ಗುಬ್ಬಿ | ಮೂರು ದಿನ ಕಗ್ಗತ್ತಲಲ್ಲಿ ಮುಳುಗಿದ ಸುರಿಗೇನಹಳ್ಳಿ : ಮರಬಿದ್ದು ವಿದ್ಯುತ್ ಕಂಬ ಧರೆಗೆ-ಎಚ್ಚೆತ್ತುಕೊಳ್ಳದ ಬೆಸ್ಕಾಂ

Date:

ಕಳೆದ ಮೂರು ದಿನದ ಹಿಂದೆ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಹಾಗೂ ತಂತಿ ತುಂಡಾಗಿದೆ. ಸ್ಥಳಕ್ಕೆ ಬಂದು ನೋಡಿ ಹೋದ ಬೆಸ್ಕಾಂ ಸಿಬ್ಬಂದಿ ಮೂರು ದಿನ ಕಳೆದರೂ ಪರ್ಯಾಯ ವ್ಯವಸ್ಥೆ ಮಾಡದೆ ಇಡೀ ಸುರಿಗೇನಹಳ್ಳಿ ಗ್ರಾಮ ಕಗ್ಗತ್ತಲಲ್ಲಿ ಮುಳುಗಿ ಬೇಸತ್ತ ಗ್ರಾಮಸ್ಥರು ಬೆಸ್ಕಾಂ ನಿರ್ಲಕ್ಷ್ಯಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಸುಮಾರು 60 ಮನೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಪರಿವರ್ತಕ ಸಮೀಪದಲ್ಲೇ ಕಂಬ ಮುರಿದು ಬಿದ್ದು ತಂತಿ ತುಂಡಾಗಿದೆ. ಕೂಡಲೇ ಬೆಸ್ಕಾಂ ಇಲಾಖೆಗೆ ಸ್ಥಳೀಯರು ವಿಷಯ ಮುಟ್ಟಿಸಿದ್ದಾರೆ. ತಕ್ಷಣವೇ ಕೆಲಸ ಮಾಡುವ ರೀತಿ ಆಗಮಿಸಿ ಸ್ಥಳ ನೋಡಿ ಕಂಬ ಮುರಿದಿದೆ. ಗುತ್ತಿಗೆದಾರರ ಮೂಲಕ ಕೆಲಸ ಮಾಡಿಸುವುದಾಗಿ ಹೇಳಿ ಹೋದವರು ಮೂರು ದಿನ ಕಳೆದರೂ ಇತ್ತ ಕಡೆ ಸುಳಿದಿಲ್ಲ. ಈ ಬಗ್ಗೆ ಸ್ಥಳೀಯರು ಪೋನ್ ಕರೆ ಮಾಡಿದರೂ ಸೂಕ್ತ ಉತ್ತರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುರಿಗೇನಹಳ್ಳಿ ಗ್ರಾಮದ ಗುಡ್ಡದ ರಂಗನಾಥಸ್ವಾಮಿ ದೇವಸ್ಥಾನದತ್ತ ಹೋಗುವ ರಸ್ತೆ ಬದಿಯಲ್ಲೇ ಇರುವ ದೊಡ್ಡ ಮರದ ಕೆಳಗೆ ವಿದ್ಯುತ್ ತಂತಿ ಹಾದು ಹೋಗಿದೆ. ಕಂಬಗಳು ಸಹ ಮರಗಳ ಪಕ್ಕದಲ್ಲೇ ಇವೆ. ಮರದ ಕೊಂಬೆಗಳು ತಂತಿಗೆ ತಗುಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಲೇ ಇದೆ. ಮಳೆ ಗಾಳಿ ಬೀಸಿದರೆ ವಿದ್ಯುತ್ ಕಡಿತ ಕಟ್ಟಿಟ್ಟ ಬುತ್ತಿ. ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ತೊಂದರೆಯಾಗಿದೆ. ಈ ಮೂರು ದಿನದಿಂದ ಕತ್ತಲು ಅವರಿಸಿ ವೃದ್ದೆ ನರಸಮ್ಮ ಎಂಬುವವರು ಚರಂಡಿಯಲ್ಲಿ ಬಿದ್ದು ಕಾಲು ಮೂಳೆ ಮುರಿದುಕೊಂಡಿದ್ದಾರೆ. ಈ ವೃದ್ಧೆಯ ತೊಂದರೆಗೆ ಬೆಸ್ಕಾಂ ನೇರ ಹೊಣೆ ಹೊರಬೇಕು ಎಂದು ಸ್ಥಳೀಯ ಮಂಜುನಾಥ್ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಕತ್ತಲು ಅಲ್ಲಿನ ಜನರಲ್ಲಿ ತೀವ್ರ ಭಯ ಹುಟ್ಟಿಸಿದೆ. ಗ್ರಾಮದ ಪಕ್ಕದಲ್ಲೇ ಅರಣ್ಯ ಪ್ರದೇಶವಿದ್ದು ಚಿರತೆ, ಕಾಡುಹಂದಿ, ನರಿಗಳ ಕಾಟ ಸಾಕಷ್ಟಿದೆ. ಗ್ರಾಮಸ್ಥರು ಸಾಕಿದ ಜಾನುವಾರುಗಳ ಮೇಲೆರಗಲು ಚಿರತೆಗಳು ಈ ಭಾಗದಲ್ಲಿ ಕಾದಿವೆ. ಇಂಥಹ ಕಷ್ಟದ ಮಧ್ಯೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕರೆಂಟ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಕಿಡಿಕಾರಿದರು.

WhatsApp Image 2024 09 01 at 4.09.54 PM 1

“ಮರ ಬಿದ್ದು ಕಂಬ ಮುರಿದ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರೂ ತಕ್ಷಣ ಕಾರ್ಯಪ್ರವೃತ್ತರಾಗದ ಸಿಬ್ಬಂದಿಗಳ ಬಗ್ಗೆ ಗ್ರಾಮಸ್ಥರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಹಲವು ಬಾರಿ ಇಂಜಿನಿಯರ್ ಗೆ ಕಾಲ್ ಮಾಡಿದರೂ ರಿಸೀವ್ ಮಾಡಲಿಲ್ಲ. ಚುನಾಯಿತ ಪ್ರತಿನಿಧಿಗಳಾಗಿ ಗ್ರಾಮಸ್ಥರ ಮುಂದೆ ಅಸಹಾಯಕತೆ ತೋರುವ ದುಸ್ಥಿತಿ ನಿರ್ಮಾಣ ಮಾಡಿದರು. ಕೂಡಲೇ ಕಂಬ ಬದಲಿಸಿ ವಿದ್ಯುತ್ ನೀಡದಿದ್ದರೆ ಬೆಸ್ಕಾಂ ಕಚೇರಿ ಮುತ್ತಿಗೆ ಹಾಕುತ್ತೇವೆ ಎಂದು ಎಸ್. ಕೊಡಗಿಹಳ್ಳಿ ಗ್ರಾಪಂ ಸದಸ್ಯ ತುಳಸಿದಾಸ್ ಹೇಳಿದರು”

ಈ ಸಂದರ್ಭದಲ್ಲಿ ಸ್ಥಳೀಯರಾದ ಕುಮಾರ್, ಮಂಜುನಾಥ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...