಿದಾಗಿಯೂ ಮುಖ್ಯ ಮಂತ್ರಿಗಳು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಜೆ ನೇರವು ನೀಡುತ್ತಾರೆ ಎಂಬ ನೀರೀಕ್ಷೆ ಹುಸಿಯಾಗಿದೆ.

ಇದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಪ್ರಸ್ತುತ ಬಕೆಟ್ ನಲ್ಲಿ ಅಗತ್ಯ ಹಣಕಾಸು ನೇರವು ನೀಡಿ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಲು ಸರಕಾರ‌ ಮುಂದಾಗಬೇಕೆಂದು ಆಗ್ರಹಿಸುತ್ತದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಡವನ್ನು ಸರಕಾರ ಎದುರಿಸಬೇಕಾಗುತ್ತದೆ ಎಂದು ಅಸಂಘಟಿತ ಕಾರ್ಮಿಕರ ಸಂಘಟನೆಗಳ ಒಕ್ಕೂಟ ಸರಕಾರವನ್ನು ಎಚ್ಚರಿಸುತ್ತದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...