ವಿದ್ಯಾರ್ಥಿ ನಿಲಯಗಳ ಬೆಡ್ ಶೀಟ್ ಕಾಳಸಂತೆಯಲ್ಲಿ ಮಾರಾಟ ಮಾಡಿರುವರ ಮೇಲೆ ಕ್ರಮ ಕೈಗೊಳ್ಳಿ

Date:

ಬಂಗಾರಪೇಟೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದು ಬಂಗಾರಪೇಟೆ-ಕೆಜಿಎಫ್ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸುಮಾರು 17 ವಿದ್ಯಾರ್ಥಿ ನಿಲಯಗಳಿದ್ದು, ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉಜ್ವಲಗೊಳಿಸಲು ಉನ್ನತ ವಿದ್ಯಾವಂತರಾಗಿ ತಮ್ಮ ಜೀವನಗಳನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿನಿಲಯಗಳಲ್ಲಿ ದಾಖಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ವಾರ್ಡ್ ನ್-ಅಡುಗೆ ಸಹಾಯಕರು ಮಕ್ಕಳಿಗೆ ಸರ್ಕಾರದಿಂದ ಬರುವ ಮೂಲಭೂತ ಸೌಕರ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಮಕ್ಕಳ ಹಕ್ಕನ್ನು ಕಸಿಯುತ್ತಿದ್ದಾರೆ ಎಂದು ಅಂಬೇಡ್ಕರ್ ವೀರಸೇನೆ ಅಧ್ಯಕ್ಷ ಭಟ್ರಕುಪ್ಪ ಅರುಣ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಕುಮಾರಿ ಅವರಿಗೆ ಮನವಿ ನೀಡಿ ಬಟ್ರಕುಪ್ಪ ಅರುಣ್ ಒತ್ತಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಅಂಬೇಡ್ಕರ್ ಬಾಲಕಿಯರ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಲಯದ ವಾರ್ಡ್ನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಲೀಲ ಎಂಬುವವರು ಅಲ್ಲಿನ ಮಕ್ಕಳ ಬೆಡ್‌ಗಳು ಹಾಗೂ ಪ್ಯಾನ್ ಇತ್ಯಾಧಿ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವಿಡೀಯೋಗಳು ಅಲೆದಾಡಿರುತ್ತದೆ.

ಆದರೆ ಶಿವಲೀಲ ಅವರು ಮಹೇಶ್ ಅಡುಗೆಯವರಿಗೆ ಇಲ್ಲಿನ ವಸ್ತುಗಳನ್ನು ನೀಡಿದ್ದೇನೆ ಎಂದು ತಿಳಿಸಿದ್ದು ಸಹಾಯಕ ನಿರ್ದೇಶಕರಿಗೆ ಯಾವುದೇ ರೀತಿ ಪತ್ರ ವ್ಯವಹಾರ ಹಾಗೂ ಅನುಮತಿ ಪಡೆಯದೆ ಇಲ್ಲಿನ ವಸ್ತುಗಳನ್ನು ಮಾರಾಟ ಮಾಡಿರುವುದು ಸರ್ಕಾರದ ಕೆಲಸವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ. ಮಹೇಶ್ ಅವರು ಶಿವಲೀಲ ಅವರಿಗೆ ನೀಡಿರುವ ಪತ್ರದಲ್ಲಿ ನಾನು ಪ್ರಭಾರ ವಾರ್ಡನ್ ಎಂದು ಸಹಿ ಮಾಡಿ ಇಲ್ಲಿನ ವಸ್ತುಗಳನ್ನು ಎತ್ತುವಳಿ ಮಾಡಿಕೊಂಡು ಹೋಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್ ಅವರಿಗೆ ವಾರ್ಡನ್ ಆಗಿ ಮುಂಬಡ್ತಿ ನೀಡಿ ಆದೇಶ ಮಾಡಿರುವುದು ಯಾರು? ಆದರೆ ಇಷ್ಟೆಲ್ಲಾ ನಡೆದ ತಕ್ಷಣ ಶಿವಲೀಲ ಅವರನ್ನು ಕೂಡಲೇ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂಬುದು ಪ್ರಶ್ನೆಯಾಗಿದೆ.

ಇದರ ಬಗ್ಗೆ ಸವಿಸ್ತಾರವಾಗಿ ತನಿಖೆ ಮಾಡಿ ಶಿವಲೀಲ ವಾರ್ಡ್ನ್ ಹಾಗೂ ಮಹೇಶ್ ಅಡುಗೆಯವರನ್ನು ಈ ಕೂಡಲೇ ಅಮಾನತ್ತು ಮಾಡಿ ಸರ್ಕಾರದ ಕೆಲಸ ದುರುಪಯೋಗಪಡಿಸಿಕೊಂಡಿರುವುದರ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ನೀಡಿ ಇವರನ್ನು ಕೆಲಸದಿಂದ ವಜಾ ಮಾಡಬೇಕೆಂದು ಸಂಘಟನೆಯು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ..? ಒಳ ಮೀಸಲಾತಿ:ಬೆಂಗಳೂರಿನ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ ಮಾದಿಗ ಮುಖಂಡರುಗಳು

10 ದಿನಗಳೊಳಗೆ ತಾವು ಕ್ರಮ ಕೈಗೊಳ್ಳದೆ ಇಲ್ಲವಾದಲ್ಲಿ ಇಲಾಖೆ ಮುಂಭಾಗ ಅನಿಧಿಷ್ಠಾವಧಿ ಧರಣಿಯನ್ನು ಹಮ್ಮಿಕೊಳ್ಳಲಾಗುವುದೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಂಬರೀಶ್, ಸುಮಂತ್, ರವಿಕುಮಾರ್, ಹಾಗೂ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...