ಅಚ್ಚರಿಯ ಘಟನೆ | ನವಜಾತ ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ

Date:

ಅಗಷ್ಟೇ ಜನಿಸಿದ್ದ ನವಜಾತ ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಚ್ಚರಿಯ ಘಟನೆ ಹುಬ್ಬಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಹಿಳೆಯೊಬ್ಬರು ತಮ್ಮ 2ನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ತೊಂದರೆ ಇಲ್ಲದೆ, ಸೆಪ್ಟೆಂಬರ್ 23ರಂದು ಹೆರಿಗೆಯಾಗಿ, ಗಂಡು ಮಗು ಜನಿಸಿತ್ತು. ಆದರೆ, ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದಿದ್ದವು ಎಂದು ವೈದ್ಯರು ತಿಳಿಸಿದ್ದಾರೆ.

ಶಿಶುವಿನ ದೇಹದಲ್ಲಿ ಬದಲಾವಣೆಗಳು ಕಾಣಿಸಿದ್ದರಿಂದ, ಆ ಮಗುವನ್ನು ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಭ್ರೂಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಟ್ಟುವಾಗಲೇ ನವಜಾತ ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಬೆಳೆಯುವುದನ್ನು ವೈದ್ಯಕೀಯ ಭಾಷೆಯಲ್ಲಿ Fetus in fetu ಎಂದು ಕರೆಯಲಾಗುತ್ತದೆ. ಇಂತಹ ಘಟನೆಗಳು ಈವರೆಗೆ ವಿಶ್ವದಾದ್ಯಂತ 200 ಪ್ರಕರಣಗಳು ದಾಖಲಾಗಿರಬುದು ಎಂದು ಹೇಳಲಾಗಿದೆ.

ಭ್ರೂಣದ ಅಂಗಗಳು ಜೀವಂತವಾಗಿಲ್ಲ. ಅಂತಹ ಭಾಗಗಳು ಮಗುವಿನ ದೇಹದಲ್ಲಿ ಬೇರೆಡೆ ಇರುವ ಸಾಧ್ಯತೆಯಿದೆ. ನವಜಾತ ಶಿಶುವಿನ ದೇಹದೊಳಗೆ ಅಸಹಜ ದ್ರವ್ಯರಾಶಿ ಬೆಳೆಯುವ ಅಪರೂಪದ ಸ್ಥಿತಿಯಾಗಿದೆ. ಈ ದ್ರವ್ಯರಾಶಿಯು ತಲೆಬುರುಡೆ, ಬೆನ್ನು, ಬಾಯಿಯ ಒಳಭಾಗದಂತಹ ಸ್ಥಳಗಳಲ್ಲಿ ಕಾಣಿಸಿಕೊಳ್ಳಬಹುದು. ಆದರೆ, ಇವು ಎಂದಿಗೂ ಸಂಪೂರ್ಣವಾಗಿ ಬೆಳವಣಿಗೆಯಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...