ಉಡುಪಿ | ವೋಟ್‌ ಚೋರಿ ಆರೋಪಕ್ಕೆ ಬಿಹಾರ ಫಲಿತಾಂಶವೇ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ

Date:

ವೋಟ್ ಚೋರಿ ಬಗ್ಗೆ ಸನ್ಮಾನ್ಯ ರಾಹುಲ್ ಗಾಂಧಿಯವರಿಂದ ಸಾಕ್ಷಾ ಕೇಳಿದ ಬಿಜೆಪಿ ನಾಯಕರಿಗೆ ಬಿಹಾರ ಚುನಾವಣಾ ಫಲಿತಾಂಶಕ್ಕಿಂತ ದೊಡ್ಡ ಸಾಕ್ಷ ಬೇಕೆ, ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ನಡೆದ ಲೋಕಸಭೆ, ಹರಿಯಾಣ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಚುನಾವಣೆಯಲ್ಲೂ ಮತಕಳವು ನಡೆದಿದ್ದರೆಂಬ ಸ್ಪಷ್ಟ ದಾಖಲೆಗಳೊಂದಿಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ, ಆಯೋಗ ಅದನ್ನು ಪರಿಗಣಿಸದೆ ಕಾಂಗ್ರೆಸ್‌ ನಾಯಕರ ಮೇಲೆಯೇ ಸುಳ್ಳು ಆರೋಪ ಮಾಡಿತ್ತು. ಬಿಹಾರ ಚುನಾವಣೆಗೆ ಮುನ್ನವೇ ರಾಹುಲ್ ಗಾಂಧಿಯವರು ಮತಕಳವು ಸಂಭವಿಸುವ ಸಾಧ್ಯತೆಗಳ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿದ್ದರೂ, ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಸರ್ಕಾರದ ಪರವಾಗಿ ಆಯೋಗ ಕೆಲಸ ಮಾಡಿದೆ ಎಂಬುದು ಇದೀಗ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಟೀಕಿಸಿದರು.

ಬಿಹಾರದಲ್ಲಿ ಆಡಳಿತ ನರಿಸುತ್ತಿರುವ ಬಿಜೆಪಿ ಹಾಗೂ ಜೆಡಿಯು ಪಕ್ಷದ ಬಗ್ಗೆ ಜನಸಾಮಾನ್ಯರು ಸಂಪೂರ್ಣ ವಿರೋಧ ವ್ಯಕ್ತಪಡಿಸಿ ಪ್ರಚಾರಕ್ಕೆ ಹೋದ ಸಚಿವರುಗಳನ್ನೇ ಅಂದರೆ ಉಪಮುಖ್ಯಮಂತ್ರಿಯನ್ನೇ ಓಡಿಸಿದ ಘಟನೆ ಬಿಹಾರದಲ್ಲಿ ನಡೆದಿದ್ದು ಇಂದು ಅಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಸರಕಾರ ಪುನರಪಿ ಅಧಿಕಾರಕ್ಕೆ ಬರುತ್ತಿದೆ ಎಂದಾದರೆ ಇದು ಜನರು ಕೊಟ್ಟ ಮತದಿಂದ ಅಲ್ಲ ಎಂಬುದು ಎಲ್ಲರಿಗೂ ತಿಳಿದಿದೆ ಇದುವೇ ರಾಹುಲ್ ಗಾಂಧಿ ಅವರು ಮತ ಚೋರಿಯ ಬಗ್ಗೆ ದೇಶದಾದ್ಯಂತ ಅಭಿಯಾನ ನಡೆಸಿದ್ದು ಇಂದು ಇದಕ್ಕೆ ಸರಿಯಾದ ಸಾಕ್ಷಿ ಸಿಕ್ಕಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದಲ್ಲಿ ಜನರು ಆಡಳಿತದ ವಿರುದ್ಧ ತೀವ್ರ ಅಸಮಾಧಾನದ ಸೂಚನೆ ನೀಡಿದ್ದರೂ, ಪ್ರಚಾರಕ್ಕೆ ಹೋದ ಸಚಿವರು, ಉಪಮುಖ್ಯಮಂತ್ರಿಯವರನ್ನೇ ಜನತೆ ಓಡಿಸಿದರೂ, ಅಂತಿಮ ಫಲಿತಾಂಶದಲ್ಲಿ ಮತ್ತೆ ಅದೇ ಸರ್ಕಾರಕ್ಕೆ ಗೆಲುವು ಬರೋದು ಸಾಮಾನ್ಯ ಮತದ ಫಲವಲ್ಲ. ಜನಗಳೇ ಅರ್ಥಮಾಡಿಕೊಂಡಂತೆ, ಇದು ಪ್ರಾಮಾಣಿಕ ಜನಮನದ ಫಲವಲ್ಲ, ರಾಹುಲ್ ಗಾಂಧಿ ದೇಶಾದ್ಯಂತ ಮತ ಚೋರಿಯ ವಿರುದ್ಧ ಅಭಿಯಾನ ನಡೆಸುತ್ತಿದ್ದು, ಬಿಹಾರದಲ್ಲಿ ನಡೆದದ್ದೇ ಅದರ ಜೀವಂತ ಸಾಕ್ಷಿ ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...