ಚಿಕ್ಕಬಳ್ಳಾಪುರ | ಯಶ್ವಂತ್‌ ಅಕಾಡೆಮಿಯ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಸುಗ್ಗಿ ಯಶಸ್ವಿ

Date:

ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶಾಲಾ ಬ್ಯಾಗ್ ವಿತರಣೆ ಹಾಗೂ ಸಾಂಸ್ಕೃತಿಕ ಸುಗ್ಗಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಸಂಸ್ಥೆಯ ಸಾಮಾಜಿಕ ಸೇವೆಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಯಶ್ವಂತ್‌ ಅಕಾಡೆಮಿ ಅಧ್ಯಕ್ಷ ಮಂಚನಬೆಲೆ ಶ್ರೀನಿವಾಸ್‌ ಮಾತನಾಡಿ, ಕಳೆದ 16 ವರ್ಷಗಳಿಂದ ಸಮಾಜದ ಬಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಬ್ಯಾಗ್‌ ವಿತರಣೆ ಸೇರಿದಂತೆ ಇತ್ಯಾದಿ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಸಂಸ್ಥೆ ನಡೆಸಿಕೊಂಡು ಬರುತ್ತಿದೆ. ಪ್ರತಿಭಾನ್ವಿತ ಬಡ ಮಕ್ಕಳಿಗಾಗಿ ಸಾಂಸ್ಕೃತಿಕ ವೇದಿಕೆಯನ್ನು ಸೃಷ್ಟಿಸಿ, ಮಕ್ಕಳಲ್ಲಿನ ಕಲೆಯನ್ನು ಹೊರ ತೆಗೆಯುವಲ್ಲಿ ಸಂಸ್ಥೆ ಮುಂದೆಜ್ಜೆಯಿಡುತ್ತಿದೆ. ಬಡ ಕಲಾವಿದರಿಗೆ ವೇದಿಕೆ ಒದಗಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲ ಸಂಘದ ಜಂಟಿ ಕಾರ್ಯದರ್ಶಿ ಅಭಿಲಾಶ್ ಕೆ.ವಿ ಮಾತನಾಡಿ, ಕಲೆ ಯಾರಪ್ಪನ ಸ್ವತ್ತಲ್ಲ. ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊದಲನೆಯ ಸ್ಥಾನದಲ್ಲಿ ಇರುವಂತಹ ಯಶವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ಕಾರ್ಯ ಶ್ಲಾಘನೀಯ. ಜಾತ್ಯಾತೀತವಾಗಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಕಲಾ ವೇದಿಕೆ ರೂಪಿಸಿಕೊಡುತ್ತಿರುವ ಸಂಸ್ಥೆಯ ಕಾರ್ಯ ಅಭಿನಂದನಾರ್ಹ ಎಂದು ಹೊಗಳಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ರಾಜಕಾಂತ್‌ ಮಾತನಾಡಿ, ಸಮಾಜ ಸೇವೆಯ ಮೂಲಕ ಮಾನವೀಯತೆಯನ್ನು ಮೆರೆಯುತ್ತಿರುವ ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಆಶಿಸಿದರು.

ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಮಣಪ್ಪ ಮಾತನಾಡಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಸಮಾರಂಭದಲ್ಲಿ ಹೈಕೋರ್ಟ್‌ ವಕೀಲ ಪಾವಗಡ ಶ್ರೀರಾಮ್‌, ಗುಡಿಬಂಡೆ ಕಸಾಪ ಅಧ್ಯಕ್ಷ ಪ್ರೆಸ್‌ ಸುಬ್ಬರಾಯಪ್ಪ, ಎಂ.ಪಿ.ಉಪೇಂದ್ರ, ಮಂಚಲಬೆಲೆ ಗ್ರಾಪಂ ಸದಸ್ಯ ಮಧು, ಅಹಿಂದ ಜನಪದ ವೇದಿಕೆ ಜಿಲ್ಲಾಧ್ಯಕ್ಷ ಕೃಷ್ಣಾಚಾರಿ, ವರುಣ ಸೇವಾ ಟ್ರಸ್ಟ್‌ ಅಧ್ಯಕ್ಷ ಉಮೇಶ್‌ ಜಿ, ನಗರ ಠಾಣೆ ಆರಕ್ಷಕ ಉಪನಿರೀಕ್ಷಕ ನಂಜುಂಡಯ್ಯ ಹೆಚ್‌ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಕಲಾಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...