ಬೀದರ್‌ | 146 ಸಂಸದರ ಅಮಾನತು: ಕೇಂದ್ರದ ಸರ್ವಾಧಿಕಾರಿ ಧೋರಣೆಗೆ ಸಿಪಿಐ ಖಂಡನೆ

Date:

ಸಂಸತ್‌ ಭವನದ ಮೇಲೆ ನಡೆದ ದಾಳಿಯ ಕುರಿತು ಪ್ರಶ್ನಿಸಿದ ಸಂಸದರಿಗೆ ಸಮಂಜಸವಾದ ಪ್ರತಿಕ್ರಿಯೆ ನೀಡದೇ 146 ಸಂಸದರನ್ನು ಅಮಾನತುಗೊಳಿಸಿ ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆಯನ್ನು ಸಾಬೀತುಪಡಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ಸ್‌ವಾದಿ) ಹುಮನಾಬಾದ ತಾಲೂಕು ಶಾಖೆಯ ಪದಾಧಿಕಾರಿಗಳು ಪಟ್ಟಣದ ಡಾ.ಬಿ.ಆರ್.‌ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

“ಸಂಸತ್ತಿನ ಒಳಗೆ ಅಪರಿಚಿತರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಭದ್ರತೆಯ ಕುರಿತು ಸದಸ್ಯರು ಎತ್ತಿದ ಪ್ರಶ್ನೆಯು ವಾಸ್ತವ ನೆಲೆಗಟ್ಟಿನ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವ ದೇಶದಲ್ಲಿ ಸಾಂವಿಧಾನಿಕ ಮೌಲ್ಯ ಅನುಸರಿಸಿ ಆಡಳಿತ ನಡೆಸಬೇಕು. ಆದರೆ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುವ ಪ್ರಧಾನಿ ನರೇಂದ್ರ ಮೋದಿಯವರು ದಾಳಿಯ ಕುರಿತು ಪ್ರಶ್ನಿಸಿದವರನ್ನು ಕ್ರೌರ್ಯದ ರೀತಿಯಲ್ಲಿ ಹೊರಹಾಕಿದ್ದಾರೆ. ಇದರಿಂದ ತಮ್ಮದು ಫ್ಯಾಸಿಸ್ಟ್ ಪಕ್ಷವೆಂಬುದನ್ನು ಅವರು ಸಾಬೀತು ಮಾಡಿದ್ದಾರೆ” ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್‌ ದಾಳಿ ಘಟನೆ ಹಾಗೂ ಸಂಸದರನ್ನು ಅಮಾನತುಗೊಳಿಸಿದ ಕೇಂದ್ರದ ನಡೆಯನ್ನು ಭಾರತಿಯರೆಲ್ಲರೂ ತೀವ್ರವಾಗಿ ಖಂಡಿಸಬೇಕಾಗಿದೆ. ಕೇಂದ್ರ ಸರಕಾರದ ಈ ನಡೆ ಭಾರತದ ಒಕ್ಕೂಟ ವ್ಯವಸ್ಥೆಯನ್ನು ತಿರಸ್ಕರಿಸಿ ಭಾರತಕ್ಕೆ ಅಪಮಾನ ಮಾಡಿದಂತೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮದುವೆಗೆ ಒಪ್ಪದ ಪೋಷಕರು : ನೇಣಿಗೆ ಶರಣಾದ ಪ್ರೇಮಿಗಳು

ಪ್ರತಿಭಟನೆಯಲ್ಲಿ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಬಸವರಾಜ ಮಾಳಗೆ ಸೇರಿದಂತೆ ಪ್ರಮುಖರಾದ ಗೌಸುದ್ದಿನ್, ಪ್ರಭು ಸಂತೋಷ್ಕರ್‌, ಶಶಿಕಾಂತ ಡಾಂಗೆ, ಅಂಬುಬಾಯಿ ಮಾಳಗೆ, ನಬಿಸಾಬ್‌ , ಜೇಮ್ಸ್‌, ರಾಜಪ್ಪ, ಶೇಖ ಅಲಿ ಅರ್ಜುನ್‌, ಕಿರಣಕುಮಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...