ಕಾವೇರಿ | ಸರ್ಕಾರ ಉಡಾಫೆ ಮುಂದುವರೆಸಿದರೆ ಜನ ದಂಗೆ ಏಳುತ್ತಾರೆ : ಬೊಮ್ಮಾಯಿ ಎಚ್ಚರಿಕೆ

Date:

  • ರಾಜ್ಯ ಸರ್ಕಾರ ನೀರಿನ ಗ್ಯಾರಂಟಿ ಕೊಡಲಿ: ಬಸವರಾಜ ಬೊಮ್ಮಾಯಿ
  • ‘ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ’

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

ಕಾವೇರಿ ವಿಚಾರದಲ್ಲಿ ಬಿಜೆಪಿಯ ಮುಂದಿನ ಹೋರಾಟದ‌ ಕುರಿತು ಪಕ್ಷದ ಕಚೇರಿಯಲ್ಲಿ ಶುಕ್ರವಾರ ತಮ್ಮ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾವೇರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ” ಎಂದರು.

“ಸುಪ್ರೀಂಕೋರ್ಟ್‌ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನೀರು ಬಿಡುವ ಪರಿಸ್ಥಿತಿಗೆ ತಂದಿದೆ.‌ ಇಷ್ಟೆಲ್ಲ ಆದರೂ ರಾಜ್ಯದ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಅಂತ ಹೇಳಿಲ್ಲ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ‌ ಗ್ಯಾರಂಟಿ ಬೇಕು

“ರಾಜ್ಯ ಸರ್ಕಾರ ಆರಂಭದಿಂದಲೂ ಗ್ಯಾರಂಟಿ ಹೆಸರು ಹೇಳಿ ಈಗ ಕಂಡಿಷನ್ ಹಾಕಿ ಅರ್ಧಂಬರ್ಧ ಜಾರಿ ಮಾಡುತ್ತದೆ. ಬೆಂಗಳೂರು ಅಂತಾರಾಷ್ಟ್ರೀಯ ನಗರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತೆತ್ತಿದರೆ ಬ್ರಾಂಡ್ ಬೆಂಗಳೂರು ಅಂತ ಹೇಳುತ್ತಾರೆ. ಆದರೆ, ಬೆಂಗಳೂರಿನ ಕುಡಿಯುವ ನೀರಿನ ಬಗ್ಗೆ ಮಾತನಾಡುವುದಿಲ್ಲ. ನಮಗೆ ಬೇಕಿರುವುದು ನೀರಿನ‌ ಗ್ಯಾರಂಟಿ” ಎಂದರು.

“ಬೆಂಗಳೂರಿಗೆ ಪ್ರತ್ಯೇಕವಾಗಿ 4.5 ಟಿಎಂಸಿ ನೀರು ಕೊಡಲು ಟ್ರಿಬುನಲ್ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಲ್ಲಿಯೂ ಪ್ರಸ್ತಾಪ ಮಾಡುತ್ತಿಲ್ಲ. ತಮಿಳುನಾಡು ಹೆಚ್ಚುವರಿ ನೀರು ಬಳಕೆ ಮಾಡಿ ಅಕ್ರಮವಾಗಿ ಬೆಳೆ ಬೆಳೆದಿದ್ದು, ಅದರ ಬಗ್ಗೆ ರಾಜ್ಯ ಸರ್ಕಾರ ಮಾತನಾಡಿಲ್ಲ. ನಮಗೆ ಮುಂಗಾರು ಮುಕ್ತಾಯವಾಗಿದೆ, ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಮಳೆ ಬರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು. ಈ ವಿಷಯ ಹೇಳಿದರೆ ನಾವು ರಾಜಕಾರಣ ಮಾಡುತ್ತೇವೆ ಎನ್ನುತ್ತಾರೆ. ಇದರ ಮೇಲೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕಾರಣ ಮಾಡುತ್ತಾರೆ. ತಮಿಳುನಾಡು ಸಿಎಂ ಜೊತೆ ಮಾತನಾಡಿ ಅಂದರೆ ಮಾತನಾಡುವುದಿಲ್ಲ. ಅದರ ಬದಲು ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಪರಿಣಿತರು” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

ಸರ್ಕಾರದ ವಿರುದ್ಧ ಪ್ರತಿಭಟನೆ

“ಬರ ಬಂದರೆ ಕೇಂದ್ರದ ಕಡೆ ತೊರಿಸುತ್ತಾರೆ. ರಾಜ್ಯ ಸರ್ಕಾರ ಪರಿಹಾರ ಕೊಡಬಾರದು ಎಂದು ಏನು ನಿಯಮ ಇಲ್ಲ. ನಾವು ಪ್ರವಾಹ ಬಂದಾಗ ಕೇಂದ್ರದ ಎರಡು ಪಟ್ಟು ಪರಿಹಾರ ಕೊಟ್ಡಿದ್ದೇವೆ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ನೀವು ಜನರಿಗೆ ದ್ರೋಹ ಮಾಡಿದ್ದೀರಿ, ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಾಳೆ (ಶನಿವಾರ) ಪ್ರತಿಭಟನೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ 28 ಲೋಕಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಹೇಳಿದರು.

“ಕಾವೇರಿ ನೆಲ ಜಲ ವಿಚಾರ ಬಂದಾಗ ನಾವು ಒಗಟ್ಟು ಪ್ರದರ್ಶನ ಮಾಡಬೇಕು. ಆ ದೃಷ್ಟಿಯಿಂದ ನಾವು ಸಹಕಾರ ಕೊಡುತ್ತೇವೆ. ಸರ್ವಪಕ್ಷದ ಸಭೆಯಲ್ಲಿ ನೀರು ಬಿಡುವುದಿಲ್ಲ ಎಂದು ತೆಗೆದುಕೊಂಡ ತೀರ್ಮಾನ ಪಾಲನೆ ಮಾಡದಿದ್ದರೆ ನಾವು ಮಾತನಾಡುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಇವರು ಮಧ್ಯಂತರ ಅರ್ಜಿ (ಐಎ) ಹಾಕಲಿಲ್ಲ” ಎಂದರು.

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಬೇಕಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಹಿಂದೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತಂದಾಗ ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ. ಅದರ ಬದಲು ಈಗಲಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿ ಇದುವರೆಗೂ ವಿಚಾರಣೆಯಲ್ಲಿ ಚರ್ಚೆಗೆ ಬಾರದ ಬೆಂಗಳೂರಿನ ಕುಡಿಯುವ ನೀರು, ತಮಿಳುನಾಡು ಹೆಚ್ಚಿಗೆ ನೀರು ಬಳಕೆ ಮಾಡಿಕೊಂಡಿದ್ದು, ನಮ್ಮಲ್ಲಿ ಮುಂಗಾರು ಮುಕ್ತಾಯವಾಗಿದ್ದು, ತಮಿಳುನಾಡಿಗೆ ಹಿಂಗಾರು ಮಳೆ ಬರುವ ವಿಚಾರಗಳನ್ನು ಸುಪ್ರೀಂ ಕೋರ್ಟ್ ಮುಂದೆ ಹಾಕಬೇಕು. ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಸಾಧ್ಯತೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...