ಉಡುಪಿ‌ | ಡಾಲರ್ 90 ದಾಟಿದೆ, ಮೋದಿಯವರು ರಾಜೀನಾಮೆ ಕೊಡಲಿಲ್ಲ, ಏಕೆ? : ಸುರೇಶ್ ಶೆಟ್ಟಿ ಬನ್ನಂಜೆ

Date:

ದೇಶದಲ್ಲಿ ಡಾಲರ್ ಮೌಲ್ಯ 90ಕ್ಕೂ ಮೇಲಾಗಿರುವುದು ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ ಇದನ್ನು ಮರೆಮಾಚಿಸಲು ಕೇಂದ್ರ ಸರ್ಕಾರ ವಿವಿಧ ವಿಷಯಗಳನ್ನು ಜನರ ಗಮನಕ್ಕೆ ತರುವ ಪ್ರಯತ್ನ ನಡೆಸುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರು ಹಾಗೂ ಉಡುಪಿ ನಗರಸಭಾ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸ್ತುತ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿ, “ಯುಪಿಎ ಆಡಳಿತಾವಧಿಯಲ್ಲಿ ಡಾಲರ್ ಬೆಲೆ ಏರಿಕೆಯ ವಿಷಯದಲ್ಲಿ ತೀವ್ರ ಟೀಕೆ ಮಾಡಿದ್ದ ಅದೇ ನರೇಂದ್ರ ಮೋದಿಯವರು ಈಗ ಅಧಿಕಾರದಲ್ಲಿರುವಾಗ ಡಾಲರ್ ಮೌಲ್ಯ 90 ದಾಟಿದೆ. ಆಗ ಡಾಲರ್ ಮೌಲ್ಯವನ್ನು 30ಕ್ಕೆ ಇಳಿಸುತ್ತೇನೆ ಎಂದು ಬುರುಡೆ ಬಿಟ್ಟವರು ಇಂದು ಏಕೆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡುವುದಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇಂಡಿಗೋ ವಿಮಾನಯಾನ ಸಂಸ್ಥೆಯು ವಿಮಾನಯಾನಗಳನ್ನು ಅಚಾನಕ್ ರದ್ದುಗೊಳಿಸಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ ಘಟನೆ ಕೂಡ ಸಂಶಯಾಸ್ಪದವಾಗಿದೆ ಎಂದು ಅವರು ಆರೋಪಿಸಿದರು. “ಜನರ ಗಮನವನ್ನು ಆರ್ಥಿಕ ಸಮಸ್ಯೆಯಿಂದ ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರವೇ ಈ ರೀತಿಯ ಗೊಂದಲಗಳನ್ನು ಸೃಷ್ಟಿಸುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಗೋ ಸಂಸ್ಥೆ ಬಿಜೆಪಿ ಪಕ್ಷಕ್ಕೆ ನೀಡಿರುವ ದೇಣಿಗೆಯ ಮೊತ್ತವನ್ನು ಕೂಡಾ ಬಹಿರಂಗಪಡಿಸಲು ಸುರೇಶ್ ಶೆಟ್ಟಿ ಆಗ್ರಹಿಸಿದರು. “ಜನಸಾಮಾನ್ಯರ ಸಮಸ್ಯೆಗಳಿಗೆ ಕಿವಿಗೊಡದೆ, ತಮ್ಮ ಸ್ವಾರ್ಥಕ್ಕಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರಿಂದ ದೇಶ ದುಸ್ಥಿತಿಗೆ ತಲುಪಿದೆ. ಮತ ಕಳ್ಳತನ ಮಾಡಿ ನಡೆಸುತ್ತಿರುವ ಆಡಳಿತ ದೇಶದ ದುರದೃಷ್ಟ,” ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...