ಮಂಡ್ಯ | ಸೆ.13ಕ್ಕೆ ‘ಸ್ವರಾಜ್ ಉತ್ಸವ’ : ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ‘ಗಾಂಧೀಜಿಯವರ ಕನಸಿನಂತೆ ಸ್ವಾವಲಂಬನೆ, ಸ್ವಾಭಿಮಾನ, ಶಾಶ್ವತ ಅಭಿವೃದ್ಧಿ ತತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಇದೇ ಸೆ.13 ರಂದು ‘ಸ್ವರಾಜ್ ಉತ್ಸವ‘ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ 30 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. 10 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸ್ವರಾಜ್ ಉತ್ಸವವು ಪಾಂಡವಪುರದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕಾಗಿ ರೂಪಿಸಿದ್ದ ಆಪ್ ಮೂಲಕ ಹಲವು ಮಾಹಿತಿಗಳು ಲಭ್ಯವಾಗಿವೆ. ಮುಖ್ಯವಾಗಿ ಪಾಂಡವಪುರ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೇ.40% ರಷ್ಟು ಸಕ್ಕರೆ ಖಾಯಿಲೆ ರೋಗಿಗಳು ಇರುವ ಮಾಹಿತಿ ಲಭ್ಯವಾಗಿದೆ. ಆದುದರಿಂದ, ನಾವು ಮುಂದೆ ಯಾವ ರೀತಿಯ ಯೋಜನೆ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಹಮ್ಮಿಕೊಂಡಿದ್ದ ಸೆಲ್ಕೋ ಮೇಳದಲ್ಲಿ ಸುಮಾರು 600 ರೈತರು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ, 1300 ಜನ ಭಾಗವಹಿಸಿದರು. ಅದರಲ್ಲಿ ನೂರಾರು ರೈತರು ಸೌರಶಕ್ತಿ ಆಧಾರಿತ ಬಹುಪಯೋಗಿ ಯಂತ್ರಗಳನ್ನು ಪಡೆದಿದ್ದಾರೆ ಎಂದು ವಿವರಿಸಿದರು.

5240

“ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಹುಟ್ಟೂರಾದ ಕ್ಯಾತನಹಳ್ಳಿಯಲ್ಲಿ ಈಗಾಗಲೇ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಮಾದರಿ ಶಾಲೆಯನ್ನು ಸ್ಥಾಪಿಸಲಾಗುತ್ತಿದೆ. ಇದೇ ರೀತಿ ಕ್ಷೇತ್ರದಾದ್ಯಂತ 5 ಮಾದರಿ ಶಾಲೆಗಳನ್ನು ಸ್ಥಾಪಿಸುವ ಉದ್ಧೇಶ ಹೊಂದಿದ್ದೇವೆ. ನಗರ ಮಟ್ಟದ ಎಲ್ಲಾ ಮೂಲ ಸೌಕರ್ಯಗಳನ್ನು ಒಳಗೊಂಡ ಮಾದರಿ ಶಾಲೆಗಳಲ್ಲಿ ಬಡವರ ಮಕ್ಕಳು ವ್ಯಾಸಂಗ ಮಾಡುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕೃಷಿ, ಆರೋಗ್ಯ, ಆರ್ಥಿಕ ಸ್ವಾವಲಂಬನೆ, ಯುವಜನ ಅಭಿವೃದ್ಧಿ, ತಂತ್ರಜ್ಞಾನ, ಉದ್ಯಮಶೀಲತೆ, ಶಿಕ್ಷಣ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗೂ ನೇರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. 50ಕ್ಕೂ ಹೆಚ್ಚು ಮಳಿಗೆಗಳು ಪಾಂಡವ  ಕ್ರೀಡಾಂಗಣದಲ್ಲಿ ಸ್ಥಾಪನೆಯಾಗಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಮಾಹಿತಿ, ಜಾಗೃತಿ ಮೂಡಿಸಲಿವೆ.

ಈ ಸುದ್ದಿ ಓದಿದ್ದೀರಾ? ಟಿ. ನರಸೀಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ; ದಲಿತ ಯುವಕನಿಗೆ ಮನಬಂದಂತೆ ಥಳಿಸಿದ ಪೊಲೀಸರು

“ಹಳ್ಳಿಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿಗಳ ನಡುವೆಯೂ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ಮಾರ್ಗಗಳನ್ನು ಜನರಿಗೆ ತಿಳಿಸುವುದು ಈ ಉತ್ಸವದ ಮುಖ್ಯ ಗುರಿ, ಸುಸ್ಥಿರ ಕೃಷಿ, ಮಿಶ್ರ ಬೆಳೆ ಪದ್ಧತಿ, ನೈಸರ್ಗಿಕ ಕೃಷಿ, ಸ್ಥಳೀಯ ಕೈಗಾರಿಕೆಗಳ ಉತ್ತೇಜನ, ಮಹಿಳೆಯರ ಸಬಲೀಕರಣ ಹಾಗೂ ಪರಿಸರ ಸ್ನೇಹಿ ಬದುಕಿನ ಕುರಿತು ಈ ಕಾರ್ಯಕ್ರಮ ಜನರಿಗೆ ದಾರಿದೀಪವಾಗಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...