ಬೀದರ್‌ | ಬಸವಕಲ್ಯಾಣದಲ್ಲಿ ಅ.19, 20ರಂದು ʼಸ್ವಾಭಿಮಾನಿ ಕಲ್ಯಾಣ ಪರ್ವʼ

Date:

ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅಕ್ಟೋಬರ್ 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ಬೀದರ್‌ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼ ಕಲ್ಯಾಣ ಪರ್ವದಲ್ಲಿ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಬಸವ ಭಕ್ತರು ಪಾಲ್ಗೊಳ್ಳುತ್ತಿದ್ದಾರೆʼ ಎಂದರು.

ʼಅ.19 ರಂದು ಬೆಳಿಗ್ಗೆ 5 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆ, ನಂತರ 11 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಸವ ಚಿಂತನ ಪ್ರಭೆಯ ಮೂಲಕ ವೇದಿಕೆಯ ದೈವೀಕರಣ ನಡೆಯಲಿದೆ. ಸಂಜೆ 5 ಕ್ಕೆ ಧರ್ಮಚಿಂತನ ಗೋಷ್ಠಿ-1 ಜರುಗಲಿದೆ. ಅ.20 ರಂದು ಬೆಳಿಗ್ಗೆ 8ಕ್ಕೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆ.10:30 ಕ್ಕೆ ಶರಣ ವಂದನೆ 770 ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆʼ ಎಂದರು ವಿವರಿಸಿದರು.

ʼಅ.20ರಂದು ಮಧ್ಯಾಹ್ನ 12 ರಿಂದ 2 ರವರೆಗೆ ಮಹಿಳಾಗೋಷ್ಠಿ 3 ರಿಂದ 5 ರವರೆಗೆ ಯುವಗೋಷ್ಠಿ ನಡೆಯಲಿದ್ದು, ಅಂದು ಸಾಯಂಕಾಲ ಸಮಾರೋಪ ಸಮಾರಂಭವಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಬಸವ ಭಕ್ತರಿಗೆ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕುʼ ಎಂದು ಶ್ರೀಗಳು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ಬಸವ ಮಂಟಪದ ಸಂಚಾಲಕರು ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ರಾಷ್ಟ್ರೀಯ ಅಧ್ಯಕ್ಷೆ ಪೂಜ್ಯ ಸತ್ಯಾದೇವಿ ಮಾತಾಜಿ ಮಾತನಾಡಿ, ʼಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಕಲ್ಯಾಣದ ಹಬ್ಬ. ಪ್ರತಿಯೊಬ್ಬರೂ ಭಾಗವಹಿಸುವುದು ತಮ್ಮ ಆದ್ಯ ಕರ್ತವ್ಯ. ಮಹಿಳಾ ಗೋಷ್ಠಿಯಲ್ಲಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಚರ್ಚೆ ನಡೆಯಲಿದೆ. ಹೀಗಾಗಿ ಶರಣ ಬಂಧುಗಳು ತನು, ಮನ, ಧನ, ಸಮಯ, ಅಭಿಮಾನ ದಾಸೋಹಗೈದು ಕಾರ್ಯಕ್ರಮ ಯಶಸ್ವಿಗೊಳಿಸಬೇಕುʼ ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಲಿಂಗಾಯತ ಧರ್ಮ ಮಹಾಸಭಾದ ಔರಾದ ತಾಲೂಕಾಧ್ಯಕ್ಷ ಕಲ್ಲಪ್ಪ ದೇಶಮುಖ, ಪ್ರಮುಖರಾದ ಬಸವಂತರಾವ ಬಿರಾದಾರ, ರವಿಕಾಂತ ಬಿರಾದಾರ, ನಿರ್ಮಲಾ ನಿಲಂಗೆ, ಮಲ್ಲಿಕಾರ್ಜುನ ಬಿರಾದಾರ ಸಂಗಮ, ಮಲ್ಲಿಕಾರ್ಜುನ ಶಹಾಪುರ, ಓಂಪ್ರಕಾಶ ರೊಟ್ಟೆ, ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...