ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

Date:

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಜನಸೇವೆ ಶೈಕ್ಷಣಿಕ ಟ್ರಸ್ಟ್ ಅಧ್ಯಕ್ಷ ರಾಜಾ ಚನ್ನಪ್ಪ ನಾಯಕ, ಸುರಪುರದ ಐತಿಹಾಸಿಕ ವೃತ್ತವಾದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಬಲವಂತ ಬಹರಿ ಬಹದ್ದೂರ ಪ್ರತಿಮೆಯ ಐತಿಹಾಸಿಕ ವ್ಯಕ್ತಿಯ ವೃತ್ತದ ಸುತ್ತಲು ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಇಲ್ಲ. ಬಹದ್ದೂರ ಪ್ರತಿಮೆಯ ವೃತ್ತದ ಸುತ್ತಲೂ ಜಾಹೀರಾತುಗಳ ಪೋಸ್ಟರ್‌ಗಳನ್ನು ಹಚ್ಚಿ ಅದರ ಅಂದವನ್ನು ಹಾಳು ಮಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಈ ಬಗ್ಗೆ ಸುರಪುರ ನಗರಸಭೆಯ ಅಧಿಕಾರಿಗಳು ಗಮನ ಹರಿಸಬೇಕು” ಎಂದು ತಿಳಿಸಿದರು.

‘ಸುರಪುರದಿಂದ ವೆಂಕಟಾಪೂರಕ್ಕೆ ಹೋಗುವ ಮಾರ್ಗದಲ್ಲಿ ಡಿಗ್ನಿ ಅಗಸಿ ಹತ್ತಿರ ಸ್ಥಳೀಯರು ಮಣ್ಣು, ಕಸ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ತಂದು ಹಾಕಿ ಅದನ್ನು ಕಾಣದಂತೆ ಮಾಡುತ್ತಿದ್ದಾರೆ. ಕೂಡಲೆ ನಗರಸಭೆಯವರು ಅದನ್ನು ತೆಗೆಸಲು ಕಾರ್ಯ ಪ್ರವೃತ್ತರಾಗಬೇಕು. ತಕ್ಷಣವೇ ಈ ಕೆಲಸಗಳನ್ನು ಕೈಗೊಂಡು ಸ್ಮಾರಕಗಳ ಅಂದವನ್ನು ಹೆಚ್ಚುವಂತಹ ಕೆಲಸ ಮಾಡಬೇಕು” ಎಂದು ಅಗ್ರಹಿಸಿ, ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ತಿಂಗಳಾದರೂ ಮುಗಿಯದ ಚರಂಡಿ‌ ಕಾಮಗಾರಿ: ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ, ಜನಪ್ರತಿನಿಧಿಗಳು

ಈ ಸಂದರ್ಭದಲ್ಲಿ ರಾಜಾ ದೇವಿಂದ್ರ ನಾಯಕ, ಆಬಿದ್ ಹುಸೇನ್ ಪಗಡಿ, ಯಂಕಪ್ಪ ಕೋಸಗಿ, ಶರೀಫ್.ಎಮ್, ಶ್ರೀಕಾಂತ್ ಹೂಗಾರ, ಹಣಮಂತ್ರಾಯ ಕಬಾಡಗೇರಾ, ಮಹದೇವಪ್ಪ ಮಡಿವಾಳ್, ಮೆಹಬೂಬ್ ಪಟೇಲ್, ಸಾಲೇ ಸಾಬ್ ಅಗ್ನಿ, ಮಲ್ಲಪ್ಪ, ಪರಶುರಾಮ್, ವನ್ನಪ್ಪ, ಅಯ್ಯಪ್ಪ, ಈಶಪ್ಪ, ಬಸವರಾಜ್ ಗುಂಡಗುರ್ತಿ, ಮಲ್ಲಣ್ಣ ಗುಂಡಗುರ್ತಿ, ಕಲ್ಯಾಣಿ ಸ್ವಾಮಿ,ಚನ್ನಬಸಯ್ಯ ಹಿರೇಮಠ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...