ರಾಯಚೂರು | ಅಮಾನತುಗೊಂಡ ಬಸ್ ಚಾಲಕ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನ

Date:

ಕೆಎಸ್ಆರ್‌ಟಿಸಿ ಬಸ್ ಚಾಲಕ ಅಬ್ದುಲ್ ರಫಿ ಆನೆಹೊಸೂರ ಅವರನ್ನು ವಿನಾಕಾರಣ ಅಮಾನತುಗೊಳಿಸಿದ್ದನ್ನು ಖಂಡಿಸಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಿಂಗಸುಗೂರು ಬಸ್ ಡಿಪೋ ಕಚೇರಿ ಮುಂಭಾಗದಲ್ಲಿ ನಡೆದಿದೆ.

ಬಸ್ ಚಾಲಕ ಅಬ್ದುಲ್ ರಫಿ ಆನೆಹೊಸುರ ಅವರು ಸಮಯ ಪಾಲನೆ ಮಾಡುತ್ತಿಲ್ಲ, ಅಧಿಕಾರಿಗಳಿಗಳೊಂದಿಗೆ ಅಸಭ್ಯ ವರ್ತನೆ ಸೇರಿದಂತೆ ಹಲವು ಆರೋಪದಡಿ ಅವರನ್ನು ಅಮಾನತು ಮಾಡಲಾಗಿತ್ತು.

ಈ ಕುರಿತು ಚಾಲಕ ಅಬ್ದುಲ್ ರಫಿ ಮಾತನಾಡಿ, ‘ಡಿಪೊ ವ್ಯವಸ್ಥಾಪಕರ ನಡತೆ ಸರಿ ಇಲ್ಲ, ಇಲ್ಲದ ಸಲ್ಲದ ಸುಳ್ಳು ಆರೋಪ ಮಾಡಿ ಕಿರುಕುಳ ನೀಡುತ್ತಾರೆ. ಇವರ ಆಡಳಿತದಲ್ಲಿ ಒಂದು ವರ್ಷದಲ್ಲಿ ಸುಮಾರು 23 ಸಿಬ್ಬಂದಿಗಳನ್ನು ಅಮಾನತು ಮಾಡಿದ್ದಾರೆ. ಇದರಿಂದ ನೌಕರರು ಕುಟುಂಬ ನಿರ್ವಹಿಸಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಓರ್ವ ಬಸ್ ಚಾಲಕ 33 ಸಾವಿರ ಕಿ ಮೀ. ಬಸ್ ಓಡಿಸುವ ನಿಯಮ ಇದೆ. ಆದರೆ ಉತ್ತಮ ಅಧಿಕಾರಿ ಎನ್ನಿಸಿಕೊಳ್ಳಲು 50 ಸಾವಿರ ಕಿ.ಮೀ.ತನಕ ಬಸ್ ಕ್ರಮಿಸಬೇಕು ಎಂದು ನೌಕರರನ್ನು ದುಡಿಸಿಕೊಳ್ಳುತ್ತಾರೆ. ದಿನಕ್ಕೆ 330 ಕಿ.ಮೀ. ನಿಯಮ ಪ್ರಕಾರವಾದರೆ ಇವರು ಒಂದು ದಿನಕ್ಕೆ 430ಕಿ.ಮೀ. ಓಡಿಸಬೇಕು. ಹೀಗೆ ಅಗತ್ಯಕ್ಕಿಂತ ಹೆಚ್ಚಿನ ಕೆಲಸ ಮಾಡಿಸುಕೊಳ್ಳುತ್ತಾರೆ. ಹೇಳಿದಂತೆ ಮಾಡದಿದ್ದರೆ ಬೆದರಿಕೆ ಹಾಕುತ್ತಾರೆʼ ಎಂದು ಆರೋಪಿಸಿದ್ದಾರೆ.

ʼಈ ಬಗ್ಗೆ ಅನೇಕ ಸಲ ಮನವಿ ಮಾಡಿದರೆ ಇದೆಲ್ಲಾ ಸಮಸ್ಯೆ ಹೇಳಬಾರದು ಎಂದು ಗದರಿಸುತ್ತಾರೆ.ಇಲ್ಲಾಂದ್ರೆ ಅಮಾನತು ಮಾಡುವೆ ಎಂದು ಬೆದರಿಕೆ ಒಡ್ಡುತ್ತಾರೆ. ಇಂತಹ ಕಿರುಕುಳ ಎಲ್ಲಾ ಬಸ್ ಚಾಲಕರಿಗೆ, ಸಿಬ್ಬಂದಿಗಳು ಅನುಭವಿಸುತ್ತಿದ್ದಾರೆ. ಆದರೆ ನೌಕರಿ ಹೋಗುತ್ತದೆ ಎಂಬ ಹೆದರಿಕೆಯಿಂದ ಮೌನವಾಗಿದ್ದಾರೆ. ಈ ಕುರಿತು ತನಿಖೆ ನಡೆದರೆ ಬಸ್‌ ಡಿಪೊ ವ್ಯವಸ್ಥಾಪಕರು ಎಲ್ಲಾ ವಿಷಯಗಳು ಬಯಲಾಗುತ್ತವೆʼ ಎಂದರು.

ಈ ಕುರಿತು ಎಲ್ಲಾ ತನಿಖೆ ನಮಗೆ ದೊರಕಿಸಿಕೊಡಬೇಕು. ಅಮಾನತುಗೊಂಡ ಕಾರಣ ನಮ್ಮ ಕುಟುಂಬ ಬೀದಿಗೆ ಬಂದಿದೆ. ನಮ್ಮ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಸಿದ ಹೊಟ್ಟೆ ತಣಿಸುವ ʼರಿಶೈನ್‌ʼ ಯುವಕರು

ಕಾರ್ಮಿಕ ಮುಖಂಡ ರಮೇಶ್ ವೀರಾಪುರ ಮಾತನಾಡಿ, ‘ಕೆಲವು ತಿಂಗಳಿಂದ ಸಾರಿಗೆ ನೌಕರರ, ಸಿಬ್ಬಂದಿಗಳಿಗೆ ಡಿಪೋ ಮ್ಯಾನೇಜರ್ ಅವರು ಸಣ್ಣಪುಟ್ಟ ಕೆಲಸಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಗಮನಕ್ಕೆ ಬಂದಿತ್ತು. ಇವರ ಆಡಳಿತದಲ್ಲಿ ಸುಮಾರು 20ಕ್ಕೂ ಅಧಿಕ ‌ಸಿಬ್ಬಂದಿಗೆ ಅಮಾನತು ಮಾಡಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಡಿಪೋ ವ್ಯವಸ್ಥಾಪಕರಿಗೆ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...